ನಿರುನಾ ಗ್ರಾಮದಲ್ಲಿ ಮಾತ್ರವಲ್ಲ ಇಡೀ ಕಛ್ ಪ್ರಾಂತದಲ್ಲೇ ನಿಜಕ್ಕೂ ಪ್ರತಿಭಾವಂತ ಕಲಾವಿದರಿದ್ದಾರೆ. ಆದರೆ ಈ ಬಾರಿ ನಾವು ರೋಗನ್ ಕಲೆಯಿಂದ ಮುಂದಕ್ಕೆ ಹೋಗಿ ಮರ ಮತ್ತು ಅರಗಿನ ಕಲಸ ಮಾಡುವ ’ವಾಡಾ’ಬುಡಕಟ್ಟಿನ ಜನಗಳ ಬಗ್ಗೆ ಯೋಚಿಸೋಣ. ವಾಡಾ ಬುಡಕಟ್ಟಿನವರು ಮೂಲಭೂತವಾಗಿ ಅಲೆಮಾರಿಗಳು, ಅರಣ್ಯ ಪ್ರಾಂತದಲ್ಲಿ ತಿರುಗಾಡುತ್ತಿರುವ ಈ ಬುಡಕಟ್ಟಿನ ಜನಾಂಗಕ್ಕೆ ಒಂದೇ ಜಾಗದಲ್ಲಿದ್ದು ಕೆಲಸ ಮಾಡುವುದು ತುಸು ಮುಜುಗರದ ಮಾತೇ. ಆದರೆ ಅರಣ್ಯ ಪ್ರದೇಶದಲ್ಲಿರುವುದರಿಂದ ಮರಗಳ ಬಗೆಗಿನ ಅವರ ಜ್ಞಾನ ಅದ್ಭುತವಾದದ್ದು. ಅವರ ಕರಕುಶಲತೆಯನ್ನು ನೋಡಿಯೇ ನಂಬಬೇಕು. ಆದರೆ ಕಲಾವಿದರಿಗೆ ತಮ್ಮ ಕಲೆಯ ಆಧಾರವಾಗಿಯೇ ಜೀವನ ಹೊರೆಯುವುದು ಸಾಧ್ಯವಿಲ್ಲ ಎನ್ನುವುದನ್ನು ನಿರೂಪಿಸಲೋ ಎಂಬಂತೆ ಇವರುಗಳು ಸೈಡ್ ಬಿಜನೆಸ್ ಆಗಿ ಸಾರಾಯಿ ತಯಾರಿಸುವ ಕೆಲಸವನ್ನೂ ಮಾಡುತ್ತಾರೆ.
ಗೋಪಾಲಕೃಷ್ಣ ಕುಂಟಿನಿಯ ಕಥೆಗಳಿಗೆ ಮುನ್ನುಡಿ
-
ಹೊಸದಾಗಿ ಬರುತ್ತಿರುವ ಕೃತಿಯನ್ನು ಸ್ವಾಗತಿಸುವಾಗ ಅದಕ್ಕೊಂದು ಹಿನ್ನೆಲೆ – ಯಾವ ಪರಂಪರೆಗೆ
ಕಥೆಗಳು ಸೇರುತ್ತವೆ, ಹಾಗೂ ಕಥನ ಜಗತ್ತನ್ನು ಇದು ಹೇಗೆ ಪ್ರವೇಶಿಸುತ್ತದೆ ಎಂದು
ಗಮನಿಸುವುದು ...
8 years ago