ಮರೆತೇನೆಂದರು ಮರೆಯಲಿ ಹ್ಯಾಂಗ?

ನಮ್ಮ ದೇಶದಲ್ಲಿ ಮೈಕ್ರೋಫೈನಾನ್ಸ್ ಅಂದಕೂಡಲೇ ಕಾರಣವಿರಲೀ ಇಲ್ಲದಿರಲೀ ಮುಂಚೂಣಿಯಲ್ಲಿ ನಿಲ್ಲುವ ಹೆಸರು ಎಸ್.ಕೆ.ಎಸ್ ಎನ್ನುವ ಸಂಸ್ಥೆಯದ್ದು. ಹಾಗೂ ಅದರ ಸಂಸ್ಥಾಪಕ ಅನ್ನಿಸಿಕೊಳ್ಳುವ ವಿಕ್ರಂ ಆಕುಲಾರ ಹೆಸರು. ಎಸ್.ಕೆ.ಎಸ್ [ಸ್ವಯಂ ಕೃಷಿ ಸಂಘಂ] ಬಗ್ಗೆ ಮೊದಲಿಗೆ ಯೋಚಿಸಿದ್ದು ಅದನ್ನು ಕಾರ್ಯರೂಪಕ್ಕೆ ಇಳಿಸಿದ್ದು ವಿಕ್ರಂ ಅನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಪುಟ್ಟದಾಗಿ ಪ್ರಾರಂಭಿಸಿ ಇಂದು ದೇಶಾದ್ಯಂತ ಹಬ್ಬಿರುವ ಈ ಸಂಸ್ಥೆ ದೇಶದಲ್ಲಿಯೇ ಅತ್ಯಂತ ದೊಡ್ಡ ಮೈಕ್ರೊಫೈನಾನ್ಸ್ ಸಂಸ್ಥೆಯಾಗಿದೆ. ವಿಕ್ರಂಗೂ ಈ ಸಂಸ್ಥೆ ಸಾಕಷ್ಟು ಖ್ಯಾತಿಯನ್ನು ತಂದು ನೀಡಿದೆ. ಅಮೆರಿಕದಿಂದ ಎಲ್ಲವನ್ನೂ ಬಿಟ್ಟು ಭಾರತಕ್ಕೆ ಬಂದು ಬಡವರಿಗೆ ಸೇವೆಯನ್ನೊದಗಿಸುವ ಕೆಲಸ ಮಾಡುತ್ತಿರುವುದಕ್ಕೆ ಟೈಂ ಪತ್ರಿಕೆಯ ನೂರು ಜನರ ಯಾದಿಯಲ್ಲಿ, ವೀಕ್ ಪತ್ರಿಕೆಯ ೨೦ ಮಹತ್ವದ ಭಾರತೀಯರ ಯಾದಿಯಲ್ಲಿ ವಿಕ್ರಂ ಹೆಸರು ದಾಖಲಾದದ್ದಲ್ಲದೇ ದೊಡ್ಡ ವಾರ್ತಾವಾಹಿನಿಗಳಲ್ಲಿ ಆತನ ಸಂದರ್ಶನಗಳೂ ಬಂದಿವೆ. ಆದರೂ ವಿಕ್ರಂ ೧೯೯೭ರಲ್ಲಿ ಪ್ರಾರಂಭಿಸಿ, ಇಷ್ಟೆಲ್ಲಾ ಖ್ಯಾತಿಯನ್ನು ನೀಡಿದ ಸಂಸ್ಥೆಯಲ್ಲಿನ ತಮ್ಮ ಬಹುತೇಕ ಹೂಡಿಕೆಯನ್ನು ಕಳೆದ ವರ್ಷವಷ್ಟೇ ಮಾರಿ ಸಂಸ್ಥೆಯ ದಿನನಿತ್ಯದ ಕಾರ್ಯವನ್ನು ಹೊಸ ಹೂಡಿಕೆದಾರರಿಗೆ ಒಪ್ಪಿಸಿ ಕೈತೊಳೆದುಕೊಂಡರು.




No comments: