ರುದ್ರಮಾತಾದ ರಾಮಜೀಭಾಯಿ

ನಾನು ಕೆಲಸ ಮಾಡುವ ಸಂಸ್ಥೆಯಲ್ಲಿ ಯಾವಾಗಲೂ ಕೇಳಿಬರುವ ಮಾತುಗಳು ವ್ಯಾಪಾರ, ವ್ಯಾಪಾರದ ಬೆಳವಣಿಗೆ, ಲಾಭಾಂಶ, ಗುರಿ-ಸಾಧನೆಗಳಿಗೆ ಸಂಬಂಧಿಸಿದ್ದು. ನಮ್ಮ ವಿದ್ಯಾರ್ಥಿಗಳೂ ಸಹ ಕಾರ್ಯಕ್ಷೇತ್ರದ ಧ್ಯೇಯ, ಅದನ್ನು ಆರ್ಜಿಸಲು ನಡೆಸಬೇಕಾದ ತಯಾರಿ, ಹಾಗೂ ಯಶಸ್ವೀ ವ್ಯಪಾರವನ್ನು ಸಮರ್ಥವಾಗಿ ನಡೆಸುವ ಮಾತನ್ನು ಆಡುತ್ತಿರುತ್ತಾರೆ. ಹೀಗಾಗಿ ಯಾವುದೇ ವಿಚಾರವನ್ನೋ-ವ್ಯಾಪಾರವನ್ನೋ ಪರಿಗಣಿಸುವಾಗ ಅದರ ಭವಿಷ್ಯವೇನು ಆ ವ್ಯಾಪಾರದಿಂದ ಬರುವ ಲಾಭಾಂಶವೇನು - ಹಾಗೂ ಅದನ್ನು ಸಾಧಿಸಲು ಹಾಕಿಕೊಳ್ಳಬೇಕಾದ ಯೋಜನೆಗಳೇನು ಎನ್ನುವ ವಿಚಾರಗಳನ್ನು ಮಥಿಸುತ್ತಲೇ ಇರುತ್ತೇವೆ. ಹೆಚ್ಚು ಕೆಲಸಕ್ಕೆ ಹೆಚ್ಚು ಹಣ - ಸಮರ್ಥ ಕೆಲಸಕ್ಕೆ ಕೊಡಬೇಕಾದ ಪ್ರೋತ್ಸಾಹ ಹೀಗೆಲ್ಲಾ ಮ್ಯಾನೇಜ್ಮೆಂಟಿನ ಥಿಯರಿಗಳನ್ನು ಒಗೆಯುತ್ತಿರುವ ವ್ಯಾಪಾರದ ಮಕ್ಕಾದಿಂದ ರುದ್ರಮಾತಾ ಅನ್ನುವ ಪುಟ್ಟ ಹೋಬಳಿಗೆ ಹೋದರೆ ಕಾಣಬಹುದಾದ ಸತ್ಯವೇ ಬೇರೆ ರೀತಿಯದ್ದು!





No comments: