ನಮ್ಮ ನಡುವೆಯೇ ಇರುವ ಸೀಮಂತಿನಿ ನಿರಂಜನ

ಮೇ ೨೭ ರಾತ್ರೆ ಹನ್ನೊಂದಕ್ಕೆ ಸೀಮಂತಿನಿ ನಿರಂಜನ ತೀರಿಕೊಂಡರೆಂಬ ಸುದ್ದಿ ಎಸ್.ಎಮ್.ಎಸ್ ಮೂಲಕ ಬಂತು. ಮುಂಜಾನೆ ದಸ್ತಕಾರ್ ಆಂಧ್ರಾದಿಂದ ಫೋನು. ಈ ಸುದ್ದಿಯು ದುಃಖ ಒಂದು ವಿಚಿತ್ರರೀತಿಯದ್ದು. ಎರಡು ವರುಷಗಳ ಕೆಳಗೆ ನನಗೆ ಸೀಮಂತಿನಿ ಒಂದು ಹೆಸರು ಮಾತ್ರ. ಅನುಪಮಾ-ನಿರಂಜನರ ಮಗಳೆಂದೂ, ನಿರಂಜನರ ಸಮಗ್ರ ಕೃತಿಗಳನ್ನು ಐಬಿ‌ಎಚ್‍ನವರು ತರುತ್ತಿದ್ದಾಗ ಅವರ ಕೃತಿಗಳ ಹಕ್ಕುಗಳು ಆಕೆಯ ಬಳಿಯಿದೆ ಎಂದೂ ನಾನು ಕಂಡಿದ್ದೆ. ಆಕೆ ಸಮಾಜಶಾಸ್ತ್ರದಲ್ಲಿ ಉನ್ನತ ಪದವಿ ಪಡೆದಿದ್ದರರು. ಇ.ಪಿ.ಡಬ್ಲುವಿನಲ್ಲಿ ಯಾವಾಗಲಾದರೂ ಬರೆಯುತ್ತಿದ್ದ ಆಕೆಯ ಉತ್ತಮ ಲೇಖನಗಳನ್ನು ನಾನು ನೋಡಿದ್ದೆ. ಆಕೆಯ ಸಹೋದರಿ ತೇಜಸ್ವಿನಿಯ ಜೊತೆಗೂಡಿ "ಸ್ತ್ರೀವಾದಿ ಸಹಿತ್ಯ ವಿಮರ್ಶೆ" ಅನ್ನುವ ಪುಸ್ತಕವನ್ನೂ ಆಕೆ ಸಂಪಾದಿಸಿದ್ದರು. ಎಂದಿನಂತೆ ಅದನ್ನು ರಾಜು ಮೇಷ್ಟರು ಪ್ರಕಟಿಸಿದ್ದರು.


ಮುಂದೆ...




No comments: