ಗೋಡೆ ಗಡಿಯಾರ - ಕೈಗಡಿಯಾರ

ರಾಜಾಸ್ಥಾನದ ಡುಂಗರ್‍-ಪುರದಲ್ಲಿ ನಮ್ಮ ಅಧ್ಯಯನಕ್ಕಾಗಿ ಮಾಹಿತಿ ಸಂಗ್ರಹಿಸುತ್ತಿದ್ದ ಶಾಶ್ವತೀ ಒಂದು ದಿನ ಬಂದು ಒಂದು ವಿಚಿತ್ರವಾದ ಮಾತನ್ನು ಹೇಳಿದಳು. ಈ ಮಾತು ಮಾಹಿತಿಯನ್ನಾಧರಿಸಿದ್ದಲ್ಲ, ಬದಲಿಗೆ ತಾನು ಗಮನಿಸಿದ್ದ ವಿಷಯವೆಂದೂ ಹೇಳಿದಳು. ನಾವುಗಳು ಮಾಹಿತಿ ಸಂಗ್ರಹಿಸುತ್ತಿದ್ದದ್ದು ಬಡ ಕುಟುಂಬಗಳು ತಮ್ಮ ಆರ್ಥಿಕ ನಿರ್ವಹಣೆಯನ್ನು ಹೇಗೆ ಮಾಡುತ್ತಾರೆ ಹಾಗೂ ಎಲ್ಲೆಲ್ಲಿಂದ ಸಾಲ ಪಡೆಯುತ್ತಾರೆ ಅನ್ನುವ ವಿಷಯದ್ದಾಗಿತ್ತು. ಮಾಹಿತಿ ಸಂಗ್ರಹಿಸುವುದು ಒಂದು ಕೆಲಸವಾದರೆ ಆ ಮಾಹಿತಿಯನ್ನು ಅರ್ಥೈಸಲು ಕೆಲ ಒಳನೋಟಗಳೂ ಅವಶ್ಯಕವಾಗುತ್ತವೆ. ಹೀಗಾಗಿ ಶಾಶ್ವತೀ ಹೇಳಿದ್ದ ಮಾತಿಗೆ ನಾನು ಮಹತ್ವ ನೀಡುವ ಅಗತ್ಯವಿತ್ತು.





No comments: