ಕೋವಲಂನ ಮಣ್ಣು; ಪದ್ಮನಾಭಸ್ವಾಮಿ ಗುಡಿ

ಊರೂರು ಅಲೆಯುವಾಗ ಎರಡು ಭಿನ್ನ ರೀತಿಯ ಯಾತ್ರೆಗಳು ಸಾಧ್ಯವಾಗುತ್ತದೆ. ಒಂದು, ಕೆಲಸದ ಮೇಲೆ ಹೋಗುವುದು. ಹಾಗೆ ಹೋದಾಗ ಕಾಣುವುದು ಏರ್‌ಪೋರ್ಟು, ರೈಲು ನಿಲ್ದಾಣ, ಬಸ್ಸು, ಕಾರು, ಹೋಟೇಲಿನ ರೂಮು, ಪವರ್ ಪಾಯಿಂಟ್, ಮತ್ತು ಎಣ್ಣೆಭರಿತ ಊಟ. ಇದಿಲ್ಲವೆಂದರೆ ನಮ್ಮದೇ ರಜೆಗೆ ಹೋಗುವುದು. ಆಗ ಯಾತ್ರೆಯ ಸ್ವರೂಪವೇ ಬೇರು. ಹಿಂದಿನ ದಿನವೇ ಹೋಗೆ ಬೇಕರಿಯಿಂದ ಯಾತ್ರೆಗೆ ಬೇಕಾದ ಜ್ಯೂಸಿನ ಡಬ್ಬ, ಕುರುಕಲು, ಡಿಜಿಟಲ್ ಕ್ಯಾಮರಾ ಬರುವುದಕ್ಕೆ ಮುನ್ನ ಕೊಂಡು ತರುತ್ತಿದ್ದ ಕ್ಯಾಮರಾದ ಫಿಲಂ. ಹಾದೂ ಇಂಥ ರಜೆಗೆಂದೇ ವಿಶೇಷ ಪೋಷಾಕುಗಳು - ಬಹುಶಃ ಎಂದೂ ಧರಿಸದ ಚೆಡ್ಡಿ, ಟೀ ಷರ್ಟುಗಳು, ಟೋಪಿ ಮತ್ತು ಕಣ್ಣಿಗೆ ಬಣ್ಣದ ಕನ್ನಡಕ. ಕೆಲಸದ ಮೇಲಿನ ಯಾತ್ರೆಗಳಲ್ಲಿ ಯಾವುದೂ ನಮ್ಮ ಕೈಯಲ್ಲಿರುವುದಿಲ್ಲ. ರಜೆಯಲ್ಲಿ ನಾವೇ ಧಣಿಗಳು.



No comments: