ತಿರುಮಲೇಶರ ಕಾವ್ಯ

ಕನ್ನಡದಲ್ಲಿ ಕಾವ್ಯದಲ್ಲಿ ನನಗೆ ಪ್ರಿಯರಾದ ಕವಿ ತಿರುಮಲೇಶ. ಅದಕ್ಕೆ ಕಾರಣವಿಷ್ಟೇ - ತಿರುಮಲೇಶ ಯಾವಾಗಲೂ ಏನಾದರೂ ಹೊಸತನ್ನು ಹೇಳುತ್ತಾರೆ, ಹೊಸರೀತಿಯಲ್ಲಿ ಹೇಳುತ್ತಾರೆ. ’ಮುಖವಾಡಗಳು’ ಸಂಕಲನದಿಂದ ’ಅವಧ’ದ ವರೆಗೆ ಬಂದಿರುವ ಅವರ ಐದು ಕವನ ಸಂಗ್ರಹಗಳಲ್ಲಿ ವಿಶೇಷ ವೈವಿಧ್ಯತೆಯಿದೆ. ಅಡಿಗರ ಜಾಡಿನಲ್ಲಿಯೇ ಕವಿತೆಗಳನ್ನು ಬರೆಯಲು ಪ್ರಾರಂಭಿಸಿದ ತಿರುಮಲೇಶರು ನಂತರ ತಮ್ಮದೇ ಪ್ರತ್ಯೇಕತೆಯನ್ನು ಶೋಧಿಸುತ್ತಾ ತಮ್ಮದೇ ಮಾರ್ಗವನ್ನು ಕಂಡುಕೊಂಡು ಮುಂದೆ ಸಾಗಿದರು.




No comments: