ಸಾಲಮನ್ನಾ ರಾಜಕಾರಣ


ಕರ್ನಾಟಕದಲ್ಲಿ ಚುನಾವಣೆಯ ಬಿಸಿಯೇರುತ್ತಿದ್ದಂತೆ, ಅನೇಕ ಹೊಸ ಆಶ್ವಾಸನೆಗಳು, ಹೊಸ ಭರವಸೆಗಳನ್ನು ವಿವಿಧ ಪಕ್ಷಗಳು ನೀಡುತ್ತಿವೆ. ಸಾಮಾನ್ಯವಾಗಿ ಗ್ರಾಮೀಣ ಮತದಾರರನ್ನು ಓಲೈಸಲು ಪಕ್ಷಗಳು ಕೃಷಿ, ಗ್ರಾಮೀಣ ಪ್ರದೇಶಗಳಿಗೆ ಸಂಬಂಧಿಸಿದ ಅನೇಕ ಯೋಜನೆಗಳನ್ನು ಕೈಗೊಳ್ಳುವ ಮಾತನ್ನಾಡುವುದನ್ನು ನಾವು ಕಂಡೇ ಇದ್ದೇವೆ. ಎಲ್ಲ ಪಕ್ಷಗಳಿಗೂ ಪ್ರಿಯವಾದ ಯೋಜನೆಗಳೆಂದರೆ ಕೃಷಿ ಸಂಬಂಧಿತವಾದ ಸಾಲವನ್ನು ಮನ್ನಾ ಮಾಡುವುದು, ಅಥವಾ ಕೃಷಿ ಸಾಲದ ಮೇಲಿನ ಬಡ್ಡಿದರದಲ್ಲಿ ಕಡಿತವನ್ನು ಘೋಷಿಸುವುದು, ಉಚಿತ ವಿದ್ಯುತ್ ಸರಬರಾಜಿನ ಭರವಸೆ ನೀಡುವುದು ಹಾಗೂ ಕರುಣಾನಿಧಿಯವರ ಕರುಣೆಯ ನಂತರ ಹೊಸತಾಗಿ ಚುನಾವಣಾ ಭರವಸೆಗೆ ಸೇರಿರುವ ಉಚಿತ ಬಣ್ಣದ ಟೀವಿಗಳನ್ನು ಹಂಚುವುದು. ಮೊದಲಿಗೆ ಯಾವುದಾದರೂ ಯೋಜನೆಯಿದ್ದಲ್ಲಿ ಅದರ ಕರ್ತೃವಿನ ಛಾಪು ಇರುತ್ತಿತ್ತು. ಉದಾಹರಣೆಗೆ ೨ ರೂಪಾಯಿಗಳಿಗೊಂದು ಕಿಲೋ ಅಕ್ಕಿಯನ್ನು ಕೊಡಲು ಪ್ರಾರಂಭಿಸಿದವರು ತೆಲುಗುದೇಶಂ ಪಕ್ಷದ ನಾಯಕರಾಗಿದ್ದ ಎನ್.ಟಿ.ರಾಮಾರಾವು ಅವರು. ಆದರೆ ಅದನ್ನು ಕಾಂಗ್ರೆಸ್ ಪಕ್ಷ ಈಗ ತನ್ನದಾಗಿಸಿಕೊಂಡಿದೆ. ಕರ್ನಾಟಕದಲ್ಲಿ ಬಿಜೆಪಿ ಪಕ್ಷದವರು ಉಚಿತ ವಿದ್ಯುತ್ತಿನ ಬಗ್ಗೆ ಮಾತಾಡುತ್ತಿರುವಾಗಲೇ ಅವರದೇ ಪಕ್ಷದ ಸರಕಾರ ಗುಜರಾತಿನಲ್ಲಿ ವಿದ್ಯುತ್ತಿಗೆ ಪೂರ್ಣ ಶುಲ್ಕವನ್ನು ವಿಧಿಸಿಯೂ ಚುನಾವಣೆ ಗೆದ್ದಿದೆ. ಡಿಎಂಕೆ ನೀಡಿದ ಬಣ್ಣದ ಟೀವಿಯ ಭರವಸೆಯನ್ನು ಕಾಂಗ್ರೆಸ್ ತನ್ನದೇ ಎಂಬಂತೆ ಸ್ವೀಕರಿಸಿದೆ. ಹೀಗಾಗಿ ರಾಷ್ಟ್ರೀಯ ಪಕ್ಷಗಳಿಗೂ ಪ್ರಾಂತೀಯ ಪಕ್ಷಗಳಿಗೂ ವ್ಯತ್ಯಾಸವೇ ಕಾಣದಂತಾಗಿದೆ.

ಮುಂದೆ...




1 comment:

ಗೀತಾಂಜಲಿ ವೆಂ ಅರಕೇರಿ said...

very good understanding of the whole system..worth reading..estondu shrama pattu ella tiluvalike kottidderi..dhanyavadagalu
Geetanjali