ದೇಶಕಾಲದ ಬಗ್ಗೆ ಚರ್ಚಿಸುತ್ತಿರುವಾಗಲೇ ಕನ್ನಡಕ್ಕೆ ಮತ್ತೊಂದು ಸಣ್ಣ ಪತ್ರಿಕೆಯ ಪ್ರವೇಶವಾಗಿದೆ. ಇದು ವಸಂತ ಬನ್ನಾಡಿಯವರು ಇತ್ತೀಚೆಗೆ ಹೊರತಂದ ಅರೆವಾರ್ಷಿಕ ಪತ್ರಿಕೆ ಶಬ್ದಗುಣ. ದೇಶಕಾಲದ ಬಗ್ಗೆ ನಾನು ನಾಲ್ಕು ಸಂಚಿಕೆಗಳ ನಂತರ ಬರೆದೆನಾದರೂ ಇದರ ಬಗ್ಗೆ ನಾನು ತಕ್ಷಣವೇ ಬರೆಯುತ್ತಿರುವುದಕ್ಕೆ ಕಾರಣಗಳು ಹಲವು. ಮೊದಲ ಭಾಗದಲ್ಲಿ ನಾನು ಈ ಪತ್ರಿಕೆಯ ಸ್ಥಾನ, ಉದ್ದೇಶ, ವಿನ್ಯಾಸದ ಬಗೆ ಚರ್ಚಿಸುತ್ತೇನೆ. ಎರಡನೆಯ ಭಾಗದಲ್ಲಿ ಈ ಸಂಚಿಕೆಯನ್ನು ಆಧಾರವಾಗಿಟ್ಟುಕೊಂಡು ಸಮಕಾಲೀನ ಕನ್ನಡಕಾವ್ಯದ ಬಗ್ಗೆ ಕೆಲವು ಪ್ರತಿಕ್ರಿಯೆಗಳನ್ನು ಬರೆಯುತ್ತೇನೆ. ಕಡೆಯದಾಗಿ ಕಾವ್ಯವಲ್ಲದೇ ಈ ಸಂಚಿಕೆಯಿಂದ ಹೊರಹೊಮ್ಮಿರುವ ಕೆಲವು ವಿಚಾರಗಳನ್ನು ಚರ್ಚೆ ಮಾಡುವ ಉದ್ದೇಶ ನನಗಿದೆ. ಅಂದರೆ ಶಬ್ದಗುಣದಲ್ಲಿ ಸಾಕಷ್ಟು ಹೂರಣವಿದೆ ಅಂತ ನಾನು ಒಪ್ಪಿದಂತಾಯಿತು. ಅದು ನಿಜವೂ ಸಹ.
ಗೋಪಾಲಕೃಷ್ಣ ಕುಂಟಿನಿಯ ಕಥೆಗಳಿಗೆ ಮುನ್ನುಡಿ
-
ಹೊಸದಾಗಿ ಬರುತ್ತಿರುವ ಕೃತಿಯನ್ನು ಸ್ವಾಗತಿಸುವಾಗ ಅದಕ್ಕೊಂದು ಹಿನ್ನೆಲೆ – ಯಾವ ಪರಂಪರೆಗೆ
ಕಥೆಗಳು ಸೇರುತ್ತವೆ, ಹಾಗೂ ಕಥನ ಜಗತ್ತನ್ನು ಇದು ಹೇಗೆ ಪ್ರವೇಶಿಸುತ್ತದೆ ಎಂದು
ಗಮನಿಸುವುದು ...
8 years ago