ಸೆಪ್ಟೆಂಬರ್ ೫ ರ ವಿಚಾರಗಳು

ಸುಮಾರು ಹದಿನೈದು ವರ್ಷಕಾಲ ಮೇಷ್ಟರ ಕೆಲಸ ಮಾಡಿದಾಗ ಸಹಜವಾಗಿಯೇ ಒಂದು ಸೀನಿಯಾರಿಟಿ ಬಂದುಬಿಡುತ್ತದೆ. ಜೊತೆಗೆ "ನಾನು ಮೇಷ್ಟರ ಕೆಲಸ ಪ್ರಾರಂಭಮಾಡಿದಾಗ ವಿದ್ಯಾರ್ಥಿಗಳು ಎಷ್ಟು ಮರ್ಯಾದೆಯಿಂದ ಇದ್ದರು.. ಈಗ ಕಾಲ ಬದಲಾಗಿದೆ" ಎಂದು ಕರುಬುವ ಪರಿಸ್ಥಿತಿ ಉಂಟಾಗಿದ್ದರೆ ಆ ಮೇಷ್ಟರಿಗೆ ಮಧ್ಯವಯಸ್ಸು ದಾಟುತ್ತಿದೆ ಅನ್ನುವುದು ಖಾತರಿ. ಆದ್ದರಿಂದಲೇ ವಿದ್ಯಾರ್ಥಿಗಳಿಗೂ ಅವರ ಗುರುಗಳಿಗೂ ಇರುವ ಸಂಬಂಧ ಕಾಲಕ್ಕೆ ತಕ್ಕಂತೆ ಬದಲಾಗುತ್ತದೆ ಅನ್ನುವುದು ಎಷ್ಟು ನಿಜವೋ ವ್ಯಕ್ತಿಯ ಸಮಯ, ವಯಸ್ಸಿಗೆ ತಕ್ಕಂತೆ ಬದಲಾಗುತ್ತದೆ ಅನ್ನುವುದೂ ಅಷ್ಟೇ ನಿಜ. ಆದರೂ ನಾವುಗಳು "ಇಂದಿನ ವಿದ್ಯಾರ್ಥಿಗಳೇ ಬೇರೆ" ಎಂದು ಕರುಬುವುದನ್ನು ನಮ್ಮ ಭವ್ಯ ಚರಿತ್ರೆಯಲ್ಲಿ ಬದುಕುವುದನ್ನೂ ಬಿಡುವುದಿಲ್ಲ.





No comments: