ರಾಮಲಿಂಗ ರಾಜು ಎನ್ನುವ ಎನ್ ಮೈನಸ್ ವನ್ ಹೀರೋ

ಎಲ್ಲರ ನಂಬಿಕೆಗೆ ದ್ರೋಹ ಮಾಡಿರಬಹುದು ಆದರೆ ರಾಮಲಿಂಗ ರಾಜು ಕ್ರಿಮಿನಲ್ ಅಲ್ಲ ಎಂದು ತೆಲುಗು ಚಾನೆಲ್‌ಗಳು ನಡೆಸಿದ ಎಸ್.ಎಂ.ಎಸ್. ಪೋಲ್ ತಿಳಿಸಿದೆಯಂತೆ. ಇದೊಂದು ಆಸಕ್ತಿಯ ಸುದ್ದಿ! ಈ ರೀತಿಯ ಸಿಂಪತಿ ರಾಜುವಿಗೆ ಬರುವುದರಲ್ಲಿ ಅಷ್ಟು ಆಶ್ಚರ್ಯವಾಗಬಾರದೇನೋ. ಯಾಕೆಂದರೆ ಅವರು ಸತ್ಯಂ ವಧಾ ಮಾಡಿದ್ದಲ್ಲದೇ ಕನ್ನೇಶ್ವರ ಧರ್ಮಂ ಚರಾ ಮಾಡಿದ್ದಾರೆ!  "ಇದರಿಂದ ನನಗೆ ಒಂದು ರೂಪಾಯಿಯ ಲಾಭವೂ ನನಗಾಗಿಲ್ಲ", ಎಂದ ಮೇಲೆ ಅವರು ಅಪರಾಧಿ ಹೇಗಾಗುತ್ತಾರೆ? ಆದರೆ ನಮ್ಮ ಪ್ರಶ್ನೆ "ನಿಮಗಂತೂ ಲಾಭವಾಗಿಲ್ಲ.. ಆದರೆ ಇದರಿಂದ ಯಾರಿಗೆ ಲಾಭವಾಯಿತು?" ಅನ್ನುವುದು.





No comments: