ಯುಐಡಿ: ಯಾಕೆ ವಿಫಲವಾಗಬಹುದು, ಯಾಕೆ ಸಫಲವಾಗಬೇಕು

ಭಾರತದಲ್ಲಿ ವಾಸವಿರುವ ಪ್ರತಿಯೊಬ್ಬ ವ್ಯಕ್ತಿಗೂ ಅಸ್ತಿತ್ವದ ಗುರುತಿನ ಚೀಟಿ ಕೊಡಬೇಕೆಂದೇ ನಿಯಮಿಸಲ್ಪಟ್ಟ ಯುನಿಕ್ ಐಡಿ ಅಥಾರಿಟಿಯ ಮುಂದಿರುವುದು ಸುಲಭವಾದ ಸವಾಲೇನೂ ಅಲ್ಲ. ಈ ಸ್ಥರದ ಕೆಲಸ ಈವರೆಗೆ ಯಾವುದೇ ದೇಶದಲ್ಲಿ ನಡೆದಿಲ್ಲ. ಒಂದು ನೂರು ಕೋಟಿಕೂ ಹೆಚ್ಚಿನ ಜನಸಂಖ್ಯೆಯ ಗುರುತನ್ನು ಸಂಗ್ರಹಿಸಿ ಪ್ರತಿಯೊಬ್ಬರಿಗೂ ಒಂದು ವಿಶಿಷ್ಟ ಸಂಖ್ಯೆಯನ್ನು ನೀಡಿ ಆ ಸಂಖ್ಯೆ ಹೊಂದಿದ ವ್ಯಕ್ತಿಯ ಗುರುತನ್ನು ಒಂದೆಡೆ ಕಾಯ್ದಿಡುವುದಲ್ಲದೇ - ಬೇಕೆಂದಾಗ ತ್ವರಿತ ಗತಿಯಲ್ಲಿ ಆ ಗುರುತನ್ನು ಪರಿಶೀಲಿಸಿ ಧೃವೀಕರಿಸಹೊರಟಿರುವ ಈ ಯೋಜನೆ ಮಹತ್ವಾಕಾಂಕ್ಷೆಯಿಂದ ಕೂಡಿದೆ. ಯುಐಡಿ ಮುಂದಿರುವ ಸವಾಲುಗಳು ಮಹತ್ತರವಾದವು. ಅಂಥ ಸವಾಲನ್ನು ಎದುರಿಸಲು ಸಿದ್ಧರಾಗಿ ನಿಂತಿರುವ ನಂದನ್ ನಿಲೇಕಣಿ ಸಫಲರಾಗುವರೇ? ನಂದನ್ ಅವರ ಕೆಲಸ ಚುನಾವಣೆಗಳಿಗೆ ಗುರುತಿನ ಚೀಟಿ ಕೊಡಲು ಹೊರಟ ಶೇಷನ್ ಗಿಂತ ಎಷ್ಟು ಭಿನ್ನ ಹಾಗೂ ಎಷ್ಟು ಜಟಿಲ... ಹಾಗೂ ಅವರ ಸಾಫಲ್ಯಕ್ಕೆ ಮಾಪಕಗಳು ಏನು?





ಹೊಸ ಓದು: ಬಡ್ಡಿವ್ಯಾಪಾರಿಯ ಸಾವು - ಕಥನ ತಂತ್ರದ ಕೆಲವು ವಿಚಾರಗಳು

ಕೋಟ ನೀಲಿಮಾರ ಡೆಥ್ ಆಫ್ ಎ ಮನೀಲೆಂಡರ್ ಅನ್ನುವ ಇತ್ತೀಚಿನ ಪುಸ್ತಕ ಈಚೆಗೆ ಬರುತ್ತಿರುವ ಭಾರತೀಯರು ಬರೆಯುತ್ತಿರುವ ಇಂಗ್ಲೀಷ್ ಸಾಹಿತ್ಯದ ಸಂದರ್ಭದಲ್ಲಿ, ಒಂದು ಭಿನ್ನ ಲಹರಿಯನ್ನು ತರುತ್ತದೆ. ಇಂಗ್ಲೀಷಿನಲ್ಲಿ ಬರೆಯುವ ಭಾರತೀಯ ಬರಹಗಾರರು ಪಶ್ಚಿಮಾಭಿಮುಖವಾಗಿ ಯಾರನ್ನೋ ಮೆಚ್ಚಿಸಲು ಮಾತ್ರ ಬರೆಯುತ್ತಿದ್ದಾರೆ ಎನ್ನುವ ಆರೋಪ ಹೊರಿಸುವುದು ಅಸಮಂಜನವೇ ಸರಿ. ಆದರೆ ಇತ್ತೀಚಿನ ಬೆಳವಣಿಗೆಯನ್ನು ಕಂಡಾಗ, ಭಾರತ ಕೇಂದ್ರಿತವಾಗಿ ಬರುತ್ತಿರುವ ಬರವಣಿಗೆಯಲ್ಲಿ ನಮಗೆ ಐದು ಭಿನ್ನ ಎಳೆಗಳು ಕಾಣಿಸುತ್ತಿವೆ.

