ಸಹಕಾರಕ್ಕೆ ಕರುಣೆ ಸುತ್ತೋಲೆಗಳ ಕಂಟಕ

ಹೊರಗಿನವರು ನಮ್ಮ ಒಂದು ಗ್ರಾಮಕ್ಕೆ ಭೇಟಿ ನೀಡಿದರೆ, ಅಲ್ಲಿ ಸಾಮಾನ್ಯವಾಗಿ ಉಳಿದುಕೊಳ್ಳುವ ವ್ಯವಸ್ಥೆಯಿರುವುದಿಲ್ಲ. ಹತ್ತಿರದ ತಾಲೂಕು ಪಟ್ಟಣದ ಸರ್ಕೀಟ್ ಹೌಸೇ ಹೊರಗಿನವರಿಗೆ ಸಿಗಬಹುದಾದ ತಂಗುದಾಣ. ಬಾಡಿಗೆಗೂ ಮನೆಗಳು ಸಿಗುವುದು ದುರ್ಲಭ. ಒಂದು ಗ್ರಾಮದಲ್ಲಿ ಸಾಧಾರಣ ನಮಗೆ ಟಪಾಲಾಪೀಸು, ಹಾಲಿನ ಸಂಘ, ಪ್ರಾಥಮಿಕ ಶಾಲೆ, ಪಂಚಾಯ್ತಿ ಮತ್ತು ಗುಡಿ ಕಾಣಸಿಗಬಹುದು. ಈ ಎಲ್ಲವನ್ನೂ ಸ್ಥಳೀಯರೇ, ಅಥವಾ ಆಸುಪಾಸಿನ ಊರಿನವರೇ ನಡೆಸುತ್ತಾರೆ. ಹೀಗೆಯೇ ಹಲವು ಗ್ರಾಮಗಳಿಗೊಂದರಂತೆ ನಮಗೆ ಪ್ರಾಥಮಿಕ ವ್ಯವಸಾಯ ಪತ್ತಿನ ಸೇವಾ ಸಹಕಾರ ಸಂಘಗಳೂ ಕಾಣಿಸುತ್ತಿದ್ದುವು. ಈ ಸಂಘಗಳ ನಿರ್ವಹಣೆಯನ್ನು ಸ್ಥಳೀಯರು ನಡೆಸುತ್ತಿದ್ದರು, ಗ್ರಾಮದ ಯುವಕನೊಬ್ಬ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದ, ಸಹಕಾರ ಸಂಘದ ವ್ಯಾಪಾರಕ್ಕನುಸಾರವಾಗಿ ಒಂದಿಬ್ಬರು ಹುಡುಗರಿಗೂ ಅಲ್ಲಿ ಕೆಲಸ ಸಿಗುತ್ತಿತ್ತು. ಈ ಸಂಘ ಗ್ರಾಮದ ರೈತರನ್ನು ಒಂದೆಡೆಗೆ ಸೇರಿಸುವ ಕೆಲಸ ಮಾಡುತ್ತಿತ್ತು. ಒಂದೆಡೆಗೆ ಸೇರಲು – ಅಥವಾ ಸಂಘಕ್ಕೆ ರೈತರು ಬರಲು ಮುಖ್ಯವಾದ ಕಾರಣವೆಂದರೆ ಆ ಸಂಘ ರೈತರ ಕೃಷಿಗೆ ಸಾಲವನ್ನು ನೀಡುತ್ತಿತ್ತು. ಅವರ ಹಣ ಠೇವಣಿಯಾಗಿಟ್ಟರೆ ಸ್ವೀಕರಿಸುತ್ತಿತ್ತು. ರಸಗೊಬ್ಬರ, ಕೀಟನಾಶಕಗಳನ್ನು ಮಾರಾಟ ಮಾಡುತ್ತಿತ್ತು. ಹೀಗೆ ಗ್ರಾಮಸ್ಥರಿಗೆ ರಾಜಕೀಯ ಚರ್ಚಿಸಲು ಪಂಚಾಯ್ತಿ ಕಟ್ಟೆಯಿಂದ್ದಂತೆ, ಕೃಷಿಯನ್ನೂ ಅದರ ಅರ್ಥಿಕತೆಯನ್ನು ಹಂಚಿಕೊಳ್ಳಲು ಪತ್ತಿನ ಸಹಕಾರ ಸಂಘಗಳಿದ್ದುವು.

ಮುಂದೆ.....





No comments: