Showing posts with label ಮುಂಬಯಿ. Show all posts
Showing posts with label ಮುಂಬಯಿ. Show all posts

ಆತಂಕವಾದದ ಕಾಲದಲ್ಲಿ ಐಶಾರಾಮದ ಆತಂಕ


ಈ ಹಿಂದೆ ನಾನು ತಾಜ್ ಬಗ್ಗೆ ಬರೆದಾಗಲೂ ಇಂಥದೊಂದು ಪ್ರತಿಕ್ರಿಯೆ ಬರಬಹುದು ಅನ್ನುವ ಅನುಮಾನವಿತ್ತು. ಸಾಮಾಜಿಕ/ಆರ್ಥಿಕ ಸ್ಥರದಲ್ಲಿ ಭಿನ್ನತೆಯಿರುವ ಸಮಸಮಾಜದ ಉಟೋಪಿಯಾದಲ್ಲಿ ಬದುಕದಿರುವ ನಿಜಜಗತ್ತಿನಲ್ಲಿ ಈ ರೀತಿಯಾದಂತಹ ಪ್ರತಿಕ್ರಿಯೆ ಬರುವುದು ಸಹಜವೂ ಹೌದು, ಸಮಂಜಸವೂ ಹೌದು. ಈ ಮಾತು, ಅದರ ಹಿನ್ನೆಲೆಗೆ, ಪ್ರತಿಕ್ರಿಯೆಯಾಗಿ ನಾನು ಯಾವ ಸ್ಪಷ್ಟ ನಿಲುವನ್ನೂ ತೆಗೆದುಕೊಳ್ಳುವುದಕ್ಕೆ ಸಾಧ್ಯವಿಲ್ಲ. ಆದರೂ ಆ ಬಗ್ಗೆ ನನ್ನ ಅನುಮಾನಗಳನ್ನೂ, ಕಾಳಜಿಯನ್ನೂ, ಸಮಜಾಯಿಷಿಯನ್ನೂ, ಅಸಹಾಯಕತೆಯನ್ನೂ, ಅಷಾಢಭೂತಿತನವನ್ನೂ ಪ್ರಾಮಾಣಿಕವಾಗಿ ಮಂಡಿಸಲು ಸಿದ್ಧನಾಗಿದ್ದೇನೆ.
"ಇಷ್ಟುದಿನ ಆತಂಕ ನಮ್ಮನ್ನು ತಟ್ಟಿದಾಗ ಅದು ಒಂದು....
ಮುಂದೆ.....





ಶಾಂತಾರಾಮ್-ಆತಂಕರಾಮ್

ಕಳೆದೆರಡು ವರುಷಗಳಿಂದ ನನ್ನ ಮುಂಬಯಿ ಯಾತ್ರೆಗಳು ಸುಮಾರು ತಿಂಗಳಿಗೊಮ್ಮೆ ಆಗುತ್ತಿದೆ. ಅಲ್ಲಿರುವ ಸಂಸ್ಥೆಯೊಂದರ ಬೋರ್ಡಿಗೆ ನನ್ನನ್ನು ಸೇರಿಸಿಕೊಂಡಿರುವುದರಿಂದ ಮೀಟಿಂಗಿಗಾಗಿ ಆಗಾಗ ಹೋಗಬೇಕಾಗುತ್ತದೆ. ಮೀಟಿಂಗು ಸಂಸ್ಥೆಯ ೧೬ನೇ ಮಹಡಿಯ ಆಫೀಸಿನಲ್ಲಾಗುತ್ತದಾದರೂ ಉಳಿದುಕೊಳ್ಳುವುದಕ್ಕೆ ಏರ್ಪಾಟು ಮುಖ್ಯತಃ ತಾಜ್ ಹೋಟೇಲಿನಲ್ಲಿ ಮಾಡುತ್ತಿದ್ದರು. ಮೊದಲಿಗೆ ಪಂಚತಾರಾ ಹೋಟೇಲಿನಲ್ಲಾಗುವ ಎಲ್ಲ ಮುಜುಗರಗಳಿಗೂ ನಾನು ಒಳಗಾಗಿದ್ದೆನಾದರೂ, ಬರಬರುತ್ತಾ ಆ ಜಾಗ ನನಗೆ ಅಭ್ಯಾಸವಾಗಹತ್ತಿತ್ತು. ಹೀಗಾಗಿಯೇ ಎರಡು ತಿಂಗಳುಗಳ ಹಿಂದೆ ಆ ಹೊಟೇಲಿನಲ್ಲಿ ಹೆಚ್ಚು ಉಳಿದದ್ದರ ಪ್ರತೀಕವಾಗಿ ಅವರು ನನಗೆ ಗೋಲ್ಡ್ ಕಾರ್ಡ್ ಒಂದನ್ನು ಕೊಟ್ಟಿದ್ದನ್ನು ಜೋಪಾನವಾಗಿ ಉಳಿಸಿಕೊಂಡಿದ್ದೆ.






ಜೈ ಅಂತ - ವಾಹ್ ತಾಜ್


ಮುಂಬಯಿಗೆ ನಾನು ಅನೇಕ ಬಾರಿ ಹೋಗಿದ್ದರೂ, ಕೆಲವು ಯಾತ್ರೆಗಳು ಮಾತ್ರ ನೆನಪಿನಲ್ಲಿ ಉಳಿಯುಂವಥಹವಾಗಿವೆ. ಮೊದಲ ಬಾರಿಗೆ ನಾನು ಮುಂಬಯಿಗೆ ಹೋದಾಗ ನಾನು ಹದಿನಾರುವರುಷದವನಾಗಿದ್ದೆ. ಒಬ್ಬನೇ ಹೋಗಿ ಮುಲುಂದಿನ ನನ್ನ ಬಂಧುಗಳ ಮನೆಯಲ್ಲಿ ಉಳಿದು ಮುಂಬಯಿಯನ್ನು ನೋಡಿಬಂದಿದ್ದೆ. ಗೇಟ್‌ವೇ, ವಿಟಿ, ಲೋಕಲ್ ರೈಲು ಎಲ್ಲದರ ಅನುಭವವೂ ಆಗಿತ್ತು. ಪ್ರತಿದಿನ ನಾನು ಪೀಕ್ ಅವರ್ ತಪ್ಪಿಸಿ ಹೊರಗೆ ಹೋಗುವುದು, ಮತ್ತೆ ಯಾವ ಕಷ್ಟವೂ ಇಲ್ಲದೇ ವಾಪಸ್ಸಾಗುವುದು, ಒಟ್ಟಾರೆ ಮುಂಬಯಿ ಎಂದರೆ ಬಂದವರ ಭೀತಿಯೊಂದಿಗೆ ಅತಿಥೇಯರ ಭೀತಿಯೂ ಇರುತ್ತಿತ್ತು ಅನ್ನಿಸುತ್ತದೆ. ಮೊದಲ ಯಾವ ತೊಂದರೆಯೂ ಇಲ್ಲದೇ ಆಯಿತು. ಅನೇಕ ಸ್ಥಳಗಳನ್ನು ನೋಡಿದೆ ಹಾಗೂ ಒಂದು ವಿಚಿತ್ರ ಭಾವನೆಯೊಂದಿಗೆ ವಾಪಸ್ಸಾದೆ. ರಾಘವೇಂದ್ರ ಪಾಟೀಲರ ಅಜ್ಞಾತ ಮುಂಬಯಿ ಓದಿದಾಗ ನನ್ನ ಮೊದಲ ಭೇಟಿಯ ನೆನಪಾಯಿತು.

ಮುಂದೆ....



ಶಿಸ್ತಿನ ಚಿತ್ತಾಲರಿಗೆ ಪಂಪ...

ಯಶವಂತ ಚಿತ್ತಾಲರಿಗೆ ಪಂಪ ಪ್ರಶಸ್ತಿ ಬಂದಿದೆ ಅನ್ನುವುದು ಖುಶಿಯ ವಿಷಯ. ದೂರದೂರಿನಲ್ಲಿ ಕೂತು ತಮ್ಮಷ್ಟಕ್ಕೆ ತಾವು ಕೆಲಸ ಮಾಡುತ್ತಿರುವ ಚಿತ್ತಾಲರು ಯಾವ ಪ್ರಶಸ್ತಿಯನ್ನೂ ಅಟ್ಟಿಸಿಕೊಂಡು ಹೋದವರಲ್ಲ. ಅಥವಾ ಅಲ್ಲಿ ಇಲ್ಲಿ ಸೆಮಿನಾರುಗಳಲ್ಲಿ ಕಾಣಿಸಿಕೊಂಡವರಲ್ಲ. ತಮ್ಮಷ್ಟಕ್ಕೆ ತಾವು ಬ್ಯಾಂಡ್‍ಸ್ಟಾಂಡಿನಲ್ಲಿ ಕೂತು ಸಾಹಿತ್ಯದ ಬಗ್ಗೆ ಸದಾ ಚಿಂತಿಸುತ್ತ, ಹೊಸ ಸಾಹಿತ್ಯವನ್ನು ಬೆರಗಿನಿಂದ ನೋಡುತ್ತಾ, ಕ್ರಿಕೆಟ್ ಮ್ಯಾಚುಗಳನ್ನು ಚಾಚೂ ಬಿಡದೇ ನೋಡುತ್ತಾ ಶಿಸ್ತಿನ ಜೀವನವನ್ನು ಜೀವಿಸುತ್ತಿರುವವರು. ಕಣ್ಣಿಗೆ ಬೀಳದಿರುವ ವ್ಯಕ್ತಿಗಳನ್ನು ನಾವು ಬಹುತೇಕ ಮರೆತುಬಿಡುತ್ತೇವೆ. ಹಾಗೆ ಮರೆಯದಿರುವಂತೆ ಸದಾ ನೆನಪಿನಲ್ಲಿ ಉಳಿಯಬೇಕಾದರೆ ಎರಡು ಮಾರ್ಗಗಳು ಮಾತ್ರ ಇವೆ. ಒಂದು: ಚಿತ್ತಾಲ, ರಾಘವೇಂದ್ರ ಖಾಸನೀಸ, ದೇವನೂರ ಮಹಾದೇವ -- ಇಂಥವರ ಥರ ಅದ್ಭುತ ಪ್ರತಿಭೆ ಇರಬೇಕು, ಇಲ್ಲವೇ ಆಗಾಗ ಏನಾದರೊಂದು ಬರೆದು ಜನರ ಗಮನವನ್ನು ಸೆಳೆಯುತ್ತಿರಬೇಕು. ಚಿತ್ತಾಲರಿಗೆ ಅದ್ಭುತ ಪ್ರತಿಭೆಯೂ ಇದೆ, ಜೊತೆಗೆ ನಿರಂತರ ಒಳ್ಳೆಯ ಕೃತಿಗಳನ್ನು ಸಾಹಿತ್ಯಕ್ಕರ್ಪಿಸುವ ಶಿಸ್ತೂ ಇದೆ. ಹೀಗಾಗಿಯೇ ಅವರು ಒಂದಕ್ಕಿಂದ ಒಂದು ಉತ್ತಮ ಕೃತಿಗಳನ್ನು ನಮಗೆ ನೀಡುತ್ತಾ, ನಮ್ಮನ್ನೆಲ್ಲ ಪ್ರೋತ್ಸಾಹಿಸುತ್ತಾ, ಹುರುದುಂಬಿಸುತ್ತಾ ಬೆಳೆದು ನಿಂತಿದ್ದಾರೆ.


ಮುಂದೆ...



ದಗಡೂ ಪರಬನ ತೂಫಾನ್ ಮೇಲ್


ಅಸಾವರಿ ಲೋಖಂಡೆ
, ರೂಪಕ್ ರಾಠೋಡ್, ಪರೇಶ್ ಶಹಾ, ಸತ್ಯಜಿತ್ ದತ್ತಾ, ಬಲದೇವ, ಮಧುಬನಿ, ಮಧುವಂತಿ, ಇಂದ್ರನೀಲ – ಈ ಇಂಥ ಹೆಸರಿನ ಪಾತ್ರಗಳಿರುವ ಕಥೆಗಳು ಯಾವ ಭಾಷೆಯಲ್ಲಿ ಬಂದಿರಬಹುದು? ಯಾವ ಊರಿನದ್ದಗಿರಬಹುದು? ಯಾವ ಬರಹಗಾರನದ್ದಾಗಿರಬಹುದು? ಜಯಂತ ಕಾಯ್ಕಿಣಿಯ ಬರಹಗಳನ್ನು ಹತ್ತಿರದಿಂದ ಬಲ್ಲವರಿಗೆ ಈ ಕ್ವಿಜ್ ಗೆ ಉತ್ತರ ಹೇಳುವುದು ಕಷ್ಟಾವಾಗಲಾರದು. ಮುಂಬಯಿಯನ್ನು ಒಂದು ವಿಭಿನ್ನ ರೀತಿಯಲ್ಲಿ ಜಯಂತ ಅಂತರ್ಗತ ಮಾಡಿಕೊಂಡಿದ್ದಾನೆ. ಜಯಂತನ ರೀತಿ ಇತರ ನಮ್ಮೆಲ್ಲರಿಗಿಂತ ಬಹಳವೇ ಭಿನ್ನವಾದದ್ದು. ಮುಂಬಯಿನ ಮಹಾಸಾಗರಕ್ಕೆ ಬಂದು ಸೇರುವ ನದಿಗಳ ಮೂಲ ಹುಡುಕಹೊರಟರೆ ಎತ್ತೆತ್ತಲೋ ಹೋಗಿ ದಾರಿತಪ್ಪಬಹುದು. ಆದರೂ ಬರಹಗಾರರು ಸಾಮಾನ್ಯವಾಗಿ ನದಿ ಮೂಲ ಹುಡುಕಿ ಹೊರಡುವವರೇ 





ಚಿತ್ತಾಲರೊಂದಿಗೆ ಮಾತುಕತೆ

ಬಹಳ ದಿನಗಳ ನಂತರ ಮುಂಬೈನಲ್ಲಿ ಯಶವಂತ ಚಿತ್ತಾಲರನ್ನು ಭೇಟಿಯಾಗುವ ಅವಕಾಶ ಸಿಕ್ಕಿತು. ಚಿತ್ತಾಲರ ಉತ್ಸಾಹ, ಲವಲವಿಕೆ ಮತ್ತು ಶಿಸ್ತಿನಲ್ಲಿ ಒಂದಿನಿತಾದರೂ ನನ್ನಲ್ಲಿದ್ದಿದ್ದರೆ, ಇನ್ನಷ್ಟು ಹೆಚ್ಚು ಬರೆಯುತ್ತಿದ್ದೆನೋ ಏನೋ. ಪ್ರತಿ ಹೊಸ ಬರವಣಿಗೆಗೆ ಒಂದು ಹೊಸ ನೋಟ್ ಪುಸ್ತಕ, ಮುತ್ತಿನಂತಹ ಕೈಬರಹ, ಚಿತ್ತಿಲ್ಲಿದ ಬರವಣಿಗೆ.. ಜೊತೆಗೆ ಬರಯುತ್ತಿರುವ ಕತೆ, ಪುಸ್ತಕ ಅಲ್ಲದೇ ಬರಯಲಿರುವ ಇನ್ನೂ ನಾಲ್ಕು ಹೊಸ ಪುಸ್ತಕಗಳ ಬಗ್ಗೆ ಉತ್ಸಾಹದ ಮಾತು. ಬಹುಶಃ ತಮ್ಮ ಬರಹವನ್ನು ಇಷ್ಟು ಗಂಭೀರವಾಗಿ, ಇಷ್ಟು passionateಆಗಿ ಕೈಗೊಳ್ಳುವ ಬೇರೊಬ್ಬ ಬರಹಗಾರರು ಸಮಕಾಲೀನರಲ್ಲಿ ಇಲ್ಲ. 

ಮುಂದೆ ಓದಿ....