  • ಮೊದಲ ಎಳೆ ಭಾರತದ ಮೇಲ್ವರ್ಗವನ್ನು ಪ್ರತಿನಿಧಿಸುವ [ಆದರೆ ಸಾಹಿತ್ಯವನ್ನು ಪ್ರತಿನಿಧಿಸಲಾರದ] ಶೋಭಾ ಡೇ, ಚೇತನ್ ಭಗತ್ ಗಳು ಹರಿಯಬಿಡುತ್ತಿರುವ ಸಾಹಿತ್ಯ.
  • ಎರಡನೆಯ ಎಳೆ ಅರವಿಂದ ಅಡಿಗ, ಅರುಂಧತಿ ರಾಯ್ ಪ್ರತಿನಿಧಿಸುವ ಸಾಹಿತ್ಯ. ಇದರಲ್ಲಿ ಭಾರತದ ಮೂಲ ಎಳೆಗಳಿದ್ದರೂ, ಅವರುಗಳ ಮನಸ್ಸಿನಲ್ಲಿರು ಓದಗ ವೃಂದ ವಿಶ್ವವ್ಯಾಪಿಯಾದ್ದರಿಂದ ಅವರ ಬರವಣಿಗೆಯೂ ಸಾಕಷ್ಟು ಗ್ಲೋಬಲೈಸ್ಡ್ ಬರವಣಿಗೆಯಾಗಿರುತ್ತದೆ.
  • ನಿಜಕ್ಕೂ ವಿಶ್ವ ಸಾಹಿತ್ಯದ ವೇದಿಕೆಯ ಮೇಲೆ ಬರೆಯುತ್ತಾ ಭಾರತವನ್ನು ಆಗಾಗ ಸಂದರ್ಭ ಮಾಡಿಕೊಂಡು ಬರೆವ ಲೇಖಕರಾದ ವಿಕ್ರಂ ಸೇಠ್ ಮತ್ತು ಅಮಿತಾವ್ ಘೋಷ್ ಮೂರನೆಯ ಎಳೆಗೆ ಸೇರುತ್ತಾರೆ.
  • ನಾಲ್ಕನೆಯ ಎಳೆಯಲ್ಲಿ ಭಾರತೀಯ ಸಂಜಾತರಾಗಿ, ಇತರೆ ದೇಶದ ಪಾಸ್ ಪೋರ್ಟ್ ಹೊಂದಿರುವ, ಆಗಾಗ ಇಲ್ಲಿಗೆ ವಾಪಸ್ಸಾಗುವ, ತಮ್ಮ ನೆನಪಿನ ಗಣಿಯಿಂದ - ಅಥವಾ ಪ್ರವಾಸೀ ಬೆರಗಿನಿಂದ ಭಾರತವನ್ನು ನೋಡುವ ಆದರೂ ಸಮರ್ಥವಾಗಿ ಬರೆಯಬಲ್ಲ ಸಲ್ಮಾನ್ ರಶ್ದೀ, ಝುಂಪಾ ಲಹಿರಿಗಳದ್ದು.
  • ಐದನೆಯ ಎಳೆಯಲ್ಲಿ ರಾಜಾರಾವ್ ಶಶಿ ದೇಶಪಾಂಡೆ, ಕೆ.ಆರ್. ಉಷಾರಂತೆ ಸ್ಥಳೀಯ ಸಂವೇದನೆಯನ್ನು ಇಂಗ್ಲೀಷಿನಲ್ಲಿ ಸಮರ್ಥವಾಗಿ ಬಿಂಬಿಸುವ, ಸಾಧ್ಯವಾಗಿದ್ದರೆ ತಮ್ಮ ತಮ್ಮ ಭಾಷೆಗಳಲ್ಲಿಯೇ ಸಾಹಿತ್ಯ ರಚಿಸಬಹುದಾಗಿದ್ದ ಪರಂಪರೆಯ ಬರಹಗಾರರು. ಈ ಪರಂಪರೆಗೆ ಈಚಿನ ಸೇರ್ಪಡೆ ಕೋಟ ನೀಲಿಮಾ ಎನ್ನುವ ಲೇಖಕಿಯದ್ದು ಅನ್ನಿಸುತ್ತದೆ.






