ತಿರುಮಲೇಶರ ಕಾವ್ಯ

ಕನ್ನಡದಲ್ಲಿ ಕಾವ್ಯದಲ್ಲಿ ನನಗೆ ಪ್ರಿಯರಾದ ಕವಿ ತಿರುಮಲೇಶ. ಅದಕ್ಕೆ ಕಾರಣವಿಷ್ಟೇ - ತಿರುಮಲೇಶ ಯಾವಾಗಲೂ ಏನಾದರೂ ಹೊಸತನ್ನು ಹೇಳುತ್ತಾರೆ, ಹೊಸರೀತಿಯಲ್ಲಿ ಹೇಳುತ್ತಾರೆ. ’ಮುಖವಾಡಗಳು’ ಸಂಕಲನದಿಂದ ’ಅವಧ’ದ ವರೆಗೆ ಬಂದಿರುವ ಅವರ ಐದು ಕವನ ಸಂಗ್ರಹಗಳಲ್ಲಿ ವಿಶೇಷ ವೈವಿಧ್ಯತೆಯಿದೆ. ಅಡಿಗರ ಜಾಡಿನಲ್ಲಿಯೇ ಕವಿತೆಗಳನ್ನು ಬರೆಯಲು ಪ್ರಾರಂಭಿಸಿದ ತಿರುಮಲೇಶರು ನಂತರ ತಮ್ಮದೇ ಪ್ರತ್ಯೇಕತೆಯನ್ನು ಶೋಧಿಸುತ್ತಾ ತಮ್ಮದೇ ಮಾರ್ಗವನ್ನು ಕಂಡುಕೊಂಡು ಮುಂದೆ ಸಾಗಿದರು.




ರುದ್ರಮಾತಾದ ರಾಮಜೀಭಾಯಿ

ನಾನು ಕೆಲಸ ಮಾಡುವ ಸಂಸ್ಥೆಯಲ್ಲಿ ಯಾವಾಗಲೂ ಕೇಳಿಬರುವ ಮಾತುಗಳು ವ್ಯಾಪಾರ, ವ್ಯಾಪಾರದ ಬೆಳವಣಿಗೆ, ಲಾಭಾಂಶ, ಗುರಿ-ಸಾಧನೆಗಳಿಗೆ ಸಂಬಂಧಿಸಿದ್ದು. ನಮ್ಮ ವಿದ್ಯಾರ್ಥಿಗಳೂ ಸಹ ಕಾರ್ಯಕ್ಷೇತ್ರದ ಧ್ಯೇಯ, ಅದನ್ನು ಆರ್ಜಿಸಲು ನಡೆಸಬೇಕಾದ ತಯಾರಿ, ಹಾಗೂ ಯಶಸ್ವೀ ವ್ಯಪಾರವನ್ನು ಸಮರ್ಥವಾಗಿ ನಡೆಸುವ ಮಾತನ್ನು ಆಡುತ್ತಿರುತ್ತಾರೆ. ಹೀಗಾಗಿ ಯಾವುದೇ ವಿಚಾರವನ್ನೋ-ವ್ಯಾಪಾರವನ್ನೋ ಪರಿಗಣಿಸುವಾಗ ಅದರ ಭವಿಷ್ಯವೇನು ಆ ವ್ಯಾಪಾರದಿಂದ ಬರುವ ಲಾಭಾಂಶವೇನು - ಹಾಗೂ ಅದನ್ನು ಸಾಧಿಸಲು ಹಾಕಿಕೊಳ್ಳಬೇಕಾದ ಯೋಜನೆಗಳೇನು ಎನ್ನುವ ವಿಚಾರಗಳನ್ನು ಮಥಿಸುತ್ತಲೇ ಇರುತ್ತೇವೆ. ಹೆಚ್ಚು ಕೆಲಸಕ್ಕೆ ಹೆಚ್ಚು ಹಣ - ಸಮರ್ಥ ಕೆಲಸಕ್ಕೆ ಕೊಡಬೇಕಾದ ಪ್ರೋತ್ಸಾಹ ಹೀಗೆಲ್ಲಾ ಮ್ಯಾನೇಜ್ಮೆಂಟಿನ ಥಿಯರಿಗಳನ್ನು ಒಗೆಯುತ್ತಿರುವ ವ್ಯಾಪಾರದ ಮಕ್ಕಾದಿಂದ ರುದ್ರಮಾತಾ ಅನ್ನುವ ಪುಟ್ಟ ಹೋಬಳಿಗೆ ಹೋದರೆ ಕಾಣಬಹುದಾದ ಸತ್ಯವೇ ಬೇರೆ ರೀತಿಯದ್ದು!




ವಾಡಾಗಳ ಅರಗಿನರಮನೆ

ನಿರುನಾ ಗ್ರಾಮದಲ್ಲಿ ಮಾತ್ರವಲ್ಲ ಇಡೀ ಕಛ್ ಪ್ರಾಂತದಲ್ಲೇ ನಿಜಕ್ಕೂ ಪ್ರತಿಭಾವಂತ ಕಲಾವಿದರಿದ್ದಾರೆ. ಆದರೆ ಈ ಬಾರಿ ನಾವು ರೋಗನ್ ಕಲೆಯಿಂದ ಮುಂದಕ್ಕೆ ಹೋಗಿ ಮರ ಮತ್ತು ಅರಗಿನ ಕಲಸ ಮಾಡುವ ’ವಾಡಾ’ಬುಡಕಟ್ಟಿನ ಜನಗಳ ಬಗ್ಗೆ ಯೋಚಿಸೋಣ. ವಾಡಾ ಬುಡಕಟ್ಟಿನವರು ಮೂಲಭೂತವಾಗಿ ಅಲೆಮಾರಿಗಳು, ಅರಣ್ಯ ಪ್ರಾಂತದಲ್ಲಿ ತಿರುಗಾಡುತ್ತಿರುವ ಈ ಬುಡಕಟ್ಟಿನ ಜನಾಂಗಕ್ಕೆ ಒಂದೇ ಜಾಗದಲ್ಲಿದ್ದು ಕೆಲಸ ಮಾಡುವುದು ತುಸು ಮುಜುಗರದ ಮಾತೇ. ಆದರೆ ಅರಣ್ಯ ಪ್ರದೇಶದಲ್ಲಿರುವುದರಿಂದ ಮರಗಳ ಬಗೆಗಿನ ಅವರ ಜ್ಞಾನ ಅದ್ಭುತವಾದದ್ದು. ಅವರ ಕರಕುಶಲತೆಯನ್ನು ನೋಡಿಯೇ ನಂಬಬೇಕು. ಆದರೆ ಕಲಾವಿದರಿಗೆ ತಮ್ಮ ಕಲೆಯ ಆಧಾರವಾಗಿಯೇ ಜೀವನ ಹೊರೆಯುವುದು ಸಾಧ್ಯವಿಲ್ಲ ಎನ್ನುವುದನ್ನು ನಿರೂಪಿಸಲೋ ಎಂಬಂತೆ ಇವರುಗಳು ಸೈಡ್ ಬಿಜನೆಸ್ ಆಗಿ ಸಾರಾಯಿ ತಯಾರಿಸುವ ಕೆಲಸವನ್ನೂ ಮಾಡುತ್ತಾರೆ.






ಸೆಪ್ಟೆಂಬರ್ ೫ ರ ವಿಚಾರಗಳು

ಸುಮಾರು ಹದಿನೈದು ವರ್ಷಕಾಲ ಮೇಷ್ಟರ ಕೆಲಸ ಮಾಡಿದಾಗ ಸಹಜವಾಗಿಯೇ ಒಂದು ಸೀನಿಯಾರಿಟಿ ಬಂದುಬಿಡುತ್ತದೆ. ಜೊತೆಗೆ "ನಾನು ಮೇಷ್ಟರ ಕೆಲಸ ಪ್ರಾರಂಭಮಾಡಿದಾಗ ವಿದ್ಯಾರ್ಥಿಗಳು ಎಷ್ಟು ಮರ್ಯಾದೆಯಿಂದ ಇದ್ದರು.. ಈಗ ಕಾಲ ಬದಲಾಗಿದೆ" ಎಂದು ಕರುಬುವ ಪರಿಸ್ಥಿತಿ ಉಂಟಾಗಿದ್ದರೆ ಆ ಮೇಷ್ಟರಿಗೆ ಮಧ್ಯವಯಸ್ಸು ದಾಟುತ್ತಿದೆ ಅನ್ನುವುದು ಖಾತರಿ. ಆದ್ದರಿಂದಲೇ ವಿದ್ಯಾರ್ಥಿಗಳಿಗೂ ಅವರ ಗುರುಗಳಿಗೂ ಇರುವ ಸಂಬಂಧ ಕಾಲಕ್ಕೆ ತಕ್ಕಂತೆ ಬದಲಾಗುತ್ತದೆ ಅನ್ನುವುದು ಎಷ್ಟು ನಿಜವೋ ವ್ಯಕ್ತಿಯ ಸಮಯ, ವಯಸ್ಸಿಗೆ ತಕ್ಕಂತೆ ಬದಲಾಗುತ್ತದೆ ಅನ್ನುವುದೂ ಅಷ್ಟೇ ನಿಜ. ಆದರೂ ನಾವುಗಳು "ಇಂದಿನ ವಿದ್ಯಾರ್ಥಿಗಳೇ ಬೇರೆ" ಎಂದು ಕರುಬುವುದನ್ನು ನಮ್ಮ ಭವ್ಯ ಚರಿತ್ರೆಯಲ್ಲಿ ಬದುಕುವುದನ್ನೂ ಬಿಡುವುದಿಲ್ಲ.