ಕಾಬೂಲಿವಾಲಾನ ಕಥಾನಕ

ಕಾಬೂಲಿಗೆ ಕೆಲಸದ ಮೇಲೆ ಹೋಗಬೇಕು ಅನ್ನುವ ಮಾತು ಬಂದ ಕೂಡಲೇ ನನಗೆ ಎಲ್ಲೆಡೆಯಿಂದಲೂ ಎಲ್ಲ ರೀತಿಯ ಉಪದೇಶಗಳು ಬರತೊಡಗಿದುವು. ಮೂಲಭೂತವಾಗಿ ಎಲ್ಲರೂ ಹೇಳಿದ್ದು ಇಷ್ಟೇ - ಅಲ್ಲಿಗೆ ಹೋಗುವುದು ತುಂಬಾ ಅಪಾಯದಿಂದ ಕೂಡಿದ್ದು, ಯಾವಾಗ ಏನುಬೇಕಾದರೂ ಆಗಬಹುದು. ಹೀಗಿದ್ದರೂ ಕಳೆದ ನಾಲ್ಕುತಿಂಗಳಲ್ಲಿ ಎರಡು ಬಾರಿ ಅಲ್ಲಿಗೆ ಹೋಗಿಬಂದಿರುವೆ. ಮೊದಲ ಯಾತ್ರೆ ನಡೆದಾಗ ಅಲ್ಲಿನ ಚುನಾವಣೆಯ ತಯಾರಿ ನಡೆದಿತ್ತು. ಎರಡನೆಯ ಯಾತ್ರೆಯ ಸಮಯಕ್ಕೆ ಆ ಚುನಾವಣೆಯ ಫಲಿತಾಂಶ ಬರಬಹುದೆನ್ನುವ ಸುದ್ದಿಯಿತ್ತಾದರೂ, ಚುನಾವಣೆಯಲ್ಲಿ ನಡೆದಿರಬಹುದಾದ ಅವ್ಯವಹಾರದ ಕಾರಣವಾಗಿ ತನಿಖೆ ಇನ್ನೂ ನಡೆಯುತ್ತಿದೆ.





No comments: