Showing posts with label ತಾಜ್. Show all posts
Showing posts with label ತಾಜ್. Show all posts

ಆತಂಕವಾದದ ಕಾಲದಲ್ಲಿ ಐಶಾರಾಮದ ಆತಂಕ


ಈ ಹಿಂದೆ ನಾನು ತಾಜ್ ಬಗ್ಗೆ ಬರೆದಾಗಲೂ ಇಂಥದೊಂದು ಪ್ರತಿಕ್ರಿಯೆ ಬರಬಹುದು ಅನ್ನುವ ಅನುಮಾನವಿತ್ತು. ಸಾಮಾಜಿಕ/ಆರ್ಥಿಕ ಸ್ಥರದಲ್ಲಿ ಭಿನ್ನತೆಯಿರುವ ಸಮಸಮಾಜದ ಉಟೋಪಿಯಾದಲ್ಲಿ ಬದುಕದಿರುವ ನಿಜಜಗತ್ತಿನಲ್ಲಿ ಈ ರೀತಿಯಾದಂತಹ ಪ್ರತಿಕ್ರಿಯೆ ಬರುವುದು ಸಹಜವೂ ಹೌದು, ಸಮಂಜಸವೂ ಹೌದು. ಈ ಮಾತು, ಅದರ ಹಿನ್ನೆಲೆಗೆ, ಪ್ರತಿಕ್ರಿಯೆಯಾಗಿ ನಾನು ಯಾವ ಸ್ಪಷ್ಟ ನಿಲುವನ್ನೂ ತೆಗೆದುಕೊಳ್ಳುವುದಕ್ಕೆ ಸಾಧ್ಯವಿಲ್ಲ. ಆದರೂ ಆ ಬಗ್ಗೆ ನನ್ನ ಅನುಮಾನಗಳನ್ನೂ, ಕಾಳಜಿಯನ್ನೂ, ಸಮಜಾಯಿಷಿಯನ್ನೂ, ಅಸಹಾಯಕತೆಯನ್ನೂ, ಅಷಾಢಭೂತಿತನವನ್ನೂ ಪ್ರಾಮಾಣಿಕವಾಗಿ ಮಂಡಿಸಲು ಸಿದ್ಧನಾಗಿದ್ದೇನೆ.
"ಇಷ್ಟುದಿನ ಆತಂಕ ನಮ್ಮನ್ನು ತಟ್ಟಿದಾಗ ಅದು ಒಂದು....
ಮುಂದೆ.....





ಶಾಂತಾರಾಮ್-ಆತಂಕರಾಮ್

ಕಳೆದೆರಡು ವರುಷಗಳಿಂದ ನನ್ನ ಮುಂಬಯಿ ಯಾತ್ರೆಗಳು ಸುಮಾರು ತಿಂಗಳಿಗೊಮ್ಮೆ ಆಗುತ್ತಿದೆ. ಅಲ್ಲಿರುವ ಸಂಸ್ಥೆಯೊಂದರ ಬೋರ್ಡಿಗೆ ನನ್ನನ್ನು ಸೇರಿಸಿಕೊಂಡಿರುವುದರಿಂದ ಮೀಟಿಂಗಿಗಾಗಿ ಆಗಾಗ ಹೋಗಬೇಕಾಗುತ್ತದೆ. ಮೀಟಿಂಗು ಸಂಸ್ಥೆಯ ೧೬ನೇ ಮಹಡಿಯ ಆಫೀಸಿನಲ್ಲಾಗುತ್ತದಾದರೂ ಉಳಿದುಕೊಳ್ಳುವುದಕ್ಕೆ ಏರ್ಪಾಟು ಮುಖ್ಯತಃ ತಾಜ್ ಹೋಟೇಲಿನಲ್ಲಿ ಮಾಡುತ್ತಿದ್ದರು. ಮೊದಲಿಗೆ ಪಂಚತಾರಾ ಹೋಟೇಲಿನಲ್ಲಾಗುವ ಎಲ್ಲ ಮುಜುಗರಗಳಿಗೂ ನಾನು ಒಳಗಾಗಿದ್ದೆನಾದರೂ, ಬರಬರುತ್ತಾ ಆ ಜಾಗ ನನಗೆ ಅಭ್ಯಾಸವಾಗಹತ್ತಿತ್ತು. ಹೀಗಾಗಿಯೇ ಎರಡು ತಿಂಗಳುಗಳ ಹಿಂದೆ ಆ ಹೊಟೇಲಿನಲ್ಲಿ ಹೆಚ್ಚು ಉಳಿದದ್ದರ ಪ್ರತೀಕವಾಗಿ ಅವರು ನನಗೆ ಗೋಲ್ಡ್ ಕಾರ್ಡ್ ಒಂದನ್ನು ಕೊಟ್ಟಿದ್ದನ್ನು ಜೋಪಾನವಾಗಿ ಉಳಿಸಿಕೊಂಡಿದ್ದೆ.






ಜೈ ಅಂತ - ವಾಹ್ ತಾಜ್


ಮುಂಬಯಿಗೆ ನಾನು ಅನೇಕ ಬಾರಿ ಹೋಗಿದ್ದರೂ, ಕೆಲವು ಯಾತ್ರೆಗಳು ಮಾತ್ರ ನೆನಪಿನಲ್ಲಿ ಉಳಿಯುಂವಥಹವಾಗಿವೆ. ಮೊದಲ ಬಾರಿಗೆ ನಾನು ಮುಂಬಯಿಗೆ ಹೋದಾಗ ನಾನು ಹದಿನಾರುವರುಷದವನಾಗಿದ್ದೆ. ಒಬ್ಬನೇ ಹೋಗಿ ಮುಲುಂದಿನ ನನ್ನ ಬಂಧುಗಳ ಮನೆಯಲ್ಲಿ ಉಳಿದು ಮುಂಬಯಿಯನ್ನು ನೋಡಿಬಂದಿದ್ದೆ. ಗೇಟ್‌ವೇ, ವಿಟಿ, ಲೋಕಲ್ ರೈಲು ಎಲ್ಲದರ ಅನುಭವವೂ ಆಗಿತ್ತು. ಪ್ರತಿದಿನ ನಾನು ಪೀಕ್ ಅವರ್ ತಪ್ಪಿಸಿ ಹೊರಗೆ ಹೋಗುವುದು, ಮತ್ತೆ ಯಾವ ಕಷ್ಟವೂ ಇಲ್ಲದೇ ವಾಪಸ್ಸಾಗುವುದು, ಒಟ್ಟಾರೆ ಮುಂಬಯಿ ಎಂದರೆ ಬಂದವರ ಭೀತಿಯೊಂದಿಗೆ ಅತಿಥೇಯರ ಭೀತಿಯೂ ಇರುತ್ತಿತ್ತು ಅನ್ನಿಸುತ್ತದೆ. ಮೊದಲ ಯಾವ ತೊಂದರೆಯೂ ಇಲ್ಲದೇ ಆಯಿತು. ಅನೇಕ ಸ್ಥಳಗಳನ್ನು ನೋಡಿದೆ ಹಾಗೂ ಒಂದು ವಿಚಿತ್ರ ಭಾವನೆಯೊಂದಿಗೆ ವಾಪಸ್ಸಾದೆ. ರಾಘವೇಂದ್ರ ಪಾಟೀಲರ ಅಜ್ಞಾತ ಮುಂಬಯಿ ಓದಿದಾಗ ನನ್ನ ಮೊದಲ ಭೇಟಿಯ ನೆನಪಾಯಿತು.

ಮುಂದೆ....