ಭಾರತೀಯ ರಿಜರ್ವ್ ಬ್ಯಾಂಕಿನ ಮುಖ್ಯಸ್ಥರಾದ ಶ್ರೀ ದುವ್ವೂರಿ ಸುಬ್ಬಾರಾವು ಸೆಪ್ಟೆಂಬರ್ 4ಕ್ಕೆ ನಮ್ಮ ಅಧಿಕಾರಾವಧಿಯನ್ನು ಮುಗಿಸುತ್ತಾರೆ. ಸುಬ್ಬಾರಾವು ರಿಜರ್ವ್ ಬ್ಯಾಂಕಿಗೆ ಬರುವುದಕ್ಕೆ ಮೊದಲು ಭಾರತ ಸರಕಾರದ ವಿತ್ತ ಮಂತ್ರಾಲಯದಲ್ಲಿದ್ದರು. ಅವರು ರಿಜರ್ವ್ ಬ್ಯಾಂಕಿಗೆ ಬಂದಾಗ, ವಿತ್ತ ಮಂತ್ರಾಲಯದ ನೀತಿಗಳಿಗನಸಾರವಾಗಿ ನಡೆದುಕೊಳ್ಳಬಹುದೆಂಬ ಅಪೇಕ್ಷೆ ಅವರನ್ನು ನೇಮಕ ಮಾಡಿದವರಿಗಿತ್ತು. ಆ ಅಪೇಕ್ಷೆಯಂತೆಯೇ ನಡೆದುಕೊಳ್ಳಬಹುದೆಂಬ ನಿರೀಕ್ಷೆ ಇತರರದ್ದಾಗಿತ್ತು. ಹಿಂದಿನ ಮುಖ್ಯಸ್ಥ ವೇಣುಗೋಪಾಲ ರೆಡ್ಡಿಯವರು ತಮ್ಮ ಸ್ವತಂತ್ರ ನಿಲುವಿಗೆ ಹೆಸರುವಾಸಿಯಾಗಿದ್ದವರು. ರೆಡ್ಡಿಯವರಿಗಿಂತ ಭಿನ್ನವಾಗಿ, ವಿತ್ತಮಂತ್ರಾಲಯದ ದಿಶಾನಿರ್ದೇನಕ್ಕನುಸಾರವಾಗಿ ಸಾಗಬಹುದೆಂದುಕೊಂಡಿದ್ದವರ ನಿರೀಕ್ಷೆಯನ್ನು ಹುಸಿಮಾಡಿ ಸುಬ್ಬಾರಾವು ತಮ್ಮ ಸ್ಥಾನದ ಸ್ವಾತಂತ್ರವನ್ನು ಕಾಪಾಡಿಕೊಂಡು ಬಂದರು.
Noise and Clutter
-
Dialogue of the Deaf
The Government and the RBI
TCA Srinivasa Raghavan
Tranquebar Press, 2017
pp.308. Price: Rs.599.
The title of the book says it all. I...
5 years ago
No comments:
Post a Comment