ಕಾವೇರಿ ಆದೇಶ: ಕೆಲವು ಪ್ರಶ್ನೋತ್ತರಗಳು



ಮೂಲ: ರಾಮಸ್ವಾಮಿ. ಆರ್. ಐಯ್ಯರ್ 
ಅನುವಾದ: ಎಂ.ಎಸ್.ಶ್ರೀರಾಮ್.

ಬಹಳ ದಿನಗಳಿಂದ ನಿರೀಕ್ಷಿಸಿದ್ದ ಕಾವೇರಿ ಆಯೋಗದ ಅಂತಿಮ ತೀರ್ಪು ಕಡೆಗೂ ಬಂದಿದೆ. ಮೊದಲಿಗೆ ಆಯೋಗದಲ್ಲೇ ಕೆಲವು ಭಿನ್ನಾಭಿಪ್ರಾಯಗಳಿರಬಹುದೆಂಬ ಸೂಚನೆಗಳು ಇದ್ದುವಾದರೂ ಅದು ಸರ್ವಾನುಮತದ ತೀರ್ಪೆಂಬುದು ತೃಪ್ತಿಯ ಮಾತು. ಇದರಿಂದ ಆಯೋಗ ಮುಕ್ತಿ ಪಡೆದಂತಾಗಿದೆ. ಈ ಲೇಖನದ ಮುಖ್ಯ ಉದ್ದೇಶ ಆಯೋಗದ ತೀರ್ಪಿಗೆ ಪತ್ರಿಕೆಗಳಲ್ಲಿ ಬಂದಿರುವ ಕೆಲ ಪ್ರತಿಕ್ರಿಯೆಗಳನ್ನು ಪರಿಗಣಿಸಿ, ಅವುಗಳ ವಿಷಯದಲ್ಲಿ ಕೆಲವು ಸ್ಪಷ್ಟೀಕರಣಗಳನ್ನು ನೀಡುವುದಕ್ಕೆ ಸೀಮಿತವಾಗಿದೆ. ಕಾವೇರಿ ವಿವಾದದ ಇತಿಹಾಸ, ಅಲ್ಲಿಂದ ಮುಂದೆ ನಡೆದ ಪ್ರಕ್ರಿಯೆಗಳು ಮತ್ತು ಅಂತಿಮವಾಗಿ ಬಂದ ತೀರ್ಪು - ಈ ಘಟ್ಟಗಳನ್ನು ಮೊದಲಿಗೆ ಪರಿಶೀಲಿಸೋಣ. ನಂತರ ತೀರ್ಪಿನ ಹೂರಣವನ್ನು ಅರ್ಥಮಾಡಿಕೊಳ್ಳೋಣ. ತದನಂತರ ಈ ತೀರ್ಪಿಗೆ ಬಂದ ಪ್ರತಿಕ್ರಿಯೆಗಳನ್ನು ಚರ್ಚಿಸೋಣ. [ಈ ವಿವಾದದ ಇತಿಹಾಸವು ಇದೇ ಲೇಖಕರ ಹಿಂದಿನ ಬರಹಗಳ ಮೇಲೆ ಆಧರಿತವಾಗಿವೆ]
ಮುಂದೆ...