Showing posts with label ಚಿಕ್ಕಸಾಲ. Show all posts
Showing posts with label ಚಿಕ್ಕಸಾಲ. Show all posts

ಬಡವರು ಮತ್ತು ರಾಷ್ಟ್ರೀಕೃತ ಬ್ಯಾಂಕುಗಳು.

ಬಡಕುಟುಂಬಗಳ ಜೀವನದಲ್ಲಿ ಬೇಕಾದ ವಿತ್ತೀಯ ಸೇವೆಗಳ ಬಗೆಗಿನ ಮಾಹಿತಿಯನ್ನು ಪರಿಶಿಲಿಸೋಣ. 1971ರಲ್ಲಿ ನಡೆಸಿದ್ದ ರಾಷ್ಟ್ರೀಯ ದಶಮಾನ ಸರ್ವೆಯ ಪ್ರಕಾರ ಗ್ರಾಮೀಣ ಕುಟುಂಬಗಳ ಸುಮಾರು 30 ಪ್ರತಿಶತ ಸಾಲದ ಮೊತ್ತ ಮಾತ್ರ ಸಂಸ್ಥಾಗತ ಮೂಲಗಳಿಂದ [ಬ್ಯಾಂಕು, ಸಹಕಾರ ಸಂಘ - ಹೀಗೆ] ಬಂದಿದ್ದರೆ ಮಿಕ್ಕ 70 ಪ್ರತಿಶತ ಸಾಲದ ಮೊತ್ತವನ್ನು ಇತರ ಮೂಲಗಳಿಂದ ಈ ಕುಟುಂಬಗಳು ಪಡೆದಿದ್ದವು. ಬ್ಯಾಂಕುಗಳ ರಾಷ್ಟ್ರೀಕರಣ ಆಗಷ್ಟೇ ಆಗಿತ್ತು. 1981ಕ್ಕೆ ಬರುವ ವೇಳೆಗೆ ಸುಮಾರು 60 ಪ್ರತಿಶತ ಸಾಲದ ಮೊತ್ತ ಸಂಸ್ಥಾಗತ ಮೂಲಗಳಿಂದ ಬರಲು ಪ್ರಾರಂಭವಾಗಿತ್ತು. ನಗರ ಪ್ರದೇಶಗಳ ಮಾಹಿತಿಯೂ ಇದಕ್ಕಿಂತ ತೀವ್ರ ಭಿನ್ನತೆಯನ್ನೇನೂ ತೋರಿರಲಿಲ್ಲ. 1991ರ ವೇಳೆಗೆ ಸಂಸ್ಥಾಗತ ಮೂಲಗಳ ಪಾಲು 56 ಪ್ರತಿಶತಕ್ಕೆ ಇಳಿದಿತ್ತು. 2003ರಲ್ಲಿ ಪ್ರಪಂಚ ಬ್ಯಾಂಕು ನಡೆಸಿದ ಒಂದು ದೊಡ್ಡ ಅಧ್ಯಯನದಲ್ಲಿ ಸಂಸ್ಥೆಗಳ ಪಾಲು ತುಸುವೇ ಬೆಳಿದಿದ್ದು 1971-1981 ನಡುವೆ ಕಂಡಂಥಹ ಯಾವ ದೊಡ್ಡ ಬದಲಾವಣೆಯೂ ಕಂಡುಬರಲಿಲ್ಲ.






ಬಡ್ಡಿವ್ಯಾಪಾರಿಗಳ ಕಥೆಗಳು

ಗ್ರಾಮೀಣ ಪ್ರದೇಶಗಳಲ್ಲಿನ ಬಡ್ಡಿವ್ಯಾಪಾರಿಗಳೆಂದರೆ ನಮ್ಮ ಮನಸ್ಸಿಗೆ ಯಾವ ಚಿತ್ರ ಬರುತ್ತದೆ? ಬಡ್ಡಿವ್ಯಾಪಾರಿಗಳೆಂದರೆ ದುಷ್ಟರು, ಶೋಷಕರು, ಬಡವರ ಜಮೀನನ್ನು ಒತ್ತುವರಿಮಾಡಿಕೊಳ್ಳುವವರು, ಹಾಗೂ ನಾನಾ ರೀತಿಯಲ್ಲಿ ಹಿಂಸಿಸುವ ಹೃದಯಹೀನರು ಅನ್ನುವ ಚಿತ್ರ ನಮ್ಮ ಮನಸ್ಸಿನಲ್ಲಿ ಬಂದರೆ ಅದು ಆಶ್ಚರ್ಯವನ್ನು ಉಂಟುಮಾಡಬಾರದು. ನಾನು ಪುಟ್ಟವನಾಗಿದ್ದಾಗಿನಿಂದಲೂ ಓದಿದ ಸಾಹಿತ್ಯ, ಕಂಡ ಸಿನೇಮಾ ಹಾಗೂ ಬೆಳೆದು ನಿಂತಾಗ ಓದಿದ ಬೌದ್ಧಿಕ ಬರಹಗಳೆಲ್ಲ ಈ ಚಿತ್ರವನ್ನು ನಮ್ಮ ಮುಂದಿಡುವುದರಲ್ಲಿ ಸಫಲವಾಗಿದ್ದುವು. ಇದೂ ಸಾಲದೆಂಬಂತೆ, ಸರಕಾರ ಯಾವುದೇ ಯೋಜನೆಯನ್ನು ರೂಪಿಸುವಾಗ ನಮಗೆ "ಬಡವರನ್ನು ಸಾಲಮುಕ್ತರನ್ನಾಗಿ ಮಾಡುವುದೂ", "ಬಡ್ಡಿವ್ಯಾಪಾರಿಗಳ ಹಿಡಿತದಿಂದ ಬಿಡಿಸುವುದೂ" ಮುಖ್ಯ ಕಾರ್ಯಕ್ರಮಗಳಾಗಿ ಕಾಣುತ್ತಿದ್ದುವು.






ಖರ್ಚಿನಿಂದ ಉಳಿತಾಯ: ಕೆಲವು ಮಾದರಿಗಳು


ಹಲವು ವರ್ಷಗಳ ನನ್ನ ಸ್ನೇಹಿತನೊಬ್ಬ ಹೀಗೆ ಹೇಳುತ್ತಿದ್ದುದುಂಟು: "ಈ ನಡುವೆ ನನಗೆ ದುಡ್ಡಿಗೆ ಬಹಳ ಕಷ್ಟವಾಗಿಬಿಟ್ಟಿದೆ. ಯಾಕೆಂದರೆ ನನ್ನ ಆದಾಯವೆಲ್ಲಾ ಸೇವಿಂಗ್ಸ್ ನಲ್ಲಿಯೇ ಖರ್ಚಾಗಿಬಿಡುತ್ತದೆ!" ಇದು ಒಂದು ರೀತಿಯಿಂದ ಯೋಚಿಸಬೇಕಾದ, ಗಹನವಾದ ವಿಚಾರ. ಉಳಿತಾಯ ಮಾಡಿದಷ್ಟೂ ಹಣವನ್ನು ನಾವು ಪುನಃ ಸಂಪಾದಿಸಿದ ಹಾಗೆಯೇ. ಇಷ್ಟಾದರೂ, ಬಡವರಿಗೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿರುವವರಿಗೆ ಸಾಲ ಪಡೆವ ಮಾರ್ಗಗಳನ್ನು ಸರಕಾರಗಳೂ, ಖಾಸಗೀ ಸಂಸ್ಥೆಗಳೂ ಒದಗಿಸಿಕೊಡುತ್ತವೆಯೇ ಹೊರತು, ಉಳಿತಾಯ ಮಾಡುವ ಹೆಚ್ಚಿನ ಮಾರ್ಗಗಳನ್ನು ನಾವು ಕಂಡಿಲ್ಲ. ಮೈಕ್ರೋಫೈನಾನ್ಸ್ ವಿಷಯಕ್ಕೆ ಬಂದಾಗಲೂ ಸಾಲ ಕೊಡುವ ಅನೇಕ ಮಾದರಿಗಳು ನಮಗೆ ಸಿಗುತ್ತವಾದರೂ ’ಚಿಕ್ಕ ಉಳಿತಾಯದ’ ಮಾದರಿಗಳು ಕಡಿಮೆಯೇ. ಬಡವರಿಗೆ ಉಳಿತಾಯ ಮಾಡುವ ಕ್ಷಮತೆಯಿಲ್ಲವೆನ್ನುವ ಪ್ರತಿಪಾದನೆಯನ್ನು ನಾವು ಅಲ್ಲಲ್ಲಿ ಕಾಣುತ್ತೇವಾದರೂ, ಆ ವಾದದಲ್ಲಿ ಪೂರ್ಣ ಸತ್ಯವಿಲ್ಲ. ಬ್ಯಾಂಕುಗಳ ಮಾಹಿತಿಯನ್ನು ನಾವು ಗಮನಿಸಿದಾಗ ಅನೇಕ ಹಿಂದುಳಿದ ಪ್ರಾಂತಗಳಲ್ಲಿ ಬ್ಯಾಂಕುಗಳಲ್ಲಿ ಇರುವ ಠೇವಣಿಯ ಮೊತ್ತ ಆ ಶಾಖೆಗಳು ಕೊಡುವ ಸಾಲದ ಮೊತ್ತಕ್ಕಿಂತ ಐದಾರು ಪಟ್ಟು ಹೆಚ್ಚಿರುವುದನ್ನು ನಾವು ನೋಡಬಹುದು. ಹೀಗಾಗಿ ಬಿಹಾರ, ಉತ್ತರಪ್ರದೇಶ, ರಾಜಾಸ್ಥಾನದಂತಹ ರಾಜ್ಯಗಳ ಉಳಿತಾಯದ ಹಣ ಮುಂಬಯಿನ ದೊಡ್ಡ ವ್ಯಾಪಾರಗಳ ಮೂಲಧನವಾಗುತ್ತಿರುವುದನ್ನು ನಾವು ಕಾಣಬಹುದು.





ಚಿಕ್ಕಸಾಲ, ಬಡತನ, ಮತ್ತು ಮಹಿಳೆಯರು: ಒಂದು ಕಥನ


ಬಡನದ ನಿರ್ಮೂಲನೆಯ ವಿಷಯಕ್ಕೆ ಬಂದಾಗ ಯಾವರೀತಿಯ ಪ್ರಣಾಲಿಗಳು ಯಶಸ್ವಿಯಾಗಿರುತ್ತವೆ ಎಂದು ಹೇಳುವುದು ಕಷ್ಟದ ಮಾತು. ನಮ್ಮ ಯೋಚನೆ ಮೂಲಭೂತವಾಗಿ ಬಡವರ ಆದಾಯವನ್ನು ಹೆಚ್ಚಿಸುವದರತ್ತ ಇರಬೇಕೇ ಅಥವಾ ಅವರ ಜೀವನದಲ್ಲಿರಬಹುದಾದ ಏರುಪೇರುಗಳನ್ನು ಕಡಿಮೆ ಮಾಡುವತ್ತ ವ್ಯೂಹವನ್ನು ರಚಿಸಬೇಕೇ ಅನ್ನುವುದು ಒಂದು ರೀತಿಯ ದ್ವಂದ್ವದ ಮಾತೇ. [ಮೈಕ್ರೊಫೈನಾನ್ಸ್] ಚಿಕ್ಕಸಾಲದ ಕಾರ್ಯಕ್ರಮಗಳು ಬಡತನವನ್ನು ಕಡಿಮೆ ಮಾಡುವತ್ತ ಕೆಲಸ ಮಾಡುತ್ತವೆ ಎನ್ನುವ ಮಾತನ್ನ ಸಾಲ ಕೊಡುವ ಪ್ರತೀ ಸಂಸ್ಥೆಯೂ ಪ್ರತಿಪಾದಿಸುತ್ತಾ ಬಂದಿದ್ದರೂ ಈ ಕಾರ್ಯಕ್ರಮದಿಂದಾಗಿ ಬಡತನದ ಮೇಲೆ ಮೂಲಭೂತವಾದ ಪರಿಣಾಮವಾಗಿದೆಯೆಂದೂ, ಎಲ್ಲಕ್ಕಿಂತ ಇದೇ ಸಶಕ್ತ ಕಾರ್ಯಕ್ರಮವೆಂದೂ ಪ್ರಶ್ನಾತೀತವಾಗಿ ನಿರೂಪಿಸಲು ಯಾವುದೇ ಅಧ್ಯಯನಕ್ಕೆ ಸಾಧ್ಯವಾಗಿಲ್ಲ.






ಕನಸುಗಾರ ಯೂನಸ್ ಮತ್ತು ಲಾಭವಿಲ್ಲದ ವ್ಯಾಪಾರ

ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ತಮ್ಮ ಗ್ರಾಮೀಣ್ ಬ್ಯಾಂಕಿನ ಚಿಕ್ಕ ಸಾಲದ ಕಾರ್ಯಕ್ರಮದ ಮೂಲಕ ಖ್ಯಾತಿಯನ್ನು ಪಡೆದವರು. ಬಾಂಗ್ಲಾದೇಶದಂತಹ ಪುಟ್ಟ ದೇಶದಲ್ಲಿ ಬಡವರಿಗೆ ಅದರಲ್ಲೂ ಮುಖ್ಯವಾಗಿ ಹೆಂಗಸರಿಗೆ ವಿತ್ತೀಯ ಸೇವೆಗಳನ್ನೊದಗಿಸಿದ್ದೇ ಅಲ್ಲದೇ ಬ್ಯಾಂಕಿಂಗ್ ನಡೆಸಬಹುದಾದ ರೀತಿಯನ್ನೇ ಮೂಲಭೂತವಾಗಿ ಪ್ರಶ್ನಿಸಿ ಅದಕ್ಕೆ ಒಂದು ವಿಭಿನ್ನ ರೂಪವನ್ನು ಕೊಟ್ಟವರು.





ಚಿಕ್ಕಸಾಲಕ್ಕೆ ವಲಸೆಬಂದ ವಿಕಾಸವಾದಿಗಳು

ಎರಡು ದಶಕಗಳ ಕೆಳಗೆ ಮೈಕ್ರೊಫೈನಾನ್ಸ್ [ಚಿಕ್ಕಸಾಲ]ದ ಮೊದಲ ಅಲೆ ಪ್ರಾರಂಭವಾಯಿತು ಎನ್ನಬಹುದು. ಚಿಕ್ಕಸಾಲವೆಂದರೆ ಸ್ವ-ಸಹಾಯ ಗುಂಪುಗಳೆಂದು ನಾವುಗಳು ಸರಳವಾಗಿ ಅರ್ಥ ಮಾಡಿಕೊಳ್ಳುತ್ತಿದ್ದೆವು. ನಮ್ಮ ದೇಶಕ್ಕೆ ನಮ್ಮದೇ ಆದ ಸಹಕಾರೀ ತತ್ವದ ಮೇಲೆ ಆಧಾರಿತವಾದ ಮಹಿಳೆಯರಿಂದಲೇ ಚಲಾಯಿಸಲ್ಪಡುತ್ತಿದ್ದ ಲಕ್ಷಾಂತರ ಗುಂಪುಗಳು ಹೆಚ್ಚಾಗಿ ದಕ್ಷಿಣ ಭಾರತದಲ್ಲಿದ್ದುವು. ಈ ಗುಂಪುಗಳ ಜೊತೆಗೆ ಅಹಮದಾಬಾದಿನ ಸೇವಾ ಬ್ಯಾಂಕನ್ನು ಚಿಕ್ಕಸಾಲಿಗರೆಂದು ಕರೆಯುವುದು ಪ್ರತೀತಿಯಾಗಿತ್ತು. ಈ ಗುಂಪುಗಳನ್ನು ಆಯೋಜಿಸುತ್ತಿದ್ದ ಪ್ರದಾನ್, ಮೈರಾಡಾ, ಧಾನ್ ಫೌಂಡೇಷನ್, ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮೀಣ ವಿಕಾಸ ವಿಭಾಗದಂತಹ ಸ್ವಯಂ ಸೇವಾ ಸಂಸ್ಥೆಗಳು, ತಮ್ಮದೇ ಮಹಿಳಾ ಸೇವಾ ಸಹಕಾರಿ ಬ್ಯಾಂಕಿನ ಮೂಲಕ ಚಿಕ್ಕಸಾಲವನ್ನು ನೀಡುತ್ತಿದ್ದ ಅಹಮದಾಬಾದಿನ ಸೇವಾ ಈ ಎಲ್ಲ ಸಂಸ್ಥೆಗಳಿಗೂ ತಾವು ನಡೆಸುತ್ತಿದ್ದ ವಿಕಾಸ ಕಾರ್ಯದ ಒಂದು ಭಾಗವಾಗಿ, ಬ್ಯಾಂಕುಗಳು ನೀಡುವ ವಿತ್ತೀಯ ಸೇವೆಗೆ ಪೂರಕವಾಗಿ, ಹಾಗೂ ಬ್ಯಾಂಕುಗಳು ಇಂಥ ಸೇವೆಗಳನ್ನು ಬಡವರಿಗೆ ನೀಡದಿದ್ದಾಗ ಅವುಗಳಿಗೆ ಸವಾಲಾಗಿ ಈ ಸಂಸ್ಥೆಗಳು ಕೆಲಸ ಮಾಡುತ್ತಿದ್ದುವು.




ಬುದ್ಧಿವಂತಿಕೆಯ ಗೆರೆ

ಒಂದು ಸ್ವಯಂ ಸೇವಾ ಸಂಸ್ಥೆ ಯಾವ ಕೆಲಸವನ್ನು ಎಷ್ಟು ಮಾಡಬೇಕು - ಎಲ್ಲಿ ಅದನ್ನು ನಿಲ್ಲಿಸಬೇಕು ಅನ್ನುವುದು ಕುತೂಹಲದ ವಿಷಯ. ಇದು ನಮ್ಮ ಗ್ರಾಮೀಣ ಪ್ರಾಂತದಲ್ಲಿ ಕೆಲಸ ಮಾಡುತ್ತಿರುವ ಒಳ್ಳೆಯ ಸಂಸ್ಥೆಗಳ ಮುಂದೆ ಆಗಾಗ ತಲೆಯೆತ್ತಿ ನಿಲ್ಲುವ ದ್ವಂದ್ವ. ಉತ್ತರ ಭಾರತದ ಅನೇಕ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವ ಪ್ರದಾನ್ [ಪ್ರೊಫೆಷನಲ್ ಅಸಿಸ್ಟೆಂಸ್ ಫರ್ ಡೆವೆಲಪ್ಮೆಂಟ್ ಆಕ್ಷನ್] ಸಂಸ್ಥೆಯ ಕಾರ್ಯಕಲಾಪಗಳು ಹೀಗೆ ಗ್ರಾಮೀಣ ಬಡವರ ಬದುಕಿನ ಅನೇಕ ಮಜಲುಗಳನ್ನು ಮುಟ್ಟಿ ಹೋಗುತ್ತದೆ. ಕೆಲ ವರ್ಷಗಳ ಹಿಂದೆ ನಾನು ಝಾರ್ಖಂಡ್ ರಾಜ್ಯದ ಗೊಡ್ಡಾ ಜಿಲ್ಲೆಗೆ ಅವರ ಕೆಲಸವನ್ನು ನೋಡಲು ಹೋಗಿದ್ದೆ. ಅಲ್ಲಿ ಕೆಲಸ ಪ್ರಾರಂಭವಾದದ್ದು ಸ್ವ-ಸಹಾಯ ಗುಂಪುಗಳನ್ನು ಏರ್ಪಾಟು ಮಾಡಿ ಆ ಮೂಲಕ ಉಳಿತಾಯ-ಸಾಲದ ಚಟುವಟಿಕೆಯನ್ನು ತಮ್ಮ ನಡುವೆಯೇ ನಡೆಸಿಕೊಳ್ಳುವುದರ ಮೂಲಕ. ಆದರೆ ಬಡವರು ಕೇವಲ ಉಳಿತಾಯ ಮಾಡುವುದು - ಸುಲಭವಾಗಿ ಸಾಲ ಪಡೆಯುವುದು - ಈ ಎರಡರಿಂದಾಗಿಯೇ ಅಭಿವೃದ್ಧಿಯಾಗುತ್ತದೆ ಎಂದು ನಾವು ನಂಬುವುದಕ್ಕೆ ಆಗುವುದಿಲ್ಲ. ಏಕೆಂದರೆ ಹೀಗೆ ಸಾಲವಾಗಿ ಪಡೆದ ಹಣವನ್ನು ಹೇಗೆ ಉಪಯೋಗಿಸಬೇಕು ಅದರಿಂದ ಹೇಗೆ ಹೆಚ್ಚು ಆದಾಯ ಪಡೆಯಬೇಕು ಅನ್ನುವ ಪ್ರಶ್ನೆಯನ್ನೂ ನಾವು ಎದುರಿಸಬೇಕಾಗುತ್ತದೆ. ಮೈಕ್ರೋಫೈನಾನ್ಸ್ [ಚಿಕ್ಕಸಾಲ] ದಿಂದ ಲೈವ್ಲಿಹುಡ್ ಫೈನಾನ್ಸ್ [ಜೀವನೋಪಾಧಿಯ ಸಾಲ]ಕ್ಕೆ ಬೆಳೆಯುವ ಬಗ್ಗೆ ಸಾಕಷ್ಟು ಚರ್ಚೆ ಈಚಿನ ದಿನಗಳಲ್ಲಿ ನಡೆಯುತ್ತಿದೆ.