ಬಡವರು ಮತ್ತು ರಾಷ್ಟ್ರೀಕೃತ ಬ್ಯಾಂಕುಗಳು.
ಬಡಕುಟುಂಬಗಳ ಜೀವನದಲ್ಲಿ ಬೇಕಾದ ವಿತ್ತೀಯ ಸೇವೆಗಳ ಬಗೆಗಿನ ಮಾಹಿತಿಯನ್ನು ಪರಿಶಿಲಿಸೋಣ. 1971ರಲ್ಲಿ ನಡೆಸಿದ್ದ ರಾಷ್ಟ್ರೀಯ ದಶಮಾನ ಸರ್ವೆಯ ಪ್ರಕಾರ ಗ್ರಾಮೀಣ ಕುಟುಂಬಗಳ ಸುಮಾರು 30 ಪ್ರತಿಶತ ಸಾಲದ ಮೊತ್ತ ಮಾತ್ರ ಸಂಸ್ಥಾಗತ ಮೂಲಗಳಿಂದ [ಬ್ಯಾಂಕು, ಸಹಕಾರ ಸಂಘ - ಹೀಗೆ] ಬಂದಿದ್ದರೆ ಮಿಕ್ಕ 70 ಪ್ರತಿಶತ ಸಾಲದ ಮೊತ್ತವನ್ನು ಇತರ ಮೂಲಗಳಿಂದ ಈ ಕುಟುಂಬಗಳು ಪಡೆದಿದ್ದವು. ಬ್ಯಾಂಕುಗಳ ರಾಷ್ಟ್ರೀಕರಣ ಆಗಷ್ಟೇ ಆಗಿತ್ತು. 1981ಕ್ಕೆ ಬರುವ ವೇಳೆಗೆ ಸುಮಾರು 60 ಪ್ರತಿಶತ ಸಾಲದ ಮೊತ್ತ ಸಂಸ್ಥಾಗತ ಮೂಲಗಳಿಂದ ಬರಲು ಪ್ರಾರಂಭವಾಗಿತ್ತು. ನಗರ ಪ್ರದೇಶಗಳ ಮಾಹಿತಿಯೂ ಇದಕ್ಕಿಂತ ತೀವ್ರ ಭಿನ್ನತೆಯನ್ನೇನೂ ತೋರಿರಲಿಲ್ಲ. 1991ರ ವೇಳೆಗೆ ಸಂಸ್ಥಾಗತ ಮೂಲಗಳ ಪಾಲು 56 ಪ್ರತಿಶತಕ್ಕೆ ಇಳಿದಿತ್ತು. 2003ರಲ್ಲಿ ಪ್ರಪಂಚ ಬ್ಯಾಂಕು ನಡೆಸಿದ ಒಂದು ದೊಡ್ಡ ಅಧ್ಯಯನದಲ್ಲಿ ಸಂಸ್ಥೆಗಳ ಪಾಲು ತುಸುವೇ ಬೆಳಿದಿದ್ದು 1971-1981 ನಡುವೆ ಕಂಡಂಥಹ ಯಾವ ದೊಡ್ಡ ಬದಲಾವಣೆಯೂ ಕಂಡುಬರಲಿಲ್ಲ.
ವಿಷಯ ವೈವಿಧ್ಯ-
ಎಂ.ಎಸ್.ಶ್ರೀರಾಮ್,
ಕೃಷಿ,
ಚಿಕ್ಕಸಾಲ,
ಬಡವರು,
ಬ್ಯಾಂಕುಗಳು
| Reactions: |
ಬಡ್ಡಿವ್ಯಾಪಾರಿಗಳ ಕಥೆಗಳು
ಗ್ರಾಮೀಣ ಪ್ರದೇಶಗಳಲ್ಲಿನ ಬಡ್ಡಿವ್ಯಾಪಾರಿಗಳೆಂದರೆ ನಮ್ಮ ಮನಸ್ಸಿಗೆ ಯಾವ ಚಿತ್ರ ಬರುತ್ತದೆ? ಬಡ್ಡಿವ್ಯಾಪಾರಿಗಳೆಂದರೆ ದುಷ್ಟರು, ಶೋಷಕರು, ಬಡವರ ಜಮೀನನ್ನು ಒತ್ತುವರಿಮಾಡಿಕೊಳ್ಳುವವರು, ಹಾಗೂ ನಾನಾ ರೀತಿಯಲ್ಲಿ ಹಿಂಸಿಸುವ ಹೃದಯಹೀನರು ಅನ್ನುವ ಚಿತ್ರ ನಮ್ಮ ಮನಸ್ಸಿನಲ್ಲಿ ಬಂದರೆ ಅದು ಆಶ್ಚರ್ಯವನ್ನು ಉಂಟುಮಾಡಬಾರದು. ನಾನು ಪುಟ್ಟವನಾಗಿದ್ದಾಗಿನಿಂದಲೂ ಓದಿದ ಸಾಹಿತ್ಯ, ಕಂಡ ಸಿನೇಮಾ ಹಾಗೂ ಬೆಳೆದು ನಿಂತಾಗ ಓದಿದ ಬೌದ್ಧಿಕ ಬರಹಗಳೆಲ್ಲ ಈ ಚಿತ್ರವನ್ನು ನಮ್ಮ ಮುಂದಿಡುವುದರಲ್ಲಿ ಸಫಲವಾಗಿದ್ದುವು. ಇದೂ ಸಾಲದೆಂಬಂತೆ, ಸರಕಾರ ಯಾವುದೇ ಯೋಜನೆಯನ್ನು ರೂಪಿಸುವಾಗ ನಮಗೆ "ಬಡವರನ್ನು ಸಾಲಮುಕ್ತರನ್ನಾಗಿ ಮಾಡುವುದೂ", "ಬಡ್ಡಿವ್ಯಾಪಾರಿಗಳ ಹಿಡಿತದಿಂದ ಬಿಡಿಸುವುದೂ" ಮುಖ್ಯ ಕಾರ್ಯಕ್ರಮಗಳಾಗಿ ಕಾಣುತ್ತಿದ್ದುವು.
© ಎಂ.ಎಸ್.ಶ್ರೀರಾಮ್ |
ವಿಷಯ ವೈವಿಧ್ಯ-
ಚಿಕ್ಕಸಾಲ,
ಬಡವರು,
ಬಡ್ಡಿವ್ಯಾಪಾರಿ,
ಶ್ರೀರಾಮ್,
ಸ್ವ-ಸಹಾಯ ಗುಂಪುಗಳು
| Reactions: |
Subscribe to:
Posts (Atom)