ಗೋಡೆ ಸರಹದ್ದುಗಳ ನಡುವೆ ನಲುಗುವ ಬಜೆಟ್ಟು

ಬಜೆಟ್ಟು ಮಂಡಿಸುವುದು ಸರಳವಾದ ಕೆಲಸವೇನೂ ಅಲ್ಲ. ಅದರಲ್ಲೂ ತೆರಿಗೆಗಳನ್ನೇರಿಸದೇ, ಜನಪರ-ರೈತಪರ-ಬಡವರ ಪರ ಬಜೆಟ್ಟನ್ನು ಮಂಡಿಸುವುದು ಹುಲಿಸವಾರಿಯಂತಹ ಕಠಿಣವಾದ ಕೆಲಸವೇ. ಆ ಕೆಲಸದ ನಡುವೆ ನಮ್ಮಂತಹವರ ಅವಸ್ವರವನ್ನೂ ವಿತ್ತ-ಮುಖ್ಯ ಮಂತ್ರಿಗಳು ಕೇಳಬೇಕು. ಅಂದರಿಕೀ ಮಂಚಿವಾಡು ಆಗುವುದು ಸಾಧ್ಯವೇ ಇಲ್ಲವಾದ್ದರಿಂದ ಸರಕಾರ, ಖಾತೆ-ವಿಭಾಗಗಳ ಗೋಡೆ ಸರಹದ್ದುಗಳ ನಡುವೆ ಬಜೆಟ್ಟನ್ನು ರೂಪಿಸಬೇಕು. ಈ ರೀತಿಯ ಕಿಂಡಿಗಳನ್ನೇರ್ಪಡಿಸಿ ಅವುಗಳಿಗೆ ಹಣವನ್ನು ತುಂಬುವ, ಅದರಿಂದ ಖರ್ಚು ಮಾಡುವುದರಲ್ಲಿ ಬಜೆಟ್ಟನ್ನು ರೂಪಿಸವ ಪ್ರಕ್ರಿಯೆಗೆ ಸಂಬಂಧಿಸಿದ ಒಂದು ಅಪಾಯವಿದೆ.