ಕೃಷಿ ಮಾರುಕಟ್ಟೆಯ ವಿಚಾರಗಳು.



ನಮ್ಮ ಸರಕಾರ ಕೆಲವು ದಿನಗಳ ಹಿಂದಷ್ಟೇ ನೂತನ ಕೃಷಿ ಮಾರಾಟ ನೀತಿಯನ್ನು ಪ್ರಕಟಮಾಡಿದೆ. ನೂತನ ನೀತಿಯಲ್ಲಿ ರೈತಪರ ಮತ್ತು ಕ್ರಾಂತಿಕಾರಿ ವಿಚಾರಗಳಿರಬಹುದೆಂದು, ಆಶಿಸಿದವರಿಗೆ ನಿರಾಶೆಯನ್ನುಂಟು ಮಾಡಲೆಂದೇ ಈ ಪ್ರಕಟಣೆಯನ್ನು ಸರಕಾರ ಹೊರಡಿಸಿದಂತಿದೆ. ಅಂದರಿಕೀ ಮಂಚಿವಾಡು ಆಗುವ ತವಕದಲ್ಲಿ ಇದು ಏಕಕಾಲಕ್ಕೆ ರೈತಪರವೂ, ವ್ಯಾಪಾರಿಗಳ ಪರವೂ, ಸಹಕಾರದ ಪರವೂ, ಖಾಸಗೀಕರಣದ ಪರವೂ, ಸಾಂಪ್ರದಾಯಿಕತೆಯ ಪರವೂ, ಸುಧಾರಣೆಯ ಪರವೂ ಗುಣಮಟ್ಟದ ಪರವೂ, ತಾಂತ್ರಿಕತೆಯ ಪರವೂ, ಪಾರದರ್ಶಕತ್ವದ ಪರವೂ, ಸೌಕರ್ಯಗಳನ್ನು ಹೆಚ್ಚಿಸುವುದರ ಪರವೂ ಆಗಿದ್ದು – ಈ ನೀತಿ ಲಾಗೂ ಆದಾಕ್ಷಣಕ್ಕೆ ಕೃಷಿಯು ರಾಮರಾಜ್ಯದಲ್ಲಿ ನಡೆಯುತ್ತಿದೆ ಎಂಬ ಭಾವನೆ ಉಂಟುಮಾಡುವ ಎಲ್ಲಿಗೂ ಸಲ್ಲದ ದಾಖಲೆಯಾಗಿದೆ. ಈ ರೀತಿಯ ದಾಖಲೆಯನ್ನು ಟೀಕಿಸುವುದೂ ಕಷ್ಟವೇ – “ರೈತರ ಹಿತರಕ್ಷಣೆಯನ್ನು ಕಾಪಾಡಲು ಕರ್ನಾಟಕ ಕೃಷಿ ಉತ್ಪನ್ನ (ನಿಯಂತ್ರಣಾ ಮತ್ತು ಅಭಿವೃದ್ಧಿ) ಅಧಿನಿಯಮ 1966ರಲ್ಲಿಯ ಎಲ್ಲ ರೈತಸ್ನೇಹಿ ನಿಯಮಗಳನ್ನು ಅನುಷ್ಠಾನಗೊಳಿಸಲಾಗುವುದು” ಎಂಬ ವಾಕ್ಯದ ಅರ್ಥವೇನು? ಇಷ್ಟುದಿನ ಅದು ಅನುಷ್ಠಾನದಲ್ಲಿರಲಿಲ್ಲವೇ? ರೈತ ಸ್ನೇಹಿ ನಿಯಮಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದಾಗ ರೈತವಿರೋಧಿ ನಿಯಮಗಳನ್ನು ಬದಿಗಿಡಲಾಗುವುದೇ ಅಥವಾ ರೈತ ವಿರೋಧಿ ನಿಯಮಗಳು ಇಲ್ಲವೇ ಇಲ್ಲವೆ?


ಮುಂದೆ....




No comments: