ಸತ್ಯಂ ತಲ್ಲಣಗಳು

"ನೀವೆಲ್ಲರೂ ನಂಬಿರುವಂತೆ - ಹಾಗೂ ಕಂಪನಿಯ ಲೆಕ್ಕಪತ್ರದನುಸಾರವಾಗಿ ಇರಬೇಕಿದ್ದ ಏಳುಸಾವಿರ ಕೋಟಿ ರೂಪಾಯಿಗಳು ಇಲ್ಲ. ಆದರೆ ಇದರಿಂದ ನನಗೆ ಒಂದು ರೂಪಾಯಿಯ ಲಾಭವೂ ಆಗಿಲ್ಲ. ತಪ್ಪಾಯಿತು ಕ್ಷಮಿಸಿ". ಐದು ಪುಟಗಳ ದೊಡ್ಡ ಪತ್ರಬರೆದ ರಾಮಲಿಂಗ ರಾಜು ಹೇಳಿದ್ದರ ಮಜಕೂರು ಇಷ್ಟೇ. ಮಿಕ್ಕ ನಾಲ್ಕಾರು ಪುಟಗಳು ಏನೊಂದನ್ನೂ ವಿವರಿಸಲಾಗದ ಅನವಶ್ಯಕ ವಿವರಗಳು. ಹೀಗೆ ಹಣ ಮಾಯವಾಗುವುದರ ಸುಳಿವು ಯಾರಿಗೂ ಉಂಟಾಗಲಿಲ್ಲ. ಹಿಂದೆ ನಡೆದ ಅನೇಕ ಇಂತಹ ಭ್ರಷ್ಟ ನಡಾವಳಿಯಲ್ಲಿ ಈ ಇಂಥ ಪತನಕ್ಕೆ ಮುನ್ನ ಯಾವುದಾದರೂ ಸುದ್ದಿಯಿದ್ದೇ ಇರುತ್ತಿತ್ತು. ಅದು ಹರ್ಷದ್ ಮೆಹತಾ ಬಿಗ್ ಬುಲ್ ಆಗಿ ಉತ್ತುಂಗಕ್ಕೇರುತ್ತಿದ್ದ ಕಥೆಯೇ ಇರಬಹುದು, ಕೇತನ್ ಪಾರೀಕನ ಕಥೆಯೇ ಇರಬಹುದು, ಅಥವಾ ವಿಪರೀತವಾಗಿ ಬಿಸಿಯೇರಿದ್ದ ಆರ್ಥಿಕ ಸಂಸ್ಥೆಗಳ ಆಕರ್ಷಣೆಯ ಸಿ ಆರ್‍ ಬಿ ಸಂಸ್ಥೆಯಿಂದ ಪ್ರಾರಂಭವಾದ ಎನ್.ಬಿ.ಎಫ್.ಸಿ ಹಗರಣವೇ ಆಗಿರಬಹುದು.. ಇಲ್ಲವೇ ಡಾಟ್.ಕಾಂ ಕಂಪನಿಗಳು ಒಂದರ ನಂತರ ಒಂದು ಪತನಗೊಂಡ ಪರಿಯೇ ಇರಬಹುದು. ಎನ್ರಾನ್ ಸಂಸ್ಥೆ 





No comments: