Showing posts with label ಅರುಂಧತಿ. Show all posts
Showing posts with label ಅರುಂಧತಿ. Show all posts

ಅರ್ಥವಿಲ್ಲ, ಸ್ವಾರ್ಥವಿಲ್ಲ, ಬರಿಯ ಕೋಪ ತಾಪ

ಈಚೆಗೆ ವಾರ್ತೆಗಳನ್ನು ಕೇಳುವುದು, ನೋಡುವುದು, ಓದುವುದು ಎಲ್ಲ ಹಿಂಸೆಯುಂಟುಮಾಡುತ್ತದೆ. ಪ್ರೀತಿ ನಿಷ್ಕಾರಣವಾಗಿರಬೇಕು, ದ್ವೇಷ ಸಕಾರಣವಾಗಿರಬೇಕು ಅಂತ ಜಯಂತ ಕಾಯ್ಕಿಣಿ ಹಿಂದೆ ಒಮ್ಮೆ ಜನಪರ ಸಾಹಿತ್ಯ ಸಮ್ಮೇಳನದಲ್ಲಿ ಹೇಳಿದ್ದರು. ಇದನ್ನೇ ಕೇಳಿಸಿಕೊಂಡಿರಬಹುದಾದ ಫಿಲಿಪೀನ್ಸ್ ದೇಶದ ಯುವಕ ಕಂಪ್ಯೂಟರ್ ವೈರಸ್ ಪ್ರೋಗ್ರಾಂ ಬರೆದು, ಅದಕ್ಕೆ ಐಲವ್ಯೂ ಅಂತ ಹೆಸರುಟ್ಟು ಜಗತ್ತಿನ ಮೇಲೆ ಛೂ ಬಿಟ್ಟ. ನಿಷ್ಕಾರಣ ಪ್ರೀತಿ ಅರಸಿ ಹೊರಟ ನನ್ನಂತಹ ಕೆಲವರು ಹಲವು ದಿನ ನಿದ್ದೆಗೆಟ್ಟು ಸಕಾರಣವಾಗಿಯೇ ಅವನನ್ನ ದ್ವೇಷಿಸತೊಡಗಿದ್ದೇವೆ. ಇರಲಿ.

ಮುಂದೆ ಓದಿ


ಮೇಧಾ- ಮುಂದೇನು?

ನರ್ಮದಾ ಬಚಾವ್ ಆಂದೋಳನದ ಮೇಧಾ ಪಾಟ್ಕರ್ ಈಗೇನು ಮಾಡುತ್ತಾರೆ? ತಮ್ಮ ಹೋರಾಟವನ್ನ ಯಾವ ದಿಕ್ಕಿನಲ್ಲಿ ತಿರುಗಿಸುತ್ತಾರೆ? ಅಣೆಕಟ್ಟಿನ ಕಲಸ ಮುಂದುವರಸಬಹುದೆಂಬ ಸುಪ್ರೀಂ ಕೋರ್ಟಿನ ತೀರ್ಪು ಬಂದಕೂಡಲೇ ಗುಜರಾತ್ ರಾಜ್ಯದಲ್ಲಿ ಅನೇಕ ಕಡೆ ಪಟಾಕಿ ಹಚ್ಚಿ ಸಿಹಿ ಹಂಚಿ ಜನ ತಮ್ಮ ಖುಷಿಯನ್ನ ವ್ಯಕ್ತಪಡಿಸಿದರೆ, ಅತ್ತ ಮೇಧಾ ಪಾಟ್ಕರ್ ಮತ್ತು ಅರುಂಧತಿ ರಾಯ್ ದುಃಖದಿಂದ, ಕೋಪದಿಂದ ಪ್ರತಿಕ್ರಿಯಿಸಿದ್ದಾರೆ. ಮೇಧಾಗಂತೂ ಇಂದು ತಮ್ಮ ಜೀವನದ ಗುರಿಯೇ ಕಳಚಿಬಿದ್ದಂತಾಗಿದೆ. ಅರುಂಧತಿ ರಾಯ್ ಬಗ್ಗೆ ಕಡಿಮೆ ಮಾತಾಡಿದಷ್ಟೂ ಒಳ್ಳೆಯದು - ಆಕೆ ಈ ಆಂದೊಳನಕ್ಕೆ ತನ್ನ ಬುಕರ್ ಬಹುಮಾನದ ಖ್ಯಾತಿಯ ನೆರಳನ್ನ ಹಿಂಬಾಲಿಸುತ್ತಾ ನಂತರ ಬಂದಾಕೆ.