ಇಪ್ಪತ್ತು ವರುಷಗಳ ಹಿಂದೆ ಬರವಣಿಗೆ ಎನ್ನುವುದು ಕಾಗದದ ಮೇಲೆ ಸೇರಿಸುವ ಅಕ್ಷರಜಾಲವಾಗಿತ್ತು. ಹಾಗೂ ಬರೆದದ್ದು ಪ್ರಕಟಗೊಳ್ಳಲು ಹಲವು ಸಹಜ ಅಡಚಣೆಗಳೂ ಇದ್ದುವು. ಈಗ ತಂತ್ರಜ್ಞಾನದ ವೃದ್ಧಿಯೊಂದಿಗೆ ಇಂದು ಕೀಲಿಮಣೆಯ ಮೇಲೆ ಹಲವುಬಾರಿ ಬೆರಳುಗಳನ್ನಾಡಿಸಿ, ಒಂದು ಗುಂಡಿಯನ್ನು ಒತ್ತಿದರೆ ಬರೆದದ್ದು ಜಗತ್ತಿಗೇ ತಿಳಿಯುತ್ತದೆ. ಅಚ್ಚು ಮಾಧ್ಯಮದಲ್ಲೂ ಇದು ತುಂಬಾ ಸರಳವಾಗಿದೆಯೆಂದು ಗೆಳೆಯರೊಬ್ಬರು ಹೇಳಿದರು. ಡಿಟಿಪಿಯ ತಂತ್ರಜ್ಞಾನ ಬಂದಿರುವುದರಿಂದ ಮೊದಲು 1000 ಪ್ರತಿಗಳಿಗೆ ಕಡಿಮೆ ಅಚ್ಚು ಮಾಡುವುದು ಕಷ್ಟ ಎಂದು ಒದ್ದಾಡುತ್ತಿದ್ದುದಕ್ಕೆ ವಿರುದ್ಧವಾಗಿ 150 ಪ್ರತಿಗಳನ್ನು ಅಚ್ಚು ಹಾಕಬಹುದಾದ ಸಾಧ್ಯತೆಯಿದೆಯಂತೆ. ಅಕ್ಷರ ಜೋಡಣೆಯನ್ನು ಕಂಪ್ಯೂಟರಿನಲ್ಲಿ ಕಾಯ್ದಿರಿಸಬಹುದಾದ್ದರಿಂದ, ಸರಕಾರಿ, ಲೈಬ್ರರಿ ಆರ್ಡರುಗಳು ಬಂದಾಗ ಇನ್ನಷ್ಟು ಪ್ರತಿಗಳನ್ನು ಅಚ್ಚು ಹಾಕಬಹುದು...
ಕನ್ನಡ ಭಾಷೆ, ತಂತ್ರಾಂಶ ಮತ್ತು ಬ್ಲಾಗ್ ಲೋಕ
ವಿಷಯ ವೈವಿಧ್ಯ-
ಎಂ.ಎಸ್.ಶ್ರೀರಾಮ್,
ಕನ್ನಡ,
ಕೀಲಿಮಣೆ,
ಟೈಪ್ ರೈಟರ್,
ದೇಶಕಾಲ,
ಬರಹ,
ಬ್ಲಾಗ್,
ಸೇಡಿಯಾಪು
| Reactions: |
ಯುದ್ಧಾನಂತರದ ಅಫಘಾನಿಸ್ತಾನ - ವಿರೋಧಾಭಾಸದ ನಡುವೊಂದಿಷ್ಟು ದೇಶಭಕ್ತಿ
ಅಫಘಾನಿಸ್ತಾನದ ಉಸ್ತುವಾರಿ ತಾಲಿಬಾನ್ ಕೈಯಿಂದ ಸ್ಥಳೀಯರ, ಪ್ರಜಾಪ್ರತಿನಿಧಿಗಳ ಕೈಗೆ ಸೇರಿ ಹಲವು ವರ್ಷಗಳಾಗಿವೆ. ಹಾಗೆಂದು ಆ ದೇಶದ ಸಂಪೂರ್ಣ ಸೂತ್ರಗಳು ಪ್ರಜಾಪ್ರಭುತ್ವದ ಅಡಿಪಾಯದ ಮೇಲೆ ನಡೆಯುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಹಳೆಯ ಯುದ್ಧಕೋರರು, ಮಾದಕ ವಸ್ತುಗಳನ್ನು ಮಾರಾಟ ಮಾಡುವ ಮಾಫಿಯಾ ಹಾಗೂ ಮತಾಂಧ ಮೂಲಭೂತವಾದಿಗಳು ಇನ್ನೂ ದೇಶದ ಬಹಳಷ್ಟು ಪ್ರಾಂತಗಳಲ್ಲಿ ಇದ್ದಾರೆ. ಆದರೂ ಆ ದೇಶದಲ್ಲಿ ಕೆಲವು ಗಮ್ಮತ್ತಿನ ವಿಚಾರಗಳು ನನಗೆ ಕಂಡುವು.
© ಎಂ.ಎಸ್.ಶ್ರೀರಾಮ್ |
ವಿಷಯ ವೈವಿಧ್ಯ-
ಅಫಘಾನಿಸ್ಥಾನ,
ಎಂ.ಎಸ್. ಶ್ರೀರಾಮ್,
ಕಾಬುಲ್,
ತಾಲಿಬಾನ್
| Reactions: |
Subscribe to:
Posts (Atom)