Showing posts with label ಆಂದೋಲನ. Show all posts
Showing posts with label ಆಂದೋಲನ. Show all posts

ಮೇಧಾ- ಮುಂದೇನು?

ನರ್ಮದಾ ಬಚಾವ್ ಆಂದೋಳನದ ಮೇಧಾ ಪಾಟ್ಕರ್ ಈಗೇನು ಮಾಡುತ್ತಾರೆ? ತಮ್ಮ ಹೋರಾಟವನ್ನ ಯಾವ ದಿಕ್ಕಿನಲ್ಲಿ ತಿರುಗಿಸುತ್ತಾರೆ? ಅಣೆಕಟ್ಟಿನ ಕಲಸ ಮುಂದುವರಸಬಹುದೆಂಬ ಸುಪ್ರೀಂ ಕೋರ್ಟಿನ ತೀರ್ಪು ಬಂದಕೂಡಲೇ ಗುಜರಾತ್ ರಾಜ್ಯದಲ್ಲಿ ಅನೇಕ ಕಡೆ ಪಟಾಕಿ ಹಚ್ಚಿ ಸಿಹಿ ಹಂಚಿ ಜನ ತಮ್ಮ ಖುಷಿಯನ್ನ ವ್ಯಕ್ತಪಡಿಸಿದರೆ, ಅತ್ತ ಮೇಧಾ ಪಾಟ್ಕರ್ ಮತ್ತು ಅರುಂಧತಿ ರಾಯ್ ದುಃಖದಿಂದ, ಕೋಪದಿಂದ ಪ್ರತಿಕ್ರಿಯಿಸಿದ್ದಾರೆ. ಮೇಧಾಗಂತೂ ಇಂದು ತಮ್ಮ ಜೀವನದ ಗುರಿಯೇ ಕಳಚಿಬಿದ್ದಂತಾಗಿದೆ. ಅರುಂಧತಿ ರಾಯ್ ಬಗ್ಗೆ ಕಡಿಮೆ ಮಾತಾಡಿದಷ್ಟೂ ಒಳ್ಳೆಯದು - ಆಕೆ ಈ ಆಂದೊಳನಕ್ಕೆ ತನ್ನ ಬುಕರ್ ಬಹುಮಾನದ ಖ್ಯಾತಿಯ ನೆರಳನ್ನ ಹಿಂಬಾಲಿಸುತ್ತಾ ನಂತರ ಬಂದಾಕೆ.