ಯಕ್ಷ ಪ್ರಶ್ನೆ


ಕಛ್ ಪ್ರಾಂತದ ಭುಜ್ ನಗರಕ್ಕೆ ಮತ್ತೊಮ್ಮೆ ಭೇಟಿ ನೀಡಿದೆ. ಸ್ಥಳೀಯ ಚುನಾವಣೆಯ ಪ್ರಚಾರ ಭರದಿಂದ ನಡೆಯುತ್ತಿತ್ತು. ಕಛ್ ಪ್ರಾಂತದಲ್ಲಿ ಮೋದಿಯ ಮೂರು ಆಯಾಮದ ಚಿತ್ರದ ಮೂಲಕ ಪ್ರಚಾರವೂ ನಡೆಯುತ್ತಿತ್ತು. ಅಲ್ಲಿನ ಸ್ಥಳೀಯ ಕಲಾವಂತಿಕೆಯ ನಡುವೆ ಈ ತಂತ್ರಜ್ಞಾನ ಎಲ್ಲಿಂದಲೋ ಟಪಕಾಯಿಸಿದಂತಿತ್ತು. ಬಟ್ಟೆಗಳ ಮೇಲಿನ ಕಸೂತಿ, ಅಜ್ರಕ್ ಪ್ರಿಂಟ್ಸ್, ರೋಗನ್ ಕಲೆ, ಬಾಂದಣಿಯ ತವರೂರಾದ ಕಛ್ ನಲ್ಲಿ ಈ ರೀತಿಯ ತಂತ್ರಗಾರಿಕೆಗೆ ತಾವೆಲ್ಲಿ ಅನ್ನಿಸುತ್ತಿತ್ತು. ಕಳೆದ ಹತ್ತು ವರ್ಷಗಳಲ್ಲಿ – ಮುಖ್ಯವಾಗಿ ಭೂಕಂಪದ ನಂತರ ಕಛ್ ಮೂಲಭೂತವಾಗಿ ಬದಲಾಗಿಬಿಟ್ಟಿದೆ. ಅದರಲ್ಲಿ ಮೋದಿಯ ವಿಕಾಸದ ಬೀಜಮಂತ್ರವೂ ಸೇರಿದೆ ಅನ್ನಿಸುತ್ತದೆ. ಆಪ್ತವಾಗಿ ತೋರುತ್ತಿದ್ದ ಇಲಾರ್ಕ್ ಹೋಟೇಲಿನಲ್ಲಿ ಮೊದಲೆರಡು ದಿನಗಳ ಕಾಲ ಮಾತ್ರ ರೂಮು ಲಭ್ಯ, ನಂತರ ಹೋಟೇಲಿನಲ್ಲಿ ಒಂದೂ ಕೋಣೆ ಖಾಲಿಯಿಲ್ಲ ಎನ್ನುವ ಕಥೆಯನ್ನು ನಾನು ಕಛ್ಛಿನಲ್ಲಿ ಯೋಚಿಸಲೂ ಸಾಧ್ಯವಿರಲಿಲ್ಲ. ಆದರೆ ರಣ್ ಉತ್ಸವ, ಇತ್ಯಾದಿ ಟೂರಿಸಂ ಪ್ಯಾಕೇಜುಗಳನ್ನು ಮಾರಾಟ ಮಾಡುವುದರಿಂದ ಸ್ಥಳೀಯ ಆರ್ಥಿಕತೆ ಉದ್ಧಾರವಾಗುತ್ತಿದೆಯಂತೆ. ಇರಲಿ.



No comments: