2012ರಲ್ಲಿ ಪ್ರಸ್ತುತವಾಗಿರುವ ಶ್ರೀಕಾಂತರ ಕಥೆಗಳು


ಈ 2012ನೇ ಸಂವತ್ಸರದಲ್ಲಿ ಶ್ರೀಕಾಂತರ ಇಡಿಯ ಸಾಹಿತ್ಯವನ್ನು ಓದಿ, ಅದನ್ನು ಅರ್ಥೈಸಿ ಅದಕ್ಕೊಂದು ಚಾರಿತ್ರಿಕ ಮಹತ್ವವನ್ನೂ, ಸಂದರ್ಭವನ್ನೂ ಸೃಷ್ಟಿಸುವುದು ಸುಲಭವಾದ ಕೆಲಸವಲ್ಲ. ನಾನು ಈ ಹಿಂದೆ ಶ್ರೀಕಾಂತರ ಕಥೆಗಳನ್ನು ಓದಿಯೇ ಇರಲಿಲ್ಲ. ಈ ಮಾತು ಆಧುನಿಕ ಸಾಹಿತ್ಯದ ಚರಿತ್ರೆಯಲ್ಲಿ ಇರಬಹುದಾದ ಒಂದು ಕಂದರವನ್ನು ಪ್ರಾತಿನಿಧಿಕವಾಗಿ ಸೂಚಿಸುತ್ತದೆ. ನವ್ಯರ ಕಾಲದಲ್ಲಿ ಬಂದ ಮುಖ್ಯ ಲೇಖಕರಾದ ಆದರೆ ವಿರಳವಾಗಿ ಬರೆದ ರಾಜಲಕ್ಷ್ಮೀ ರಾವ್, ಕಾಮರೂಪಿ, ಗಿರಿ, ಖಾಸನೀಸ, ಕಥೆಗಾರ ಗಿರಡ್ಡಿ, ಕನ್ನಡದಲ್ಲಿ ಸೀಮಿತವಾಗಿ ಬರೆದ ರಾಮಾನುಜನ್ ಇಂಥ ದಿಗ್ಗಜರ ಯಾದಿಗೆ ಶ್ರೀಕಾಂತರೂ ಸೇರುತ್ತಾರೆ. ವಿರಳವಾಗಿ ಬರೆದದ್ದರಿಂದಲೇ ಒಂದು ರೀತಿಯ ಮರವೆಗೆ ಬಲಿಯಾಗುವುದೂ ಸಹಜ. ವಿಪುಲವಾಗಿ ಬರೆಯುವವರ ಹೊಸ ಕೃತಿಯ ಜೊತೆಜೊತೆಗೇ ಅವರುಗಳ ಹಳೆಯ ಕೃತಿಗಳ ಮರುಮೌಲ್ಯಮಾಪನವಾಗುತ್ತದೆ. ಹೀಗಾಗಿ ಅದು ಸಾಮೂಹಿಕ ನೆನಪಿಗೆ ಒಡ್ಡಿಕೊಳ್ಳುತ್ತದೆ. ಕನ್ನಡದಲ್ಲಿ ವಿರಳವಾಗಿ ಬರೆದೂ ಸಾಮೂಹಿಕ ಪ್ರಜ್ಞೆಯಲ್ಲಿ ಜೀವಂತವಾಗಿರುವವರು ದೇವನೂರ ಮಹಾದೇವ ಮಾತ್ರವೇನೋ. ಇಂಗ್ಲೀಷಿನಲ್ಲಿ ತಕ್ಷಣಕ್ಕೆ ನೆನಪಾಗುವ ಹೆಸರು ಟು ಕಿಲ್ ಎ ಮಾಕಿಂಗ್ ಬರ್ಡ್ ಬರೆದ ಹಾರ್ಪರ್ ಲೀ.





ನಗರದ "ಸಮಸ್ಯೆ"ಗಳ ಮುಖಗಳನ್ನು ಹುಡುಕುತ್ತಾ....


ರಸ್ತೆಯಮೇಲೆ ನಿಮ್ಮ ವಾಹನ ಓಡಿಸುತ್ತಿರುತ್ತೀರ. ಚೌಕದಲ್ಲಿ ಪೋಲೀಸು ಪೇದೆ ನಿಂತಿದ್ದಾನೆ. ಅಲ್ಲಿ ಓಡಾಡುತ್ತಲೇ ಅವನು ವಾಹನಗಳ ಸಂಚಾರವನ್ನು ನಿಯಂತ್ರಿಸುತ್ತಿದ್ದಾನೆ. ದಿನವೂ ನೀವು ಅದೇ ರಸ್ತೆಯಲ್ಲಿಯೇ ಹೋಗುತ್ತೀರಿ. ಆದರೆ ಆ ಪೋಲೀಸು ಪೇದೆಯ ಮುಖ ನಿಮಗೆ ನೆನಪಾಗುವುದೇ?  ಒಬ್ಬ ಪೋಲೀಸು ಪೇದೆಯಿಂದ ಇನ್ನೊಬ್ಬನನ್ನು ಬೇರ್ಪಡಿಸಿ ಹೇಳಲು ನಿಮಗೆ ಸಾಧ್ಯವೇ? ಪೋಲೀಸರೆಂದರೆ ನಿಮ್ಮ ಮನಸ್ಸಿಗೆ ಬರುವುದು ಅವರ ಸಮವಸ್ತ್ರವೇ ವಿನಃ ಅವರ ಮುಖವಲ್ಲ. ಅಲ್ಲವೇ?





ಮುಂದುವರಿಯುವುದು

ಸುದ್ದಿಪತ್ರಿಕೆಯಲ್ಲಿ ಹೀಗೆ ತನ್ನ ಹೆಸರು ಬರಬಹುದು ಎಂದು ದಶರಥರೆಡ್ಡಿ ಎಂದೂ ಊಹಿಸಿರಲಿಲ್ಲ. ಮೂರು ವರ್ಷಗಳ ಕೆಳಗೆ ತನ್ನ ಕೆಲಸಕ್ಕಾಗಿ ಸಂಸ್ಥೆಯ ಅತ್ಯುತ್ತಮ ಕ್ಷೇತ್ರಾಧಿಕಾರಿಯ ಪಾರಿತೋಷಕ ಪಡೆದಿದ್ದಾಗ ಅದು ಸಂಸ್ಥೆಯ ವಾರ್ತಾಪತ್ರಿಕೆಯಲ್ಲಿ ಮಾತ್ರ ಸುದ್ದಿಯಾಗಿತ್ತು. ಆಗ ಸಂಸ್ಥೆಯಲ್ಲಿ ನಕ್ಷತ್ರದಂತೆ ಚಮಕಿದವನು, ನಕ್ಷತ್ರಿಕ ಎನ್ನುವ ನಾಮಧೇಯದಿಂದ ವಾರ್ತಾಪತ್ರಿಕೆಯಲ್ಲಿ ಈಗ ವರದಿಗೊಂಡಿದ್ದ.




ಮುಂದೆ ಓದಿ






ಚಿತ್ತಾಲರ ಕಥಾಪಾತ್ರವನ್ನಾಗಿಸುವ ಭೇಟಿಯ ಕಥೆಗಳು


ಯಶವಂತ ಚಿತ್ತಾಲರ ಕಥೆ ಕಾದಂಬರಿಗಳಲ್ಲಿ ಭೇಟಿಯ ನಿಗೂಢತೆಯ ಒಂದು ಅಂಶ ಯಾವಾಗಲೂ ಇರುತ್ತದೆ. ಯಾರೋ ಭೇಟಿಯಾಗಲು ಬರುತ್ತೇವೆ ಎಂದು ಹೇಳುವುದು ಅದಕ್ಕಾಗಿ ಕಾಯುವ ಕಥಾಪಾತ್ರಗಳು, ಭೇಟಿಯ ನಿಗೂಢತೆ, ಭೇಟಿಯಿಂದ ಉದ್ಭವವಾಗುವ ಪಿತೂರಿಗಳು ಹೀಗೆ. ಇದರ ಜೊತೆಗೆ ಆಗುವ-ಆಗದ-ಆಗಬಹುದಾಗಿದ್ದ ಅನೇಕ ಭೇಟಿಯ ಪ್ರಸಂಗಗಳೂ ಬರುತ್ತವೆ. ಒಂದು ಕಥೆಯಲ್ಲಿ ಕ್ಷಣಮಾತ್ರಕ್ಕೆ ಬರುವ ಪಾತ್ರಗಳು ಮತ್ತೊಂದು ಕಥೆಯಲ್ಲಿ ಪ್ರಮುಖಪಾತ್ರವನ್ನು ವಹಿಸಿಬಿಡುತ್ತವೆ. ಹೀಗೆ ಅವರ ಸಾಹಿತ್ಯದಲ್ಲಿ ಒಂದಕ್ಕೊಂದು ಕೊಂಡಿಹಾಕಿಕೊಂಡ ಕಥೆಗಳು ಅನೇಕ ನಮಗೆ ದೊರೆಯುತ್ತವೆ.


ಸಹಕಾರೀ ರಂಗ: ಕೆಲವು ಕಥೆಗಳು, ಒಂದಿಷ್ಟು ವಿಚಾರ

ಸಹಕಾರ ಸಂಘವೊಂದರಲ್ಲಿ ಅಧ್ಯಕ್ಷರು ತಮ್ಮ ಸಂಘದ ಮುಂದೆ ವಾಚನಾಲಯವನ್ನು ಏರ್ಪಾಟು ಮಾಡಿದ್ದರು. "ಸಂಘದ ಮುಂದೆ ಹೀಗೆ ವಾಚನಾಲಯವನ್ನು ಏರ್ಪಾಟು ಮಾಡುವುದರಲ್ಲಿ ಏನಾದರೂ ಅಂತರಾರ್ಥವಿದೆಯೇ?" ಎಂದು ನಾನು ಕೇಳಿದ್ದಾಗ ಆತ ಎರಡು ಕಾರಣಗಳನ್ನು ನನ್ನ ಮುಂದಿಟ್ಟಿದ್ದರು. "ಒಂದು: ವಾಚನಾಲಯವಿದ್ದರೆ ಜನ ಇಲ್ಲಿಗೆ ಬರುತ್ತಾರೆ. ಹೆಚ್ಚೆಚ್ಚು ಜನರು ಬಂದರೆ ಮಾತ್ರ ಸಹಕಾರ ಸಂಘಕ್ಕೆ ಶೋಭೆ. ನಮ್ಮ ಚಟುವಟಿಕೆ ನಿರಂತರವಾಗಿ ನಡೆಯಲು ವಾಚನಾಲಯ ಜನರನ್ನು ಸೆಳೆವ ಸಾಧನ.  ಎರಡು: ಹೆಚ್ಚು ಜನರಿದ್ದಷ್ಟಕ್ಕೂ ಓಡಾಟ ಹೆಚ್ಚಿದಷ್ಟಕ್ಕೂ ಭ್ರಷ್ಟಾಚಾರಕ್ಕೆ ಅವಕಾಶಗಳು ಕಡಿಮೆಯಾಗುತ್ತದೆ. ನಮ್ಮ ಗ್ರಾಮಸಮಾಜದಲ್ಲಿ ಜನರನ್ನು ಸಾಕ್ಷಿಯಾಗಿಟ್ಟೇ ಭ್ರಷ್ಟರಾಗುವ ಸ್ಥಿತಿಗೆ ನಾವಿನ್ನೂ ತಲುಪಿಲ್ಲವೆಂದೇ ನನ್ನ ನಂಬಿಕೆ. ಇದೂ ಒಂದು ರೀತಿಯ ಪಾರದರ್ಶಕತೆ."




ವ್ಯಾಪಾರಿ ಜಗತ್ತಿನಲ್ಲಿ ಮಾರಿಕೊಂಡವರು.


ಮಾರುಕಟ್ಟೆಯ ನೈತಿಕ ಮಿತಿಗಳೇನು? ಮೈಕಲ್ ಸ್ಯಾಂಡಲ್ ಅವರ ಇತ್ತೀಚಿನ ಪುಸ್ತಕ What Money Can’t Buy: The Moral Limits of Markets ಈ ವಿಷಯವನ್ನು ದೀರ್ಘವಾಗಿ ಚರ್ಚಿಸುತ್ತದೆ. ನಾವು ನಮ್ಮನ್ನು ಎಷ್ಟರ ಮಟ್ಟಿಗೆ ಮಾರುಕಟ್ಟೆಯ ನಿಯಮಗಳಿಗೆ ಒಪ್ಪಿಸಿಕೊಳ್ಳಬೇಕು, ಯಾವುದನ್ನು ಮಾರುಕಟ್ಟೆಯ ನಿಯಮಗಳಿಗೆ ಒದಗಿಸುವು ಸೂಕ್ತ ಎನ್ನುವ ನೈತಿಕ ಪ್ರಶ್ನೆಗಳನ್ನು ಅವರು ಚರ್ಚಿಸುತ್ತಾರೆ. ವ್ಯಾಪರದ ಜಗತ್ತಿನಲ್ಲಿ ಬದುಕುತ್ತ, ನಮಗೆ ತಿಳಿಯದೆಯೇ ಹಲವಾರು ವಸ್ತುಗಳನ್ನು ನಾವು ವ್ಯಾಪಾರಕ್ಕೆ ಒದಗಿಸಿಬಿಡುತ್ತೇವೆ.



ಬದಲಾದ ಬೆಂಗಳೂರಿಗೆ ಬರಲಾಗಿ...

ಬೆಂಗಳೂರಿಗೆ ವಾಪಸ್ಸಾಗಿ ಇಲ್ಲಿ ತಳವೂರುವುದು ನನಗಿದ್ದ ಕನಸುಗಳಲ್ಲಿ ಒಂದಾಗಿತ್ತು. ಹಾಗೆ ನೋಡಿದರೆ ನಿಜವಾದ ಬೆಂಗಳೂರಿಗ ವಲಸೆ ಹೋಗುವುದೇ ಇಲ್ಲ. ಇಲ್ಲಿಯೇ ಪಿಂಚನಿ ದೊರೆಯಬಹುದಾದ ಒಳ್ಳೆಯ ಕೆಲಸ ಸಿಕ್ಕರೆ, ಹೊರಗೆ ದೊರೆಯಬಹುದಾದ ತುಸು ಹೆಚ್ಚು ಹಣ, ಅಥವಾ ಹುದ್ದೆಯನ್ನು ನಾವು ತಿರಸ್ಕರಿಸುವವರೇ. ಸುಮ್ಮನೆ ಯಾಕೆ ರಿಸ್ಕ್ ತೆಗೆದುಕೊಳ್ಳಬೇಕು? ಇದ್ದಹಾಗೆ ಇರಲು ಸಾಧ್ಯವಾದರೆ ಅದಕ್ಕಿಂತ ಹೆಚ್ಚಿನ ತೃಪ್ತಿ ಬೇರೇನಿದೆ. ಹೀಗಾಗಿಯೇ ಬೆಂಗಳೂರಿಗರ ಮನಸ್ಥಿತಿಯನ್ನು ವಿವರಿಸಲು ಸರಿಯಾದ ವಿಶೇಷಣವೆಂದರೆ ‘ಅಡ್ಜಸ್ಟ್’ ಅನ್ನವ ಪದವೇ ಇರಬಹುದು. ಬೆಂಗಳೂರಿಗೆ ಆಗಾಗ ಬಂದು ಹೋಗುತ್ತಿರುವ ನನಗೆ ಒಳ-ಹೊರಗಿನ ಎರಡೂ ನೋಟಗಳು ಸಿಕ್ಕಿರುವುದರಿಂದ ಇಲ್ಲಿನ ಬದಲಾವಣೆಗಳು ಯಾವ ದಿಗ್ಭ್ರಾಂತಿಯನ್ನೂ ಉಂಟುಮಾಡಿಲ್ಲ. ಊರು, ಒಂದು ರೀತಿಯಲ್ಲಿ ಹಿಂದಿನಷ್ಟೇ ಆರಾಮವಾಗಿ ಸೋಮಾರಿಯಾಗಿದೆ. ಆಗಾಗ ತಕ್ಷಣದ ಚಟುವಟಿಕೆ ಕಾಣುತ್ತದೆ. ಹಾಗೂ ಎಷ್ಟು ಅಸ್ತವ್ಯಸ್ತವಾಗಬಹುದೋ ಅಷ್ಟೂ ಅಸ್ತವ್ಯಸ್ತವಾಗಿದೆ. ಇಲ್ಲಿ ಸಹನಶೀಲತೆ, ಅಸಹನೆ, ಸಹಿಷ್ಣುತೆ ಎಲ್ಲವೂ ಏಕಕಾಲಕ್ಕೆ ಆಗುವುದನ್ನ ನಾವು ಕಾಣುತ್ತಿದ್ದೇವೆ. ನಮಗೆ ನಮ್ಮ ರಜನಿ ಸಾರ್ [ಹೆಸರು: ಶಿವಾಜಿರಾವ್ ಗಾಯಕ್ ವಾಡ್, ತಾಯ್ನುಡಿ: ಮರಾಠಿ, ಕನ್ನಡ ಚೆನ್ನಾಗಿ ಬಲ್ಲ ತಮಿಳು ಸಿನೇಮಾದ ಸೂಪರ್ ಹೀರೋ] ಸಿನೇಮಾಗಳೆಂದರೆ ಪ್ರೀತಿ. ಆತ ಬೆಂಗಳೂರಿಗ, ಕನ್ನಡಿಗ ಅನ್ನುವ ಹೆಮ್ಮೆ. ಆದರೂ ಆತನಿರುವ ನಾಡು ನೀರನ್ನು ಕೇಳಿದರೆ ನಾವು ಉರಿದೇಳುತ್ತೇವೆ. ನೀರು ಕನ್ನಡತನದ ಪ್ರತೀಕವಾದಾಗ ಊರೆಲ್ಲ ಹಳದಿ-ಕೆಂಪು ಬಾವುಟಗಳು ಹಾರಾಡುತ್ತವೆ. ಈ ಬಣ್ಣ ಮತ್ತು ಈ ಬಣ್ಣದ ಬಾವುಟಗಳು ಅಪಾಯಕಾಲದ ಕವಚಗಳಾಗಿ ಇರುತ್ತವೆ.







ಕನ್ನಡ ಭಾಷೆ, ತಂತ್ರಾಂಶ ಮತ್ತು ಬ್ಲಾಗ್ ಲೋಕ

ಇಪ್ಪತ್ತು ವರುಷಗಳ ಹಿಂದೆ ಬರವಣಿಗೆ ಎನ್ನುವುದು ಕಾಗದದ ಮೇಲೆ ಸೇರಿಸುವ ಅಕ್ಷರಜಾಲವಾಗಿತ್ತು. ಹಾಗೂ ಬರೆದದ್ದು ಪ್ರಕಟಗೊಳ್ಳಲು ಹಲವು ಸಹಜ ಅಡಚಣೆಗಳೂ ಇದ್ದುವು. ಈಗ ತಂತ್ರಜ್ಞಾನದ ವೃದ್ಧಿಯೊಂದಿಗೆ ಇಂದು ಕೀಲಿಮಣೆಯ ಮೇಲೆ ಹಲವುಬಾರಿ ಬೆರಳುಗಳನ್ನಾಡಿಸಿ, ಒಂದು ಗುಂಡಿಯನ್ನು ಒತ್ತಿದರೆ ಬರೆದದ್ದು ಜಗತ್ತಿಗೇ ತಿಳಿಯುತ್ತದೆ. ಅಚ್ಚು ಮಾಧ್ಯಮದಲ್ಲೂ ಇದು ತುಂಬಾ ಸರಳವಾಗಿದೆಯೆಂದು ಗೆಳೆಯರೊಬ್ಬರು ಹೇಳಿದರು. ಡಿಟಿಪಿಯ ತಂತ್ರಜ್ಞಾನ ಬಂದಿರುವುದರಿಂದ ಮೊದಲು 1000 ಪ್ರತಿಗಳಿಗೆ ಕಡಿಮೆ ಅಚ್ಚು ಮಾಡುವುದು ಕಷ್ಟ ಎಂದು ಒದ್ದಾಡುತ್ತಿದ್ದುದಕ್ಕೆ ವಿರುದ್ಧವಾಗಿ 150 ಪ್ರತಿಗಳನ್ನು ಅಚ್ಚು ಹಾಕಬಹುದಾದ ಸಾಧ್ಯತೆಯಿದೆಯಂತೆ. ಅಕ್ಷರ ಜೋಡಣೆಯನ್ನು ಕಂಪ್ಯೂಟರಿನಲ್ಲಿ ಕಾಯ್ದಿರಿಸಬಹುದಾದ್ದರಿಂದ, ಸರಕಾರಿ, ಲೈಬ್ರರಿ ಆರ್ಡರುಗಳು ಬಂದಾಗ ಇನ್ನಷ್ಟು ಪ್ರತಿಗಳನ್ನು ಅಚ್ಚು ಹಾಕಬಹುದು...



ಯುದ್ಧಾನಂತರದ ಅಫಘಾನಿಸ್ತಾನ - ವಿರೋಧಾಭಾಸದ ನಡುವೊಂದಿಷ್ಟು ದೇಶಭಕ್ತಿ

ಅಫಘಾನಿಸ್ತಾನದ ಉಸ್ತುವಾರಿ ತಾಲಿಬಾನ್ ಕೈಯಿಂದ ಸ್ಥಳೀಯರ, ಪ್ರಜಾಪ್ರತಿನಿಧಿಗಳ ಕೈಗೆ ಸೇರಿ ಹಲವು ವರ್ಷಗಳಾಗಿವೆ. ಹಾಗೆಂದು ಆ ದೇಶದ ಸಂಪೂರ್ಣ ಸೂತ್ರಗಳು ಪ್ರಜಾಪ್ರಭುತ್ವದ ಅಡಿಪಾಯದ ಮೇಲೆ ನಡೆಯುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಹಳೆಯ ಯುದ್ಧಕೋರರು, ಮಾದಕ ವಸ್ತುಗಳನ್ನು ಮಾರಾಟ ಮಾಡುವ ಮಾಫಿಯಾ ಹಾಗೂ ಮತಾಂಧ ಮೂಲಭೂತವಾದಿಗಳು ಇನ್ನೂ ದೇಶದ ಬಹಳಷ್ಟು ಪ್ರಾಂತಗಳಲ್ಲಿ ಇದ್ದಾರೆ. ಆದರೂ ಆ ದೇಶದಲ್ಲಿ ಕೆಲವು ಗಮ್ಮತ್ತಿನ ವಿಚಾರಗಳು ನನಗೆ ಕಂಡುವು.




ಯುಐಡಿ: ಯಾಕೆ ವಿಫಲವಾಗಬಹುದು, ಯಾಕೆ ಸಫಲವಾಗಬೇಕು


ಭಾರತದಲ್ಲಿ ವಾಸವಿರುವ ಪ್ರತಿಯೊಬ್ಬ ವ್ಯಕ್ತಿಗೂ ಅಸ್ತಿತ್ವದ ಗುರುತಿನ ಚೀಟಿ ಕೊಡಬೇಕೆಂದೇ ನಿಯಮಿಸಲ್ಪಟ್ಟ ಯುನಿಕ್ ಐಡಿ ಅಥಾರಿಟಿಯ ಮುಂದಿರುವುದು ಸುಲಭವಾದ ಸವಾಲೇನೂ ಅಲ್ಲ. ಈ ಸ್ಥರದ ಕೆಲಸ ಈವರೆಗೆ ಯಾವುದೇ ದೇಶದಲ್ಲಿ ನಡೆದಿಲ್ಲ. ಒಂದು ನೂರು ಕೋಟಿಕೂ ಹೆಚ್ಚಿನ ಜನಸಂಖ್ಯೆಯ ಗುರುತನ್ನು ಸಂಗ್ರಹಿಸಿ ಪ್ರತಿಯೊಬ್ಬರಿಗೂ ಒಂದು ವಿಶಿಷ್ಟ ಸಂಖ್ಯೆಯನ್ನು ನೀಡಿ ಆ ಸಂಖ್ಯೆ ಹೊಂದಿದ ವ್ಯಕ್ತಿಯ ಗುರುತನ್ನು ಒಂದೆಡೆ ಕಾಯ್ದಿಡುವುದಲ್ಲದೇ - ಬೇಕೆಂದಾಗ ತ್ವರಿತ ಗತಿಯಲ್ಲಿ ಆ ಗುರುತನ್ನು ಪರಿಶೀಲಿಸಿ ಧೃವೀಕರಿಸಹೊರಟಿರುವ ಈ ಯೋಜನೆ ಮಹತ್ವಾಕಾಂಕ್ಷೆಯಿಂದ ಕೂಡಿದೆ. ಯುಐಡಿ ಮುಂದಿರುವ ಸವಾಲುಗಳು ಮಹತ್ತರವಾದವು. ಅಂಥ ಸವಾಲನ್ನು ಎದುರಿಸಲು ಸಿದ್ಧರಾಗಿ ನಿಂತಿರುವ ನಂದನ್ ನಿಲೇಕಣಿ ಸಫಲರಾಗುವರೇ? ನಂದನ್ ಅವರ ಕೆಲಸ ಚುನಾವಣೆಗಳಿಗೆ ಗುರುತಿನ ಚೀಟಿ ಕೊಡಲು ಹೊರಟ ಶೇಷನ್ ಗಿಂತ ಎಷ್ಟು ಭಿನ್ನ ಹಾಗೂ ಎಷ್ಟು ಜಟಿಲ... ಹಾಗೂ ಅವರ ಸಾಫಲ್ಯಕ್ಕೆ ಮಾಪಕಗಳು ಏನು?






ಹೊಸ ಓದು: ಬಡ್ಡಿವ್ಯಾಪಾರಿಯ ಸಾವು - ಕಥನ ತಂತ್ರದ ಕೆಲವು ವಿಚಾರಗಳು

ಕೋಟ ನೀಲಿಮಾರ ಡೆಥ್ ಆಫ್ ಎ ಮನೀಲೆಂಡರ್ ಅನ್ನುವ ಇತ್ತೀಚಿನ ಪುಸ್ತಕ ಈಚೆಗೆ ಬರುತ್ತಿರುವ ಭಾರತೀಯರು ಬರೆಯುತ್ತಿರುವ ಇಂಗ್ಲೀಷ್ ಸಾಹಿತ್ಯದ ಸಂದರ್ಭದಲ್ಲಿ, ಒಂದು ಭಿನ್ನ ಲಹರಿಯನ್ನು ತರುತ್ತದೆ. ಇಂಗ್ಲೀಷಿನಲ್ಲಿ ಬರೆಯುವ ಭಾರತೀಯ ಬರಹಗಾರರು ಪಶ್ಚಿಮಾಭಿಮುಖವಾಗಿ ಯಾರನ್ನೋ ಮೆಚ್ಚಿಸಲು ಮಾತ್ರ ಬರೆಯುತ್ತಿದ್ದಾರೆ ಎನ್ನುವ ಆರೋಪ ಹೊರಿಸುವುದು ಅಸಮಂಜನವೇ ಸರಿ. ಆದರೆ ಇತ್ತೀಚಿನ ಬೆಳವಣಿಗೆಯನ್ನು ಕಂಡಾಗ, ಭಾರತ ಕೇಂದ್ರಿತವಾಗಿ ಬರುತ್ತಿರುವ ಬರವಣಿಗೆಯಲ್ಲಿ ನಮಗೆ ಐದು ಭಿನ್ನ ಎಳೆಗಳು ಕಾಣಿಸುತ್ತಿವೆ.

  • ಮೊದಲ ಎಳೆ ಭಾರತದ ಮೇಲ್ವರ್ಗವನ್ನು ಪ್ರತಿನಿಧಿಸುವ [ಆದರೆ ಸಾಹಿತ್ಯವನ್ನು ಪ್ರತಿನಿಧಿಸಲಾರದ] ಶೋಭಾ ಡೇ, ಚೇತನ್ ಭಗತ್ ಗಳು ಹರಿಯಬಿಡುತ್ತಿರುವ ಸಾಹಿತ್ಯ.
  • ಎರಡನೆಯ ಎಳೆ ಅರವಿಂದ ಅಡಿಗ, ಅರುಂಧತಿ ರಾಯ್ ಪ್ರತಿನಿಧಿಸುವ ಸಾಹಿತ್ಯ. ಇದರಲ್ಲಿ ಭಾರತದ ಮೂಲ ಎಳೆಗಳಿದ್ದರೂ, ಅವರುಗಳ ಮನಸ್ಸಿನಲ್ಲಿರು ಓದಗ ವೃಂದ ವಿಶ್ವವ್ಯಾಪಿಯಾದ್ದರಿಂದ ಅವರ ಬರವಣಿಗೆಯೂ ಸಾಕಷ್ಟು ಗ್ಲೋಬಲೈಸ್ಡ್ ಬರವಣಿಗೆಯಾಗಿರುತ್ತದೆ.
  • ನಿಜಕ್ಕೂ ವಿಶ್ವ ಸಾಹಿತ್ಯದ ವೇದಿಕೆಯ ಮೇಲೆ ಬರೆಯುತ್ತಾ ಭಾರತವನ್ನು ಆಗಾಗ ಸಂದರ್ಭ ಮಾಡಿಕೊಂಡು ಬರೆವ ಲೇಖಕರಾದ ವಿಕ್ರಂ ಸೇಠ್ ಮತ್ತು ಅಮಿತಾವ್ ಘೋಷ್ ಮೂರನೆಯ ಎಳೆಗೆ ಸೇರುತ್ತಾರೆ.
  • ನಾಲ್ಕನೆಯ ಎಳೆಯಲ್ಲಿ ಭಾರತೀಯ ಸಂಜಾತರಾಗಿ, ಇತರೆ ದೇಶದ ಪಾಸ್ ಪೋರ್ಟ್ ಹೊಂದಿರುವ, ಆಗಾಗ ಇಲ್ಲಿಗೆ ವಾಪಸ್ಸಾಗುವ, ತಮ್ಮ ನೆನಪಿನ ಗಣಿಯಿಂದ - ಅಥವಾ ಪ್ರವಾಸೀ ಬೆರಗಿನಿಂದ ಭಾರತವನ್ನು ನೋಡುವ ಆದರೂ ಸಮರ್ಥವಾಗಿ ಬರೆಯಬಲ್ಲ ಸಲ್ಮಾನ್ ರಶ್ದೀ, ಝುಂಪಾ ಲಹಿರಿಗಳದ್ದು.
  • ಐದನೆಯ ಎಳೆಯಲ್ಲಿ ರಾಜಾರಾವ್ ಶಶಿ ದೇಶಪಾಂಡೆ, ಕೆ.ಆರ್. ಉಷಾರಂತೆ ಸ್ಥಳೀಯ ಸಂವೇದನೆಯನ್ನು ಇಂಗ್ಲೀಷಿನಲ್ಲಿ ಸಮರ್ಥವಾಗಿ ಬಿಂಬಿಸುವ, ಸಾಧ್ಯವಾಗಿದ್ದರೆ ತಮ್ಮ ತಮ್ಮ ಭಾಷೆಗಳಲ್ಲಿಯೇ ಸಾಹಿತ್ಯ ರಚಿಸಬಹುದಾಗಿದ್ದ ಪರಂಪರೆಯ ಬರಹಗಾರರು. ಈ ಪರಂಪರೆಗೆ ಈಚಿನ ಸೇರ್ಪಡೆ ಕೋಟ ನೀಲಿಮಾ ಎನ್ನುವ ಲೇಖಕಿಯದ್ದು ಅನ್ನಿಸುತ್ತದೆ.






ಅಸ್ತಿತ್ವದ ಗುರುತಿನ ಚೀಟಿ

ಹಲವು ವರ್ಷಗಳ ಹಿಂದೆ ರಜೆಗೆ ಬೆಂಗಳೂರಿಗೆ ಬಂದಿದ್ದ ಪುಟ್ಟ ಹುಡುಗ ತಾನಿಳಿದುಕೊಂಡಿದ್ದ ಮನೆಯಲ್ಲಿದ್ದ ಹಿರಿಯರೊಬ್ಬರನ್ನು "ನೀನು ಯಾರು?" ಎಂದು ಕೇಳಿದ. ಅದಕ್ಕೆ ಆ ಹಿರಿಯರು ಒಂದು ದೀರ್ಘ ಆಲೋಚನೆಗೆ ಬಿದ್ದು "ಮಗೂ, ಆ ವಿಷಯವನ್ನೇ ತಿಳಿದುಕೊಳ್ಳಲು ಅನೇಕ ದಾರ್ಶನಿಕರು ಪ್ರಯತ್ನಿಸಿದ್ದಾರೆ, ಹಾಗೂ ಆ ವಿಷಯವನ್ನು ಅರ್ಥಮಾಡಿಕೊಳ್ಳಲೆಂದೇ ನಾನು ವೇದಾಂತದ ಕ್ಲಾಸುಗಳಿಗೆ ಹೋಗುತ್ತಿದ್ದೇನೆ!" ಎಂದಿದ್ದರು.






ಬಂಡವಾಳಶಾಹಿ ತತ್ವದ ನಿರಂತರತೆ?

ಈಚೆಗೆ ನಡೆದ ಒಂದು ಸೆಮಿನಾರಿನಲ್ಲಿ ಬಂಡವಾಳಶಾಹಿ ಸೂತ್ರಗಳು ನಿರಂತರವೇ, ಅಥವಾ ಆ ತತ್ವದ ಭವಿಷ್ಯ ಸೀಮಿತವಾಗಿದೆಯೇ ಎಂಬ ಪ್ರಶ್ನೆಯನ್ನು ಚರ್ಚೆಗೊಳಪಡಿಸಿದ್ದರು. ಮ್ಯಾನೇಜ್ ಮಂಟ್ ಪಠಿಸುವ ಐಐಎಂನಂತಹ ಸಂಸ್ಥೆಯಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳು ಈ ಪ್ರಶ್ನೆಯನ್ನು ಕೇಳಹತ್ತಿದ್ದದ್ದೇ ಕುತೂಹಲದ, ಸೋಜಿಗದ ವಿಷಯ. ಅನೇಕ ಬಾರಿ ಮಾತಿನಲ್ಲಿ ಅನಂತಮೂರ್ತಿಯವರು ಐಐಎಂಅನ್ನು ವ್ಯಾಪಾರಿಗಳ ಕಾಶಿ ಎಂದು ಲಘುವಾಗಿ ಗೇಲಿಮಾಡಿರುವದುಂಟು. ಈ ಇಂಥ ಕಾಶಿಯಲ್ಲಿ "ವಿಶ್ವನಾಥನು ದೇವರೇ?" ಎಂದು ಪ್ರಶ್ನಿಸುವ ಪರಿ ನನಗೆ ತುಸು ಸೋಜಿಗವನ್ನುಂಟುಮಾಡಿತ್ತು. ಆದರೆ ಮಾರುಕಟ್ಟೆಯ ಮಹಾತ್ಮನ ನಂಬಿಕೆ ಆಧಾರವಾಗಿಯೇ ತಮ್ಮ ಭವಿಷ್ಯದ ಕನಸುಗಳನ್ನು ಕಟ್ಟಿದ್ದ ವಿದ್ಯಾರ್ಥಿಗಳಿಗೆ ಅಮೇರಿಕದ ದೊಡ್ಡ - ನೂರೈವತ್ತು ವರ್ಷಗಳಿಗೂ ಹೆಚ್ಚುಕಾಲ ಆ ಸೂತ್ರಗಳ ಆಧಾರದ ಮೇಲೆಯೇ ನಡೆದ ದೊಡ್ಡ ವಿತ್ತೀಯ ಸಂಸ್ಥೆಗಳು ಇದ್ದಕ್ಕಿದ್ದ ಹಾಗೆ ರಾತ್ರೋರಾತ್ರಿ ಕುಸಿದದ್ದು ಕಂಡು ತಮ್ಮ ನಂಬಿಕೆಗಳನ್ನು ಪ್ರಶ್ನಿಸಿಕೊಳ್ಳುವ ಅಂತರಾವಲೋಕನಕ್ಕೆ ಎಡೆಮಾಡಿದ್ದಿರಬಹುದು.






ಬಡವರು ಮತ್ತು ರಾಷ್ಟ್ರೀಕೃತ ಬ್ಯಾಂಕುಗಳು.

ಬಡಕುಟುಂಬಗಳ ಜೀವನದಲ್ಲಿ ಬೇಕಾದ ವಿತ್ತೀಯ ಸೇವೆಗಳ ಬಗೆಗಿನ ಮಾಹಿತಿಯನ್ನು ಪರಿಶಿಲಿಸೋಣ. 1971ರಲ್ಲಿ ನಡೆಸಿದ್ದ ರಾಷ್ಟ್ರೀಯ ದಶಮಾನ ಸರ್ವೆಯ ಪ್ರಕಾರ ಗ್ರಾಮೀಣ ಕುಟುಂಬಗಳ ಸುಮಾರು 30 ಪ್ರತಿಶತ ಸಾಲದ ಮೊತ್ತ ಮಾತ್ರ ಸಂಸ್ಥಾಗತ ಮೂಲಗಳಿಂದ [ಬ್ಯಾಂಕು, ಸಹಕಾರ ಸಂಘ - ಹೀಗೆ] ಬಂದಿದ್ದರೆ ಮಿಕ್ಕ 70 ಪ್ರತಿಶತ ಸಾಲದ ಮೊತ್ತವನ್ನು ಇತರ ಮೂಲಗಳಿಂದ ಈ ಕುಟುಂಬಗಳು ಪಡೆದಿದ್ದವು. ಬ್ಯಾಂಕುಗಳ ರಾಷ್ಟ್ರೀಕರಣ ಆಗಷ್ಟೇ ಆಗಿತ್ತು. 1981ಕ್ಕೆ ಬರುವ ವೇಳೆಗೆ ಸುಮಾರು 60 ಪ್ರತಿಶತ ಸಾಲದ ಮೊತ್ತ ಸಂಸ್ಥಾಗತ ಮೂಲಗಳಿಂದ ಬರಲು ಪ್ರಾರಂಭವಾಗಿತ್ತು. ನಗರ ಪ್ರದೇಶಗಳ ಮಾಹಿತಿಯೂ ಇದಕ್ಕಿಂತ ತೀವ್ರ ಭಿನ್ನತೆಯನ್ನೇನೂ ತೋರಿರಲಿಲ್ಲ. 1991ರ ವೇಳೆಗೆ ಸಂಸ್ಥಾಗತ ಮೂಲಗಳ ಪಾಲು 56 ಪ್ರತಿಶತಕ್ಕೆ ಇಳಿದಿತ್ತು. 2003ರಲ್ಲಿ ಪ್ರಪಂಚ ಬ್ಯಾಂಕು ನಡೆಸಿದ ಒಂದು ದೊಡ್ಡ ಅಧ್ಯಯನದಲ್ಲಿ ಸಂಸ್ಥೆಗಳ ಪಾಲು ತುಸುವೇ ಬೆಳಿದಿದ್ದು 1971-1981 ನಡುವೆ ಕಂಡಂಥಹ ಯಾವ ದೊಡ್ಡ ಬದಲಾವಣೆಯೂ ಕಂಡುಬರಲಿಲ್ಲ.






ಬಡ್ಡಿವ್ಯಾಪಾರಿಗಳ ಕಥೆಗಳು

ಗ್ರಾಮೀಣ ಪ್ರದೇಶಗಳಲ್ಲಿನ ಬಡ್ಡಿವ್ಯಾಪಾರಿಗಳೆಂದರೆ ನಮ್ಮ ಮನಸ್ಸಿಗೆ ಯಾವ ಚಿತ್ರ ಬರುತ್ತದೆ? ಬಡ್ಡಿವ್ಯಾಪಾರಿಗಳೆಂದರೆ ದುಷ್ಟರು, ಶೋಷಕರು, ಬಡವರ ಜಮೀನನ್ನು ಒತ್ತುವರಿಮಾಡಿಕೊಳ್ಳುವವರು, ಹಾಗೂ ನಾನಾ ರೀತಿಯಲ್ಲಿ ಹಿಂಸಿಸುವ ಹೃದಯಹೀನರು ಅನ್ನುವ ಚಿತ್ರ ನಮ್ಮ ಮನಸ್ಸಿನಲ್ಲಿ ಬಂದರೆ ಅದು ಆಶ್ಚರ್ಯವನ್ನು ಉಂಟುಮಾಡಬಾರದು. ನಾನು ಪುಟ್ಟವನಾಗಿದ್ದಾಗಿನಿಂದಲೂ ಓದಿದ ಸಾಹಿತ್ಯ, ಕಂಡ ಸಿನೇಮಾ ಹಾಗೂ ಬೆಳೆದು ನಿಂತಾಗ ಓದಿದ ಬೌದ್ಧಿಕ ಬರಹಗಳೆಲ್ಲ ಈ ಚಿತ್ರವನ್ನು ನಮ್ಮ ಮುಂದಿಡುವುದರಲ್ಲಿ ಸಫಲವಾಗಿದ್ದುವು. ಇದೂ ಸಾಲದೆಂಬಂತೆ, ಸರಕಾರ ಯಾವುದೇ ಯೋಜನೆಯನ್ನು ರೂಪಿಸುವಾಗ ನಮಗೆ "ಬಡವರನ್ನು ಸಾಲಮುಕ್ತರನ್ನಾಗಿ ಮಾಡುವುದೂ", "ಬಡ್ಡಿವ್ಯಾಪಾರಿಗಳ ಹಿಡಿತದಿಂದ ಬಿಡಿಸುವುದೂ" ಮುಖ್ಯ ಕಾರ್ಯಕ್ರಮಗಳಾಗಿ ಕಾಣುತ್ತಿದ್ದುವು.






ಕಾಬೂಲಿವಾಲಾನ ಕಥಾನಕ

ಕಾಬೂಲಿಗೆ ಕೆಲಸದ ಮೇಲೆ ಹೋಗಬೇಕು ಅನ್ನುವ ಮಾತು ಬಂದ ಕೂಡಲೇ ನನಗೆ ಎಲ್ಲೆಡೆಯಿಂದಲೂ ಎಲ್ಲ ರೀತಿಯ ಉಪದೇಶಗಳು ಬರತೊಡಗಿದುವು. ಮೂಲಭೂತವಾಗಿ ಎಲ್ಲರೂ ಹೇಳಿದ್ದು ಇಷ್ಟೇ - ಅಲ್ಲಿಗೆ ಹೋಗುವುದು ತುಂಬಾ ಅಪಾಯದಿಂದ ಕೂಡಿದ್ದು, ಯಾವಾಗ ಏನುಬೇಕಾದರೂ ಆಗಬಹುದು. ಹೀಗಿದ್ದರೂ ಕಳೆದ ನಾಲ್ಕುತಿಂಗಳಲ್ಲಿ ಎರಡು ಬಾರಿ ಅಲ್ಲಿಗೆ ಹೋಗಿಬಂದಿರುವೆ. ಮೊದಲ ಯಾತ್ರೆ ನಡೆದಾಗ ಅಲ್ಲಿನ ಚುನಾವಣೆಯ ತಯಾರಿ ನಡೆದಿತ್ತು. ಎರಡನೆಯ ಯಾತ್ರೆಯ ಸಮಯಕ್ಕೆ ಆ ಚುನಾವಣೆಯ ಫಲಿತಾಂಶ ಬರಬಹುದೆನ್ನುವ ಸುದ್ದಿಯಿತ್ತಾದರೂ, ಚುನಾವಣೆಯಲ್ಲಿ ನಡೆದಿರಬಹುದಾದ ಅವ್ಯವಹಾರದ ಕಾರಣವಾಗಿ ತನಿಖೆ ಇನ್ನೂ ನಡೆಯುತ್ತಿದೆ.





ಖರ್ಚಿನಿಂದ ಉಳಿತಾಯ: ಕೆಲವು ಮಾದರಿಗಳು


ಹಲವು ವರ್ಷಗಳ ನನ್ನ ಸ್ನೇಹಿತನೊಬ್ಬ ಹೀಗೆ ಹೇಳುತ್ತಿದ್ದುದುಂಟು: "ಈ ನಡುವೆ ನನಗೆ ದುಡ್ಡಿಗೆ ಬಹಳ ಕಷ್ಟವಾಗಿಬಿಟ್ಟಿದೆ. ಯಾಕೆಂದರೆ ನನ್ನ ಆದಾಯವೆಲ್ಲಾ ಸೇವಿಂಗ್ಸ್ ನಲ್ಲಿಯೇ ಖರ್ಚಾಗಿಬಿಡುತ್ತದೆ!" ಇದು ಒಂದು ರೀತಿಯಿಂದ ಯೋಚಿಸಬೇಕಾದ, ಗಹನವಾದ ವಿಚಾರ. ಉಳಿತಾಯ ಮಾಡಿದಷ್ಟೂ ಹಣವನ್ನು ನಾವು ಪುನಃ ಸಂಪಾದಿಸಿದ ಹಾಗೆಯೇ. ಇಷ್ಟಾದರೂ, ಬಡವರಿಗೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿರುವವರಿಗೆ ಸಾಲ ಪಡೆವ ಮಾರ್ಗಗಳನ್ನು ಸರಕಾರಗಳೂ, ಖಾಸಗೀ ಸಂಸ್ಥೆಗಳೂ ಒದಗಿಸಿಕೊಡುತ್ತವೆಯೇ ಹೊರತು, ಉಳಿತಾಯ ಮಾಡುವ ಹೆಚ್ಚಿನ ಮಾರ್ಗಗಳನ್ನು ನಾವು ಕಂಡಿಲ್ಲ. ಮೈಕ್ರೋಫೈನಾನ್ಸ್ ವಿಷಯಕ್ಕೆ ಬಂದಾಗಲೂ ಸಾಲ ಕೊಡುವ ಅನೇಕ ಮಾದರಿಗಳು ನಮಗೆ ಸಿಗುತ್ತವಾದರೂ ’ಚಿಕ್ಕ ಉಳಿತಾಯದ’ ಮಾದರಿಗಳು ಕಡಿಮೆಯೇ. ಬಡವರಿಗೆ ಉಳಿತಾಯ ಮಾಡುವ ಕ್ಷಮತೆಯಿಲ್ಲವೆನ್ನುವ ಪ್ರತಿಪಾದನೆಯನ್ನು ನಾವು ಅಲ್ಲಲ್ಲಿ ಕಾಣುತ್ತೇವಾದರೂ, ಆ ವಾದದಲ್ಲಿ ಪೂರ್ಣ ಸತ್ಯವಿಲ್ಲ. ಬ್ಯಾಂಕುಗಳ ಮಾಹಿತಿಯನ್ನು ನಾವು ಗಮನಿಸಿದಾಗ ಅನೇಕ ಹಿಂದುಳಿದ ಪ್ರಾಂತಗಳಲ್ಲಿ ಬ್ಯಾಂಕುಗಳಲ್ಲಿ ಇರುವ ಠೇವಣಿಯ ಮೊತ್ತ ಆ ಶಾಖೆಗಳು ಕೊಡುವ ಸಾಲದ ಮೊತ್ತಕ್ಕಿಂತ ಐದಾರು ಪಟ್ಟು ಹೆಚ್ಚಿರುವುದನ್ನು ನಾವು ನೋಡಬಹುದು. ಹೀಗಾಗಿ ಬಿಹಾರ, ಉತ್ತರಪ್ರದೇಶ, ರಾಜಾಸ್ಥಾನದಂತಹ ರಾಜ್ಯಗಳ ಉಳಿತಾಯದ ಹಣ ಮುಂಬಯಿನ ದೊಡ್ಡ ವ್ಯಾಪಾರಗಳ ಮೂಲಧನವಾಗುತ್ತಿರುವುದನ್ನು ನಾವು ಕಾಣಬಹುದು.





