Showing posts with label ರಾಜಾಸ್ಥಾನ. Show all posts
Showing posts with label ರಾಜಾಸ್ಥಾನ. Show all posts

ನಾ ಹೇಗೆ ಬಡವನು ನಾ ಹೇಗೆ ಪರದೇಶಿ..


ಅಭಿವೃದ್ಧಿಯ ಮಾತನಾಡುವಾಗಲೆಲ್ಲಾ ಬಡತನದ ರೇಖೆಯ ಮಾತು ಸಹಜವಾಗಿ ಬರುತ್ತದೆ. ಬಡತನದ ರೇಖೆಯ ಮೇಲಿರುವ ಜನಸಂಖ್ಯೆ ಪ್ರಮಾಣ ಅಭಿವೃದ್ಧಿಯ ಅನೇಕ ಮಾಪಕಗಳಲ್ಲಿ ಒಂದು. ಭಾರತದಲ್ಲಿ ಈ ರೇಖೆಯನ್ನು ನಿರ್ಧರಿಸಲು ಕ್ಯಾಲೋರಿಫಿಕ್ ವ್ಯಾಲ್ಯೂ ಆಧಾರದ ಮೇಲೆ [ಅಂದರೆ ಇಂತಿಷ್ಟು ಶಕ್ತಿಯನ್ನು ಆರ್ಜಿಸಲು ಬೇಕಾದ ಆಹಾರವನ್ನು ಕೊಳ್ಳಲು ಆಗುವ ಖರ್ಚಿನ ಆಧಾರದ ಮೇಲೆ] ವಾರ್ಷಿಕ ಆದಾಯವನ್ನು ನಿಗದಿ ಮಾಡಲಾಗಿದೆ. ಪ್ರತೀ ವರ್ಷ ಸರಕಾರ ಇಂತಿಷ್ಟು ಮಂದಿ ಬಡತನದ ರೇಖೆಯನ್ನು ಉಲ್ಲಂಘಿಸಿದ್ದಾರೆಂದು ಘೋಷಿಸಿ ತನ್ನ ಬೆನ್ನನ್ನು ತಟ್ಟಿಕೊಳ್ಳುತ್ತದೆ. ಸರಕಾರದ ಯಾವುದೇ ಅಂಕಿ ಅಂಶಗಳನ್ನು ಅನುಮಾನದಿಂದ ನೋಡುವ ಜನ ಈ ಮಾಪನವನ್ನು ಸಹಜವಾಗಿ ಪ್ರಶ್ನಿಸುತ್ತಾರೆ. ವಿಶ್ವದಾದ್ಯಂತ ಬಡತನವನ್ನು ಅಳೆಯಲು [ಸ್ಥಳೀಯ ಹಣದ ಖರೀದಿಯ ಶಕ್ತಿಯನುಸಾರ] ದಿನಕ್ಕೊಂದು ಡಾಲರ್ ಸಮಾನವಾದ ಆದಾಯವನ್ನು ಮಾಪಕವನ್ನಾಗಿ ಇಟ್ಟುಕೊಳ್ಳಲಾಗಿದೆ. ಈಗೀಗ ಇದನ್ನು ಎರಡು ಹಂತಗಳಲ್ಲಿ ಅಳೆಯುವುದೂ ಉಂಟು. ದಿನಕ್ಕೊಂದು ಡಾಲರ್‌ಗಿಂತ ಕಡಿಮೆ ಆರ್ಜಿಸುವ ಅತೀ-ಬಡವರು ಹಾಗೂ ಎರಡು ಡಾಲರ್‌ವರೆಗೆ ಆದಾಯವಿರುವ ಬಡವರು.







ಗೋಡೆ ಗಡಿಯಾರ - ಕೈಗಡಿಯಾರ

ರಾಜಾಸ್ಥಾನದ ಡುಂಗರ್‍-ಪುರದಲ್ಲಿ ನಮ್ಮ ಅಧ್ಯಯನಕ್ಕಾಗಿ ಮಾಹಿತಿ ಸಂಗ್ರಹಿಸುತ್ತಿದ್ದ ಶಾಶ್ವತೀ ಒಂದು ದಿನ ಬಂದು ಒಂದು ವಿಚಿತ್ರವಾದ ಮಾತನ್ನು ಹೇಳಿದಳು. ಈ ಮಾತು ಮಾಹಿತಿಯನ್ನಾಧರಿಸಿದ್ದಲ್ಲ, ಬದಲಿಗೆ ತಾನು ಗಮನಿಸಿದ್ದ ವಿಷಯವೆಂದೂ ಹೇಳಿದಳು. ನಾವುಗಳು ಮಾಹಿತಿ ಸಂಗ್ರಹಿಸುತ್ತಿದ್ದದ್ದು ಬಡ ಕುಟುಂಬಗಳು ತಮ್ಮ ಆರ್ಥಿಕ ನಿರ್ವಹಣೆಯನ್ನು ಹೇಗೆ ಮಾಡುತ್ತಾರೆ ಹಾಗೂ ಎಲ್ಲೆಲ್ಲಿಂದ ಸಾಲ ಪಡೆಯುತ್ತಾರೆ ಅನ್ನುವ ವಿಷಯದ್ದಾಗಿತ್ತು. ಮಾಹಿತಿ ಸಂಗ್ರಹಿಸುವುದು ಒಂದು ಕೆಲಸವಾದರೆ ಆ ಮಾಹಿತಿಯನ್ನು ಅರ್ಥೈಸಲು ಕೆಲ ಒಳನೋಟಗಳೂ ಅವಶ್ಯಕವಾಗುತ್ತವೆ. ಹೀಗಾಗಿ ಶಾಶ್ವತೀ ಹೇಳಿದ್ದ ಮಾತಿಗೆ ನಾನು ಮಹತ್ವ ನೀಡುವ ಅಗತ್ಯವಿತ್ತು.