ಟಾಪ್-ಡೌನ್ ಮತ್ತು ಬಾಟಮ್-ಅಪ್ ರಾಜಕೀಯ

ಈಚೆಗೆ ನಡೆದ ಒಂದು ಸಂವಾದದಲ್ಲಿ ದೇಶದ ಸಮಸ್ಯೆಗಳನ್ನು ಚರ್ಚಿಸುತ್ತಾ ಮಹಾಶಯರೊಬ್ಬರು ಕೇಂದ್ರ ಸರಕಾರದ ಮೇಲೆ ಮುಗಿಬಿದ್ದು ಅದರ ಯೋಜನೆಗಳೆಲ್ಲಾ ವಿಫಲವಾಗಿವೆ, ಟಾಪ್-ಡೌನ್ ಬಿಟ್ಟು ಬಾಟಮ್-ಅಪ್ ರೀತಿಯಲ್ಲಿ ನಾವು ಕೆಲಸ ಮಾಡಿದಾಗಲೇ ನಮ್ಮ ದೇಶದ ಶ್ರೀಸಾಮಾನ್ಯರ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಹೇಳಿದರು. ತಮ್ಮ ರಾಜಕೀಯ ಅರಂಗೇಟ್ರಂ ಸೂಚಿಸುತ್ತಾ "ಜನರನ್ನು ಒಳಗೊಂಡ" ಯೋಜನೆಗಳನ್ನು ತಮ್ಮ ಪಕ್ಷ ತಯಾರಿಸುವುದೆಂದು ಕೇಜ್ರೀವಾಲ್ ಕೂಡಾ ಹೇಳಿದ್ದರು. ಗುಜರಾತಿನಿಂದ ವಸೂಲಾಗುವ ತೆರಿಗೆಯನ್ನು ಗುಜರಾತಿಗೇ ನೀಡಿಬಿಟ್ಟರೆ ಕೇಂದ್ರದ ಸಹಾಯವೇ ಬೇಡ ಎಂದು ನರೇಂದ್ರ ಮೋದಿ ಹೇಳಿದ್ದರು. ಬಾಳಾ ಠಾಕ್ರೆಯಂಥಹ ಸ್ಥಳೀಯ ನಾಯಕರು ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುವುದಕ್ಕೂ ಸ್ಥಳೀಯ ಸಮಸ್ಯೆಗಳನ್ನು ರಾಷ್ಟ್ರೀಕರಿಸುವುದಕ್ಕೂ ಕಾರಣ ಈ ಕೇಂದ್ರೀಕರಣ-ವಿಕೇಂದ್ರೀಕರಣದ ಅಸಮತೋಲನದ ಕಷ್ಟದ ವಿಚಾರವೇ ಆಗಿರಬಹುದು.


ಮುಂದೆ.....



No comments: