Showing posts with label ಕೆಂಡಸಂಪಿಗೆ. Show all posts
Showing posts with label ಕೆಂಡಸಂಪಿಗೆ. Show all posts

ಜೈ ಅಂತ - ವಾಹ್ ತಾಜ್


ಮುಂಬಯಿಗೆ ನಾನು ಅನೇಕ ಬಾರಿ ಹೋಗಿದ್ದರೂ, ಕೆಲವು ಯಾತ್ರೆಗಳು ಮಾತ್ರ ನೆನಪಿನಲ್ಲಿ ಉಳಿಯುಂವಥಹವಾಗಿವೆ. ಮೊದಲ ಬಾರಿಗೆ ನಾನು ಮುಂಬಯಿಗೆ ಹೋದಾಗ ನಾನು ಹದಿನಾರುವರುಷದವನಾಗಿದ್ದೆ. ಒಬ್ಬನೇ ಹೋಗಿ ಮುಲುಂದಿನ ನನ್ನ ಬಂಧುಗಳ ಮನೆಯಲ್ಲಿ ಉಳಿದು ಮುಂಬಯಿಯನ್ನು ನೋಡಿಬಂದಿದ್ದೆ. ಗೇಟ್‌ವೇ, ವಿಟಿ, ಲೋಕಲ್ ರೈಲು ಎಲ್ಲದರ ಅನುಭವವೂ ಆಗಿತ್ತು. ಪ್ರತಿದಿನ ನಾನು ಪೀಕ್ ಅವರ್ ತಪ್ಪಿಸಿ ಹೊರಗೆ ಹೋಗುವುದು, ಮತ್ತೆ ಯಾವ ಕಷ್ಟವೂ ಇಲ್ಲದೇ ವಾಪಸ್ಸಾಗುವುದು, ಒಟ್ಟಾರೆ ಮುಂಬಯಿ ಎಂದರೆ ಬಂದವರ ಭೀತಿಯೊಂದಿಗೆ ಅತಿಥೇಯರ ಭೀತಿಯೂ ಇರುತ್ತಿತ್ತು ಅನ್ನಿಸುತ್ತದೆ. ಮೊದಲ ಯಾವ ತೊಂದರೆಯೂ ಇಲ್ಲದೇ ಆಯಿತು. ಅನೇಕ ಸ್ಥಳಗಳನ್ನು ನೋಡಿದೆ ಹಾಗೂ ಒಂದು ವಿಚಿತ್ರ ಭಾವನೆಯೊಂದಿಗೆ ವಾಪಸ್ಸಾದೆ. ರಾಘವೇಂದ್ರ ಪಾಟೀಲರ ಅಜ್ಞಾತ ಮುಂಬಯಿ ಓದಿದಾಗ ನನ್ನ ಮೊದಲ ಭೇಟಿಯ ನೆನಪಾಯಿತು.

ಮುಂದೆ....