ಮಹಾತ್ಮಾ ಗಾಂಧಿ ಮತ್ತು ಮಾ ಬ್ಲಾ ಪೆನ್ನು

"ನನ್ನ ಜೀವನವೇ ನನ್ನ ಸಂದೇಶ" ಎಂದು ಮಹಾತ್ಮಾ ಗಾಂಧಿ ಹೇಳಿದ್ದು ಯಾವಗ ಅನ್ನುವುದನ್ನು ನಾವೆಲ್ಲರೂ ಮರೆತಿದ್ದರೂ ಅದನ್ನು ಆಗಾಗ ಪ್ರಯೋಗಿಸುವುದನ್ನು ಮಾತ್ರ ಮರೆಯುವುದಿಲ್ಲ. ಆದರೆ ಮಹಾತ್ಮ ಕೊಟ್ಟ ಸಂದೇಶವೇನು ಅದನ್ನು ನಾವು ಅರ್ಥೈಸುವುದು ಹೇಗೆ ಅನ್ನುವುದು ಮಾತ್ರ ಗಹನ ಚರ್ಚೆಯ ವಿಷಯವಾಗಬಹುದು. ಮಾಹಾತ್ಮ ಗಾಂಧಿಯನ್ನು ಓದಿಕೊಂಡಿದ್ದರೂ ಆತನ ಬಗ್ಗೆ ಪಾಂಡಿತ್ಯವಿಲ್ಲದ, ಯಾವ ಗಾಂಧೀವಾದದ ವಿಚರವನ್ನೂ ಪಾಲಿಸದ ನಾನು ಈ ವಿಷಯದಲ್ಲಿ ಹಠಾತ್ ಆಸಕ್ತಿ ಪಡೆಯುವುದಕ್ಕೆ ಕಾರಣವಿದೆ. ಈಚೆಗೆ ಪತ್ರಿಕೆಗಳಲ್ಲಿ ಮತ್ತು ನಗರದ ಹಲವೆಡೆ ಪೋಸ್ಟರುಗಳಲ್ಲಿ ಕಂಡ ಮಾ ಬ್ಲಾ [Mont Blanc] ಪೆನ್ನಿನ ಜಾಹೀರಾತನ್ನು ಕಂಡಾಗ ಈ ಪ್ರಶ್ನೆ ಸಹಜವಾಗಿ ನನ್ನಲ್ಲಿ ಉದ್ಭವವಾಯಿತು.





ಕನಸುಗಾರ ಯೂನಸ್ ಮತ್ತು ಲಾಭವಿಲ್ಲದ ವ್ಯಾಪಾರ

ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ತಮ್ಮ ಗ್ರಾಮೀಣ್ ಬ್ಯಾಂಕಿನ ಚಿಕ್ಕ ಸಾಲದ ಕಾರ್ಯಕ್ರಮದ ಮೂಲಕ ಖ್ಯಾತಿಯನ್ನು ಪಡೆದವರು. ಬಾಂಗ್ಲಾದೇಶದಂತಹ ಪುಟ್ಟ ದೇಶದಲ್ಲಿ ಬಡವರಿಗೆ ಅದರಲ್ಲೂ ಮುಖ್ಯವಾಗಿ ಹೆಂಗಸರಿಗೆ ವಿತ್ತೀಯ ಸೇವೆಗಳನ್ನೊದಗಿಸಿದ್ದೇ ಅಲ್ಲದೇ ಬ್ಯಾಂಕಿಂಗ್ ನಡೆಸಬಹುದಾದ ರೀತಿಯನ್ನೇ ಮೂಲಭೂತವಾಗಿ ಪ್ರಶ್ನಿಸಿ ಅದಕ್ಕೆ ಒಂದು ವಿಭಿನ್ನ ರೂಪವನ್ನು ಕೊಟ್ಟವರು.




ಭೂಗತ ಜಗತ್ತಿನ ಒಳನೋಟಗಳು

ಸುಧೀರ್ ವೆಂಕಟೇಶ್ ಅವರ ಗ್ಯಾಂಗ್ ಲೀಡರ್ ಫರ್ ಎ ಡೇ ಒಂದು ಕುತೂಹಲಕಾರಿ ಪುಸ್ತಕ. ನಿಜಕ್ಕೂ ಈ ಪುಸ್ತಕ ಗಂಭೀರ ಬರವಣಿಗೆ ಮತ್ತು ಜನಪ್ರಿಯ ಬರವಣಿಗೆಯ ಮಧ್ಯೆ ತೂರಾಡುತ್ತಾ, ಕಡೆಗೆ ಅನೇಕ ಪ್ರಶ್ನೆಗಳನ್ನು ಎಬ್ಬಿಸಿ ಅವುಗಳನ್ನು ಉತ್ತರಿಸಲು ಪ್ರಯತ್ನಿಸದೆಯೇ ನಿಂತುಬಿಡುತ್ತದೆ. ಹೀಗೆ ಎಲ್ಲಕ್ಕೂ ಉತ್ತರವನ್ನು ನೀಡುವುದು ಸುಧೀರ್ ಅವರ ಉದ್ದೇಶವೂ ಅಲ್ಲ, ಅದು ಸಾಧ್ಯವೂ ಆಗುವುದಿಲ್ಲ ಎನ್ನುವ ಭಾವನೆ ನಮಗೆ ಬರುವುದರಲ್ಲಿ ಯಾವ ಸೋಜಿಗವೂ ಇಲ್ಲ. ಆದರೂ ಈ ಪುಸ್ತಕವನ್ನು ನಾವು ಓದಿ ಚರ್ಚಿಸಬೇಕಾದ ಅವಶ್ಯಕತೆಯಿದೆ.