ಅಸ್ತಿತ್ವದ ಗುರುತಿನ ಚೀಟಿ

ಹಲವು ವರ್ಷಗಳ ಹಿಂದೆ ರಜೆಗೆ ಬೆಂಗಳೂರಿಗೆ ಬಂದಿದ್ದ ಪುಟ್ಟ ಹುಡುಗ ತಾನಿಳಿದುಕೊಂಡಿದ್ದ ಮನೆಯಲ್ಲಿದ್ದ ಹಿರಿಯರೊಬ್ಬರನ್ನು "ನೀನು ಯಾರು?" ಎಂದು ಕೇಳಿದ. ಅದಕ್ಕೆ ಆ ಹಿರಿಯರು ಒಂದು ದೀರ್ಘ ಆಲೋಚನೆಗೆ ಬಿದ್ದು "ಮಗೂ, ಆ ವಿಷಯವನ್ನೇ ತಿಳಿದುಕೊಳ್ಳಲು ಅನೇಕ ದಾರ್ಶನಿಕರು ಪ್ರಯತ್ನಿಸಿದ್ದಾರೆ, ಹಾಗೂ ಆ ವಿಷಯವನ್ನು ಅರ್ಥಮಾಡಿಕೊಳ್ಳಲೆಂದೇ ನಾನು ವೇದಾಂತದ ಕ್ಲಾಸುಗಳಿಗೆ ಹೋಗುತ್ತಿದ್ದೇನೆ!" ಎಂದಿದ್ದರು.





ಬಂಡವಾಳಶಾಹಿ ತತ್ವದ ನಿರಂತರತೆ?

ಈಚೆಗೆ ನಡೆದ ಒಂದು ಸೆಮಿನಾರಿನಲ್ಲಿ ಬಂಡವಾಳಶಾಹಿ ಸೂತ್ರಗಳು ನಿರಂತರವೇ, ಅಥವಾ ಆ ತತ್ವದ ಭವಿಷ್ಯ ಸೀಮಿತವಾಗಿದೆಯೇ ಎಂಬ ಪ್ರಶ್ನೆಯನ್ನು ಚರ್ಚೆಗೊಳಪಡಿಸಿದ್ದರು. ಮ್ಯಾನೇಜ್ ಮಂಟ್ ಪಠಿಸುವ ಐಐಎಂನಂತಹ ಸಂಸ್ಥೆಯಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳು ಈ ಪ್ರಶ್ನೆಯನ್ನು ಕೇಳಹತ್ತಿದ್ದದ್ದೇ ಕುತೂಹಲದ, ಸೋಜಿಗದ ವಿಷಯ. ಅನೇಕ ಬಾರಿ ಮಾತಿನಲ್ಲಿ ಅನಂತಮೂರ್ತಿಯವರು ಐಐಎಂಅನ್ನು ವ್ಯಾಪಾರಿಗಳ ಕಾಶಿ ಎಂದು ಲಘುವಾಗಿ ಗೇಲಿಮಾಡಿರುವದುಂಟು. ಈ ಇಂಥ ಕಾಶಿಯಲ್ಲಿ "ವಿಶ್ವನಾಥನು ದೇವರೇ?" ಎಂದು ಪ್ರಶ್ನಿಸುವ ಪರಿ ನನಗೆ ತುಸು ಸೋಜಿಗವನ್ನುಂಟುಮಾಡಿತ್ತು. ಆದರೆ ಮಾರುಕಟ್ಟೆಯ ಮಹಾತ್ಮನ ನಂಬಿಕೆ ಆಧಾರವಾಗಿಯೇ ತಮ್ಮ ಭವಿಷ್ಯದ ಕನಸುಗಳನ್ನು ಕಟ್ಟಿದ್ದ ವಿದ್ಯಾರ್ಥಿಗಳಿಗೆ ಅಮೇರಿಕದ ದೊಡ್ಡ - ನೂರೈವತ್ತು ವರ್ಷಗಳಿಗೂ ಹೆಚ್ಚುಕಾಲ ಆ ಸೂತ್ರಗಳ ಆಧಾರದ ಮೇಲೆಯೇ ನಡೆದ ದೊಡ್ಡ ವಿತ್ತೀಯ ಸಂಸ್ಥೆಗಳು ಇದ್ದಕ್ಕಿದ್ದ ಹಾಗೆ ರಾತ್ರೋರಾತ್ರಿ ಕುಸಿದದ್ದು ಕಂಡು ತಮ್ಮ ನಂಬಿಕೆಗಳನ್ನು ಪ್ರಶ್ನಿಸಿಕೊಳ್ಳುವ ಅಂತರಾವಲೋಕನಕ್ಕೆ ಎಡೆಮಾಡಿದ್ದಿರಬಹುದು.