Showing posts with label ಸುಬ್ಬಣ್ಣ. Show all posts
Showing posts with label ಸುಬ್ಬಣ್ಣ. Show all posts

ಸುಬ್ಬಣ್ಣ

ಕೆಲವು ವಾರಗಳ ಹಿಂದೆ ಶೇಖರ್ ಪೂರ್ಣ ನನ್ನನ್ನು ಸಂಪರ್ಕಿಸಿ ಕೆ.ವಿ.ಸುಬ್ಬಣ್ಣನವರ ಬಗ್ಗೆ ಕನ್ನಡ ಸಾಹಿತ್ಯ.ಕಾಂ ಗಾಗ ಿಒಂದು ಲೇಖನವನ್ನು ಬರೆದುಕೊಡಲು ಹೇಳಿದರು. ಆದರೆ ಇದ್ದಕ್ಕಿದ್ದ ಹಾಗೆ ಸುಬ್ಬಣ್ಣನವರ ಬಗ್ಗೆ ನನ್ನನ್ನು ಯಾಕೆ ಬರಯಲು ಕೇಳಿದರೆಂದು ಆಗ ನನಗೆ ಅರ್ಥವಾಗಲಿಲ್ಲ. ಅಹಮದಾಬಾದಿನಲ್ಲಿ ಕೂತಿದ್ದ ನನಗೆ ಸುಬ್ಬಣ್ಣನವರು ತೀರಿಕೊಂಡದ್ದು ತಿಳಿದೇ ಇರಲಿಲ್ಲ. ಹಿಂದಿನ ನನ್ನ ಬರಹದಲ್ಲಿ ನಾನು ಹೇಳಿದ್ದಂತೆ, ಕರ್ನಾಟಕದಿಂದ ದೂರವಾಗಿ ಒಂಟಿಯಾಗಿ ಇರುವುದರ ಫಲಿತವೆಂದರ ಇಂಥಹ ಸುದ್ದಿಗಳು ನಮಗೆ ಒಮ್ಮೊಮ್ಮೆ ತಡವಾಗಿ ತಲುಪುತ್ತದೆ.