ಈಚೆಗೆ ವಾರ್ತೆಗಳನ್ನು ಕೇಳುವುದು, ನೋಡುವುದು, ಓದುವುದು ಎಲ್ಲ ಹಿಂಸೆಯುಂಟುಮಾಡುತ್ತದೆ. ಪ್ರೀತಿ ನಿಷ್ಕಾರಣವಾಗಿರಬೇಕು, ದ್ವೇಷ ಸಕಾರಣವಾಗಿರಬೇಕು ಅಂತ ಜಯಂತ ಕಾಯ್ಕಿಣಿ ಹಿಂದೆ ಒಮ್ಮೆ ಜನಪರ ಸಾಹಿತ್ಯ ಸಮ್ಮೇಳನದಲ್ಲಿ ಹೇಳಿದ್ದರು. ಇದನ್ನೇ ಕೇಳಿಸಿಕೊಂಡಿರಬಹುದಾದ ಫಿಲಿಪೀನ್ಸ್ ದೇಶದ ಯುವಕ ಕಂಪ್ಯೂಟರ್ ವೈರಸ್ ಪ್ರೋಗ್ರಾಂ ಬರೆದು, ಅದಕ್ಕೆ ಐಲವ್ಯೂ ಅಂತ ಹೆಸರುಟ್ಟು ಜಗತ್ತಿನ ಮೇಲೆ ಛೂ ಬಿಟ್ಟ. ನಿಷ್ಕಾರಣ ಪ್ರೀತಿ ಅರಸಿ ಹೊರಟ ನನ್ನಂತಹ ಕೆಲವರು ಹಲವು ದಿನ ನಿದ್ದೆಗೆಟ್ಟು ಸಕಾರಣವಾಗಿಯೇ ಅವನನ್ನ ದ್ವೇಷಿಸತೊಡಗಿದ್ದೇವೆ. ಇರಲಿ.
ಮುಂದೆ ಓದಿ