ಆಂಧ್ರಪ್ರದೇಶ - ರಂಗಾರೆಡ್ಡಿ ಜೆಲ್ಲೆ - ಶಂಕರಪಲ್ಲಿ ಮಂಡಲದ ಪೊದ್ದುಟೂರು ಗ್ರಾಮ ಸರಪಂಚ್ ಕಟಿಕೇ ಶ್ರೀನಿವಾಸ್ ಸಾಮಾನ್ಯ ಗ್ರಾಮೀಣ ರಾಜಕಾರಣಿಯಂತೆ ಕಾಣುವುದಿಲ್ಲ. ಯುವಕನೂ ವಿದ್ಯಾವಂತನೂ ಆಗಿರುವ ಆತ ತನ್ನ ಗ್ರಾಮದ ಬಗ್ಗೆ ಯೋಚಿಸುತ್ತಲೇ ಆ ಗ್ರಾಮದ ನಸೀಬು ವಿಸ್ತಾರವಾದ ಆರ್ಥಿಕ-ರಾಜಕೀಯ-ಸಾಮಾಜಿಕ ಆಗುಹೋಗುಗಳ ಜೊತೆ ಹೇಗೆ ಬೆಸೆದಿದೆ ಎಂದು ನೋಡಬಲ್ಲವ. ಹೀಗಾಗಿ ಆತನ ಜೊತೆ ಮಾತನಾಡುವುದೂ ಒಂದು ಒಳ್ಳೆಯ ಅನುಭವವೇ. ಆತ ಯಾವ ಪಕ್ಷಕ್ಕೆ ಸೇರಿದವ ಅನ್ನುವುದು ಮುಖ್ಯವಲ್ಲ, ಆದರೆ ಸರಪಂಚರಲ್ಲಿ ಇಂಥ ಯೋಚನಾಧೋರಣೆ ಇರುವುದು ನಿಜಕ್ಕೂ ಒಂದು ಉತ್ತಮ ಲಕ್ಷಣ ಅನ್ನಿಸುತ್ತದೆ.
ಆತನ ಸಹಜ ಬುದ್ಧಿವಂತಿಕೆಗೆ ತುಸುವಾದರೂ ಪೂರಕವಾಗಿರಬಹುದಾದ ಕಾರಣ ಆತ ಹಿಂದೆ ಎಂ.ವಿ.ಫೌಂಡೇಶನ್ [ಎಂ.ವಿ.ಎಫ್] ಜೊತೆಗೆ ಒಡನಾಡಿ ಅಲ್ಲಿನ ಗ್ರಾಮಾಂತರ ಶಾಲೆಯಲ್ಲಿ ಸ್ವಯಂ-ಪ್ರೇರಣೆಯಿಂದ ಪಾಠಮಾಡಿದ್ದ. ಎಂ.ವಿ.ಎಫ್ ರಂಗಾರೆಡ್ಡಿ ಜಿಲ್ಲೆಯಲ್ಲಿ ಹಲವಾರು ವರುಷಗಳಿಂದ ಕಷ್ಟ ಎನ್ನಿಸಬಹುದಾದ ಕೆಲಸವನ್ನು ಮಾಡುತ್ತಿದೆ. ಆ ಸಂಸ್ಥೆಯ ಮೂಲೋದ್ದೇಶ ಮಕ್ಕಳಿಗೆ ತಮ್ಮ ಸಹಜವಾದ ಹಕ್ಕುಗಳನ್ನು ಕೊಡಿಸುವುದು. ಹೀಗಾಗಿ ಅವರು ಹೇಳುವ ಮಾತುಗಳು ರಾಜಿಗೆ ಒಗ್ಗದ ಈ ಅಂಶಗಳ ಆಧಾರದಿಂದ ಕೂಡಿದೆ:
 
 
 
 
 
 
 
 
 
 
 
 
 
 
 
 Posts
Posts
 
 
No comments:
Post a Comment