ಸೊರಗಿದ ಪ್ರೀಮಿಯರ್....

ಅಹಮದಾಬಾದಿನಲ್ಲಿ ನನಗೆ ಸಿಗದಿರುವ ಹಾಗೂ ತಹತಹಿಸುವ ಅಂಶ ಒಂದು ಒಳ್ಳೆಯ ಪುಸ್ತಕದಂಗಡಿ ಇಲ್ಲದ್ದು. ಬೆಂಗಳೂರಿನಿಂದ ಬಂದಿರುವ ನನಗೆ ಎಂ.ಜಿ ರಸ್ತೆಯ ಆಸುಪಾಸಿನಲ್ಲಿರುವ ಹೊಸ-ಹಳೆಯ ಪುಸ್ತಕಗಳನ್ನು ಮಾರುವ ಅದ್ಭುತ ಪುಸ್ತಕದಂಗಡಿಗಳು, ಮೆಜೆಸ್ಟಿಕ್ಕಿನಲ್ಲಿ ಸಪ್ನಾ, ಕನ್ನಡಪುಸ್ತಕಗಳಿಗೆ ಸಾಹಿತ್ಯ ಭಂಡಾರ, ಗಾಂಧಿಬಜಾರಿನ ಅಂಕಿತಾ ಹಾಗೂ ರೆಸಿಡೆಂನ್ಷಿಯಲ್ ಪ್ರದೇಶಗಳಲ್ಲೂ ಇರುವ ಜಯನಗರದ ನಾಗಶ್ರೀ, ಪ್ರಿಸಂ ಎಲ್ಲವನ್ನೂ ಪರಿಗಣಿಸಿದಾಗ ಅಹಮದಾಬಾದಿನ ಬಗ್ಗೆ ಅಸಮಾಧಾನವಾಗುವುದು ಸಹಜವೇ. ಮೊದಲಬಾರಿಗೆ ನಾನು ವಿದ್ಯಾರ್ಥಿಯಾಗಿ ಗುಜರಾತ್ ಪ್ರವೇಶಮಾಡಿದಾಗ ಪುಟ್ಟ ನಗರವಾದ ಆಣಂದದ ಸ್ಟೇಷನ್ ರೋಡಿನಲ್ಲಿ ನಡೆದಾಡುತ್ತಾ "ಬುಕ್ಸ್" ಎಂದು ಸ್ವಾಗತಿಸುತ್ತಿದ್ದ ದೊಡ್ಡ ಫಲಕವನ್ನು ನೋಡಿ ವಿಚಿತ್ರ ಪುಳಕದಿಂದ ಅದರ ಸಮೀಪಕ್ಕೆ ಹೋದರೆ ನನಗೆ ಕಂಡದ್ದು ಕೆಂಪು ಬಣ್ಣದ "ಚೋಪಡಿ" ಎಂದು ಕರವ ಲೆಕ್ಕಪತ್ರದ ಲೆಡ್ಜರುಗಳು. ಈ ಚೋಪಡಿಗಳಲ್ಲಿ ಕಾಣುವುದು ಯಾವ ಆಯಕರ ಆಫೀಸರನೂ ಅರ್ಥೈಸಲು ಸಾಧ್ಯವಾಗದಂತಹ ಮೋಡಿ ಅಕ್ಷರಗಳ ಮಾಯಾಲೋಕ.

ಮುಂದೆ..............


ಗುರುಪ್ರಸಾದ್ ಕಾಗಿನೆಲೆ - ಈ ವರೆಗೆ

ಈಚೆಗಷ್ಟೇ ನಾನು ಗುರುವಿನ ಶಕುಂತಳಾ ಪುಸ್ತಕ ಬಿಡುಗಡೆಯ ಸಂದರ್ಭದಲ್ಲಿ ಹಾಕಿಕೊಂಡಿದ್ದ ಟಿಪ್ಪಣಿಗಳಾಧಾರದ ಮೇಲೆ ಅವರ ಬಗೆಗೆ ಬರೆದಿದ್ದೆ. ಆ ಬರಹದ ಕಡೆಯ ಸಾಲುಗಳಿಂದ ಅವರ ಈ ವರೆಗಿನ ಬರವಣಿಗೆಯ ಅವಲೋಕನ ಮಾಡುತ್ತೇನೆ. 

"ಗುರುಪ್ರಸದ್ ನನ್ನ ಮಟ್ಟಿಗೆ ಕನ್ನಡದಲ್ಲಿ ಬರೆಯುತ್ತಿರುವ ಸಮಕಾಲೀನರಲ್ಲಿ ಒಂದು ಭಿನ್ನ ಧ್ವನಿ ಅನ್ನುವುದರಲ್ಲಿ ಅನುಮಾನವಿಲ್ಲ. ಆದರೆ ಭಿನ್ನತೆಯೊಂದೇ ಅವರ ಗುಣವಲ್ಲ. ಅವರಿಗೆ ಕಥೆ ಕಟ್ಟುವ ಕಲೆ ಕೈವಶವಾಗಿದೆ. ಅವರ ಸಂದರ್ಭಕ್ಕೆ ತಕ್ಕಂತೆ ಮಾನವ ವ್ಯಾಪಾರಗಳ ಬಗ್ಗೆ ಅದರ ಅರ್ಥಹೀನತೆ-ಅರ್ಥವಂತಿಕೆಯ ಬಗ್ಗೆ ಅವರು ಸಮರ್ಥವಾಗಿ ಬರೆಯಬಲ್ಲರು. ಗ್ಲೋಬಲ್ ಆಗುತ್ತಿರುವ ನಮ್ಮ ಸಮಾಜದ ತಲ್ಲಣಗಳನ್ನು ಅವರು ಸೂಕ್ಷ್ಮವಾಗಿ ಗ್ರಹಿಸಬಲ್ಲರು. ಕನ್ನಡ ಲೋಕ ಅವರನ್ನು ಉತ್ಸಾಹದಿಂದ ಬರಮಾಡಿಕೊಂದು ಪ್ರೋತ್ಸಾಹಿಲಿ ಅನ್ನುವ ಆಶಯ ನನ್ನದು. ಈ ಮುಖ್ಯವಾದ ಧ್ವನಿಗೆ ಸಿಗಬೇಕಾದ ಪ್ರಾಮುಖ್ಯತೆ ಸಿಗಲೆಂದು ಹಾರೈಸುತ್ತೇನೆ."

ಹೀಗೆ ಬರೆಯುತ್ತಿದ್ದಾಗ ನನಗೆ ಗುರುವಿನ ಮಿಕ್ಕ ಕೃತಿಗಳ ಪರಿಚಯವಿರಲಿಲ್ಲ. ಅವರ ಕಾದಂಬರಿ ಬಿಳಿಯ ಚಾದರ ಬಿಡುಗಡೆಯಾಗಿರಲಿಲ್ಲ ಹಾಗೂ ಅವರ ಎರಡೂ ಪುಸ್ತಕಗಳಾದ ನಿರ್ಗುಣ ಮತ್ತು ಪ್ರಬಂಧಗಳ ಸಂಕಲನವಾದ ವೈದ್ಯ-ಮತ್ತೊಬ್ಬ ನಾನು ಓದಿರಲಿಲ್ಲ. ಈಗ ನಾನು ಅವುಗಳೆಲ್ಲವನ್ನೂ ಓದಿದ್ದೇನೆ. ಓದಿದ ನಂತರವೂ ನನ್ನ ಮೇಲಿನ ಅಭಿಪ್ರಾಯದಲ್ಲಿ ಮೂಲಭೂತ ಬದಲಾವಣೆಯೇನೂ ಆಗಿಲ್ಲ. ಆದರೂ ಒಬ್ಬ ಲೇಖಕನ ಕಾಳಜಿಗಳು ಹಾಗೂ ಬರಹಗಾರ ತೆರೆದುಕೊಳ್ಳುವ ರೀತಿಯಬಗ್ಗೆ ಕೆಲ ಒಳನೋಟಗಳನ್ನು ನಾನು ಈ ಹೊಸ ಓದಿನ ಮೂಲಕ ಪಡೆಯಲು ಪ್ರಯತ್ನಿಸುತ್ತಿದ್ದೇನೆ. 




ಚಿಕ್ಕಸಾಲಕ್ಕೆ ವಲಸೆಬಂದ ವಿಕಾಸವಾದಿಗಳು

ಎರಡು ದಶಕಗಳ ಕೆಳಗೆ ಮೈಕ್ರೊಫೈನಾನ್ಸ್ [ಚಿಕ್ಕಸಾಲ]ದ ಮೊದಲ ಅಲೆ ಪ್ರಾರಂಭವಾಯಿತು ಎನ್ನಬಹುದು. ಚಿಕ್ಕಸಾಲವೆಂದರೆ ಸ್ವ-ಸಹಾಯ ಗುಂಪುಗಳೆಂದು ನಾವುಗಳು ಸರಳವಾಗಿ ಅರ್ಥ ಮಾಡಿಕೊಳ್ಳುತ್ತಿದ್ದೆವು. ನಮ್ಮ ದೇಶಕ್ಕೆ ನಮ್ಮದೇ ಆದ ಸಹಕಾರೀ ತತ್ವದ ಮೇಲೆ ಆಧಾರಿತವಾದ ಮಹಿಳೆಯರಿಂದಲೇ ಚಲಾಯಿಸಲ್ಪಡುತ್ತಿದ್ದ ಲಕ್ಷಾಂತರ ಗುಂಪುಗಳು ಹೆಚ್ಚಾಗಿ ದಕ್ಷಿಣ ಭಾರತದಲ್ಲಿದ್ದುವು. ಈ ಗುಂಪುಗಳ ಜೊತೆಗೆ ಅಹಮದಾಬಾದಿನ ಸೇವಾ ಬ್ಯಾಂಕನ್ನು ಚಿಕ್ಕಸಾಲಿಗರೆಂದು ಕರೆಯುವುದು ಪ್ರತೀತಿಯಾಗಿತ್ತು. ಈ ಗುಂಪುಗಳನ್ನು ಆಯೋಜಿಸುತ್ತಿದ್ದ ಪ್ರದಾನ್, ಮೈರಾಡಾ, ಧಾನ್ ಫೌಂಡೇಷನ್, ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮೀಣ ವಿಕಾಸ ವಿಭಾಗದಂತಹ ಸ್ವಯಂ ಸೇವಾ ಸಂಸ್ಥೆಗಳು, ತಮ್ಮದೇ ಮಹಿಳಾ ಸೇವಾ ಸಹಕಾರಿ ಬ್ಯಾಂಕಿನ ಮೂಲಕ ಚಿಕ್ಕಸಾಲವನ್ನು ನೀಡುತ್ತಿದ್ದ ಅಹಮದಾಬಾದಿನ ಸೇವಾ ಈ ಎಲ್ಲ ಸಂಸ್ಥೆಗಳಿಗೂ ತಾವು ನಡೆಸುತ್ತಿದ್ದ ವಿಕಾಸ ಕಾರ್ಯದ ಒಂದು ಭಾಗವಾಗಿ, ಬ್ಯಾಂಕುಗಳು ನೀಡುವ ವಿತ್ತೀಯ ಸೇವೆಗೆ ಪೂರಕವಾಗಿ, ಹಾಗೂ ಬ್ಯಾಂಕುಗಳು ಇಂಥ ಸೇವೆಗಳನ್ನು ಬಡವರಿಗೆ ನೀಡದಿದ್ದಾಗ ಅವುಗಳಿಗೆ ಸವಾಲಾಗಿ ಈ ಸಂಸ್ಥೆಗಳು ಕೆಲಸ ಮಾಡುತ್ತಿದ್ದುವು.