ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು


ಇತರ ಹಿಂದುಳಿದ ಜಾತಿಯವರಿಗೆ ವಿದ್ಯಾಸಂಸ್ಥೆಗಳಲ್ಲಿ ೨೭% ಮೀಸಲಾತಿ ನೀಡುವಂತಹ ಕಾನೂನನ್ನು ಎತ್ತಿಹಿಡಿದ ಸರ್ವೋಚ್ಚ ನ್ಯಾಯಾಲಯದ ತೀರ್ಪು ಬರುತ್ತಿದ್ದಂತೆಯೇ ಸಮಾನತೆ, ಗುಣಮಟ್ಟ ಇತ್ಯಾದಿಯ ಬಗೆಗಿನ ಚರ್ಚೆ ಮತ್ತೆ ಆರಂಭವಾಗಿದೆ. ಚರ್ಚೆಗೆ ಒಂದು ಸ್ಪಷ್ಟ ಉತ್ತರ ಸಿಗುವುದಾಗಿದ್ದರೆ ಇಷ್ಟು ಗೊಂದಲಮಯ ವಸ್ತುವೇ ಆಗುತ್ತಿರಲ್ಲ. ಇದರಿಂದಾಗಿ .ಬಿ.ಸಿಗಳಿಗೆ ಒಳಿತಾಗುವುದೇ? ಮೇಲ್ವರ್ಗದವರ ಅವಕಾಶಗಳು ಕಡಿಮೆಯಾಗುವುದೇ? ಎಲ್ಲರನ್ನೂ ಸಮಾನ ಮಾನದಂಡದ ಮೇಲೆ ಅಳೆಯುತ್ತಿದ್ದ ಸಿದ್ಧಾಂತಕ್ಕೆ ಧಕ್ಕೆ ಬಂದಿದೆಯೇ? ಎಲ್ಲ ಪ್ರಶ್ನೆಗಳೂ ಉದ್ಭವಿಸುತ್ತವೆ. ಜಟಿಲವಾದ ವಿಷಯದ ನಿರಚನೆ ಅಷ್ಟೇ ಜಟಿಲವಾದದ್ದು.
ಸರ್ವರಿಗೂ ಸಮಬಾಳು ಅನ್ನುವ ಮಾತು ಎಂದಿಗಾದರೂ ನಿಜವಾಗಲು ಸಾಧ್ಯವೇ?



No comments: