ನಾ ಹೇಗೆ ಬಡವನು ನಾ ಹೇಗೆ ಪರದೇಶಿ..

ಅಭಿವೃದ್ಧಿಯ ಮಾತನಾಡುವಾಗಲೆಲ್ಲಾ ಬಡತನದ ರೇಖೆಯ ಮಾತು ಸಹಜವಾಗಿ ಬರುತ್ತದೆ. ಬಡತನದ ರೇಖೆಯ ಮೇಲಿರುವ ಜನಸಂಖ್ಯೆ ಪ್ರಮಾಣ ಅಭಿವೃದ್ಧಿಯ ಅನೇಕ ಮಾಪಕಗಳಲ್ಲಿ ಒಂದು. ಭಾರತದಲ್ಲಿ ಈ ರೇಖೆಯನ್ನು ನಿರ್ಧರಿಸಲು ಕ್ಯಾಲೋರಿಫಿಕ್ ವ್ಯಾಲ್ಯೂ ಆಧಾರದ ಮೇಲೆ [ಅಂದರೆ ಇಂತಿಷ್ಟು ಶಕ್ತಿಯನ್ನು ಆರ್ಜಿಸಲು ಬೇಕಾದ ಆಹಾರವನ್ನು ಕೊಳ್ಳಲು ಆಗುವ ಖರ್ಚಿನ ಆಧಾರದ ಮೇಲೆ] ವಾರ್ಷಿಕ ಆದಾಯವನ್ನು ನಿಗದಿ ಮಾಡಲಾಗಿದೆ. ಪ್ರತೀ ವರ್ಷ ಸರಕಾರ ಇಂತಿಷ್ಟು ಮಂದಿ ಬಡತನದ ರೇಖೆಯನ್ನು ಉಲ್ಲಂಘಿಸಿದ್ದಾರೆಂದು ಘೋಷಿಸಿ ತನ್ನ ಬೆನ್ನನ್ನು ತಟ್ಟಿಕೊಳ್ಳುತ್ತದೆ. ಸರಕಾರದ ಯಾವುದೇ ಅಂಕಿ ಅಂಶಗಳನ್ನು ಅನುಮಾನದಿಂದ ನೋಡುವ ಜನ ಈ ಮಾಪನವನ್ನು ಸಹಜವಾಗಿ ಪ್ರಶ್ನಿಸುತ್ತಾರೆ. ವಿಶ್ವದಾದ್ಯಂತ ಬಡತನವನ್ನು ಅಳೆಯಲು [ಸ್ಥಳೀಯ ಹಣದ ಖರೀದಿಯ ಶಕ್ತಿಯನುಸಾರ] ದಿನಕ್ಕೊಂದು ಡಾಲರ್ ಸಮಾನವಾದ ಆದಾಯವನ್ನು ಮಾಪಕವನ್ನಾಗಿ ಇಟ್ಟುಕೊಳ್ಳಲಾಗಿದೆ. ಈಗೀಗ ಇದನ್ನು ಎರಡು ಹಂತಗಳಲ್ಲಿ ಅಳೆಯುವುದೂ ಉಂಟು. ದಿನಕ್ಕೊಂದು ಡಾಲರ್‌ಗಿಂತ ಕಡಿಮೆ ಆರ್ಜಿಸುವ ಅತೀ-ಬಡವರು ಹಾಗೂ ಎರಡು ಡಾಲರ್‌ವರೆಗೆ ಆದಾಯವಿರುವ ಬಡವರು.






ವಲಸೆ ಕಾರ್ಮಿಕರ ಹಣಪಾವತಿಯ ತಂತ್ರಜ್ಞಾನ

ಕಳೆದ ವರ್ಷ ನಾವುಗಳು ಕ್ಯಾತದೇವರಗುಡಿಯ ಅರಣ್ಯದ ಪ್ರಾಂತಕ್ಕೆ ಪ್ರವಾಸ ಹೋದಾಗ ಜಂಗಲ್ ಲಾಡ್ಜಸ್‍ನ ಗೈಡ್ ಕಂ ಡ್ರೈವರ್ ಹರ್ ಬಹದ್ದೂರ್ ಥಾಪಾ ಜೊತೆ ಮಾತು ಬೆಳೆಸಿದ್ದೆ. ಥಾಪಾ ಹಿಮಾಚಲ ಪ್ರದೇಶದವನು, ಭಾರತೀಯ ಸೇನೆಯಲ್ಲಿದ್ದು ಯಾವುದೋ ಲಕ್-ಬೈ-ಚಾನ್ಸ್ ಆಗಿ ಇಲ್ಲಿ ಕೆಲಸ ಸಿಕ್ಕಿತ್ತಂತೆ. ದೂರದ ಹಿಮಾಚಲಕ್ಕೆ ಅವನು ಹಣ ಪಾವತಿಸುವುದು ಹೇಗೆ ಅನ್ನುವ ಕುತೂಹಲ ನನ್ನಲ್ಲಿತ್ತು. ವಲೆಸೆ ಹೋಗುವ ಕೆಲಸಗಾರರಿಗೆ ಇದು ದೊಡ್ಡ ಸವಾಲೆನ್ನುವುದನ್ನು ನಾವುಗಳು ಅನೇಕ ಅಧ್ಯಯನಗಳಲ್ಲಿ ಕಂಡುಕೊಂಡಿದ್ದೆವು. ಸಾಮಾನ್ಯವಾಗಿ ವಲೆಸೆ ಹೋಗುವ ಕೆಲಸಗಾರರು ತಮ್ಮ ಮುಕದ್ದಂ [ಮೇಸ್ತ್ರಿಗಳ] ಮೂಲಕವೇ ಎಲ್ಲ ವ್ಯವಹಾರವನ್ನೂ ಮಾಡುತ್ತಾರೆ. ಆದರೆ ಮುಕದ್ದಂ ಇಲ್ಲದ ಕೆಲಸದಲ್ಲಿರುವ ಈತ ಕರ್ನಾಟಕದಲ್ಲಿ ಸಂಪಾದಿಸುವ ಹಣವನ್ನು ಹಿಮಾಚಲಕ್ಕೆ ತಲುಪಿಸುವುದೂ ಅಥವಾ ಸೂರತ್‍ನ ವಜ್ರದ ಯೂನಿಟ್ಟುಗಳಲ್ಲಿ ಕೆಲಸ ಮಾಡುವ ಒಡಿಯಾ ಕೆಲಸಗಾರರು ಒರಿಸ್ಸಾಗೆ ಹಣ ತಲುಪಿಸುವುದೂ ಒಂದು ಸವಾಲೇ ಆಗಿತ್ತು. ಕಾರಣಗಳು ಅನೇಕ.



ಗೋದಾವರಿಯ ಅಕ್ಷರಸ್ಥರೂ, ಧರ್ಮಪುರಿಯ ವಿದ್ಯಾವಂತರೂ..

ಈಚೆಗೆ ಒಂದು ಅಧ್ಯಯನಕ್ಕಾಗಿ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆ ಮತ್ತು ತಮಿಳುನಾಡಿನ ಧರ್ಮಪುರಿ ಜಿಲ್ಲೆಗಳಿಂದ ನಾವು ಮಾಹಿತಿಯನ್ನು ಸಂಗ್ರಹಿಸಿದೆವು. ಪಶ್ಚಿಮ ಗೋದಾವರಿ ಜಿಲ್ಲೆ ಎಲ್ಲ ರೀತಿಯಿಂದಲೂ ಧರ್ಮಪುರಿಗಿಂತ ಹೆಚ್ಚು ವಿಕಾಸ ಕಂಡಿರುವ ಜಿಲ್ಲೆ ಅನ್ನುವುದರಲ್ಲಿ ಅನುಮಾನವಿಲ್ಲ. ಇಲ್ಲಿ ಮಳೆಯೂ ಧರ್ಮಪುರಿಗಿಂತ ಹೆಚ್ಚು. ಪಶ್ಚಿಮ ಗೋದಾವರಿಯಲ್ಲಿ ೮೦ ಪ್ರತಿಶತ ಕೃಷಿ ಭೂಮಿಗೆ ನೀರಾವರಿಯ ವ್ಯವಸ್ಥೆ ಇದ್ದರೆ ಧರ್ಮಪುರಿಯಲ್ಲಿ ಅದು ಅರ್ಧಕ್ಕಿಂತಲೂ ಕಡಿಮೆ. ಸೆನ್ಸಸ್ ಮತ್ತು ಜಿಲ್ಲಾ ಮಾಹಿತಿಯನ್ನು ಗಮನಿಸಿದಾಗ ನಮಗೆ ಒಟ್ಟಾರೆ ಎಲ್ಲ ವಿಭಾಗಗಳಲ್ಲೂ ಧರ್ಮಪುರಿ ಹಿಂದುಳಿದಿರುವುದು ಕಾಣಿಸುತ್ತದೆ. ಉದಾಹರಣೆಗೆ, ಆರುವರುಷಕ್ಕೆ ಕಡಿಮೆ ವಯಸ್ಸಿನ ಮಕ್ಕಳ ಮಾಹಿತಿಯನ್ನು ಕಂಡಾಗ ಪ್ರತಿ ಸಾವಿರ ಗಂಡು ಮಕ್ಕಳಿಗೆ ಕೇವಲ ೮೩೩ ಹೆಣ್ಣು ಮಕ್ಕಳಿದ್ದಾರೆ. ಹಾಗಾಗಿ ಈ ಜಿಲ್ಲೆಯಲ್ಲಿ ಭ್ರೂಣ ಹತ್ಯೆ ಆಗುತ್ತಿರಬಹುದಾದ ಸಾಧ್ಯತೆಯನ್ನೂ ನಾವುಗಳು ತಳ್ಳಿಹಾಕುವಂತಿಲ್ಲ.



ಎರಡು ವರ್ಷಗಳ ನಂತರ... ಮುಚ್ಚಿದ ಪ್ರೀಮಿಯರ್

ವಿಸ್ತರಿಸಿಕೊಳ್ಳಲು ಸಹಾಯಕ ಕೋಚಿಂಗಿಗೆ ಹೋಗುತ್ತಿದ್ದಾಗ ಒಂದು ದಿನ ಅಲ್ಲಿ ಪಾಠ ಮಾಡುತ್ತಿದ್ದ ವಿಶ್ವನಾಥ್ ಹೇಳಿದ್ದರು: "ನಮ್ಮ ವಿತ್ತೀಯ ನಿರ್ಮತಿಯ ತಲ್ಲಣಗಳನ್ನು ಹೆಚ್ಚು ಅರ್ಥಮಾಡಿಕೊಳ್ಳಬೇಕಾದರೆ, ನೀನು ಶೂಮೇಕರನ ಸ್ಮಾಲ್ ಇಸ್ ಬ್ಯೂಟಿಫುಲ್ ಓದು. ನಾನು ಪ್ರೀಮಿಯರ್ ಬುಕ್ ಷಾಪಿನ ಶಾನ್‌ಭಾಗಿಗೆ ಹೇಳಿದ್ದೇನೆ. ನಮ್ಮವರಿಗೆ ಆತ ೧೫% ರಿಯಾಯಿತಿಯಲ್ಲಿ ಪುಸ್ತಕಗಳನ್ನು ಮಾರುತ್ತಾರೆ". ಹೀಗೆ ಸ್ಮಾಲ್ ಇಸ್ ಬ್ಯೂಟಿಫುಲ್ ಅನ್ನುವ ಪುಸ್ತಕವನ್ನು ಹುಡುಕಿ ಹೊರಟ ನನಗೆ ಆ ಪುಸ್ತಕದ ಟೈಟಲ್ಲಿನ ಅರ್ಥದ ಪದರ-ಮಜಲುಗಳು ಶಾನಭಾಗರ ಪ್ರೀಮಿಯರ್ ಬುಕ್ ಷಾಪ್ ನೋಡಿದಾಗ ತಟ್ಟಿತು. ಪುಟ್ಟ ಅಂಗಡಿಯಲ್ಲಿ ಎಷ್ಟೊಂದು ಭಂಡಾರವನ್ನು ಅಡಕಮಾಡಿ ಇಡಬಹುದು ಅನ್ನುವುದಕ್ಕೆ ಪ್ರೀಮಿಯರ್ ಸಂಕೇತವಾಯಿತು. ಆದರೆ ಅದನ್ನು ಬ್ಯೂಟಿಫುಲ್ ಎಂದು ಕರೆಯುವುದಕ್ಕೆ ಮಾತ್ರ ಸಾಧ್ಯವಾಗಿರಲಿಲ್ಲ. ಅದರ ಆತ್ಮ ಬ್ಯೂಟಿಫುಲ್ ಆದರೂ ಆ ಅಂಗಡಿಯಲ್ಲಿ ಪುಸ್ತಕಗಳನ್ನು ಆಯುವುದಕ್ಕೆ ಪಳಗಿದ ಕೈಗಳೇ  ಬೇಕಾಗಿದ್ದುವು.