ಚಿಕ್ಕಸಾಲ, ಬಡತನ, ಮತ್ತು ಮಹಿಳೆಯರು: ಒಂದು ಕಥನ


ಬಡನದ ನಿರ್ಮೂಲನೆಯ ವಿಷಯಕ್ಕೆ ಬಂದಾಗ ಯಾವರೀತಿಯ ಪ್ರಣಾಲಿಗಳು ಯಶಸ್ವಿಯಾಗಿರುತ್ತವೆ ಎಂದು ಹೇಳುವುದು ಕಷ್ಟದ ಮಾತು. ನಮ್ಮ ಯೋಚನೆ ಮೂಲಭೂತವಾಗಿ ಬಡವರ ಆದಾಯವನ್ನು ಹೆಚ್ಚಿಸುವದರತ್ತ ಇರಬೇಕೇ ಅಥವಾ ಅವರ ಜೀವನದಲ್ಲಿರಬಹುದಾದ ಏರುಪೇರುಗಳನ್ನು ಕಡಿಮೆ ಮಾಡುವತ್ತ ವ್ಯೂಹವನ್ನು ರಚಿಸಬೇಕೇ ಅನ್ನುವುದು ಒಂದು ರೀತಿಯ ದ್ವಂದ್ವದ ಮಾತೇ. [ಮೈಕ್ರೊಫೈನಾನ್ಸ್] ಚಿಕ್ಕಸಾಲದ ಕಾರ್ಯಕ್ರಮಗಳು ಬಡತನವನ್ನು ಕಡಿಮೆ ಮಾಡುವತ್ತ ಕೆಲಸ ಮಾಡುತ್ತವೆ ಎನ್ನುವ ಮಾತನ್ನ ಸಾಲ ಕೊಡುವ ಪ್ರತೀ ಸಂಸ್ಥೆಯೂ ಪ್ರತಿಪಾದಿಸುತ್ತಾ ಬಂದಿದ್ದರೂ ಈ ಕಾರ್ಯಕ್ರಮದಿಂದಾಗಿ ಬಡತನದ ಮೇಲೆ ಮೂಲಭೂತವಾದ ಪರಿಣಾಮವಾಗಿದೆಯೆಂದೂ, ಎಲ್ಲಕ್ಕಿಂತ ಇದೇ ಸಶಕ್ತ ಕಾರ್ಯಕ್ರಮವೆಂದೂ ಪ್ರಶ್ನಾತೀತವಾಗಿ ನಿರೂಪಿಸಲು ಯಾವುದೇ ಅಧ್ಯಯನಕ್ಕೆ ಸಾಧ್ಯವಾಗಿಲ್ಲ.






ಮಹಾತ್ಮಾ ಗಾಂಧಿ ಮತ್ತು ಮಾ ಬ್ಲಾ ಪೆನ್ನು

"ನನ್ನ ಜೀವನವೇ ನನ್ನ ಸಂದೇಶ" ಎಂದು ಮಹಾತ್ಮಾ ಗಾಂಧಿ ಹೇಳಿದ್ದು ಯಾವಗ ಅನ್ನುವುದನ್ನು ನಾವೆಲ್ಲರೂ ಮರೆತಿದ್ದರೂ ಅದನ್ನು ಆಗಾಗ ಪ್ರಯೋಗಿಸುವುದನ್ನು ಮಾತ್ರ ಮರೆಯುವುದಿಲ್ಲ. ಆದರೆ ಮಹಾತ್ಮ ಕೊಟ್ಟ ಸಂದೇಶವೇನು ಅದನ್ನು ನಾವು ಅರ್ಥೈಸುವುದು ಹೇಗೆ ಅನ್ನುವುದು ಮಾತ್ರ ಗಹನ ಚರ್ಚೆಯ ವಿಷಯವಾಗಬಹುದು. ಮಾಹಾತ್ಮ ಗಾಂಧಿಯನ್ನು ಓದಿಕೊಂಡಿದ್ದರೂ ಆತನ ಬಗ್ಗೆ ಪಾಂಡಿತ್ಯವಿಲ್ಲದ, ಯಾವ ಗಾಂಧೀವಾದದ ವಿಚರವನ್ನೂ ಪಾಲಿಸದ ನಾನು ಈ ವಿಷಯದಲ್ಲಿ ಹಠಾತ್ ಆಸಕ್ತಿ ಪಡೆಯುವುದಕ್ಕೆ ಕಾರಣವಿದೆ. ಈಚೆಗೆ ಪತ್ರಿಕೆಗಳಲ್ಲಿ ಮತ್ತು ನಗರದ ಹಲವೆಡೆ ಪೋಸ್ಟರುಗಳಲ್ಲಿ ಕಂಡ ಮಾ ಬ್ಲಾ [Mont Blanc] ಪೆನ್ನಿನ ಜಾಹೀರಾತನ್ನು ಕಂಡಾಗ ಈ ಪ್ರಶ್ನೆ ಸಹಜವಾಗಿ ನನ್ನಲ್ಲಿ ಉದ್ಭವವಾಯಿತು.






ಕನಸುಗಾರ ಯೂನಸ್ ಮತ್ತು ಲಾಭವಿಲ್ಲದ ವ್ಯಾಪಾರ

ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ತಮ್ಮ ಗ್ರಾಮೀಣ್ ಬ್ಯಾಂಕಿನ ಚಿಕ್ಕ ಸಾಲದ ಕಾರ್ಯಕ್ರಮದ ಮೂಲಕ ಖ್ಯಾತಿಯನ್ನು ಪಡೆದವರು. ಬಾಂಗ್ಲಾದೇಶದಂತಹ ಪುಟ್ಟ ದೇಶದಲ್ಲಿ ಬಡವರಿಗೆ ಅದರಲ್ಲೂ ಮುಖ್ಯವಾಗಿ ಹೆಂಗಸರಿಗೆ ವಿತ್ತೀಯ ಸೇವೆಗಳನ್ನೊದಗಿಸಿದ್ದೇ ಅಲ್ಲದೇ ಬ್ಯಾಂಕಿಂಗ್ ನಡೆಸಬಹುದಾದ ರೀತಿಯನ್ನೇ ಮೂಲಭೂತವಾಗಿ ಪ್ರಶ್ನಿಸಿ ಅದಕ್ಕೆ ಒಂದು ವಿಭಿನ್ನ ರೂಪವನ್ನು ಕೊಟ್ಟವರು.





ಭೂಗತ ಜಗತ್ತಿನ ಒಳನೋಟಗಳು

ಸುಧೀರ್ ವೆಂಕಟೇಶ್ ಅವರ ಗ್ಯಾಂಗ್ ಲೀಡರ್ ಫರ್ ಎ ಡೇ ಒಂದು ಕುತೂಹಲಕಾರಿ ಪುಸ್ತಕ. ನಿಜಕ್ಕೂ ಈ ಪುಸ್ತಕ ಗಂಭೀರ ಬರವಣಿಗೆ ಮತ್ತು ಜನಪ್ರಿಯ ಬರವಣಿಗೆಯ ಮಧ್ಯೆ ತೂರಾಡುತ್ತಾ, ಕಡೆಗೆ ಅನೇಕ ಪ್ರಶ್ನೆಗಳನ್ನು ಎಬ್ಬಿಸಿ ಅವುಗಳನ್ನು ಉತ್ತರಿಸಲು ಪ್ರಯತ್ನಿಸದೆಯೇ ನಿಂತುಬಿಡುತ್ತದೆ. ಹೀಗೆ ಎಲ್ಲಕ್ಕೂ ಉತ್ತರವನ್ನು ನೀಡುವುದು ಸುಧೀರ್ ಅವರ ಉದ್ದೇಶವೂ ಅಲ್ಲ, ಅದು ಸಾಧ್ಯವೂ ಆಗುವುದಿಲ್ಲ ಎನ್ನುವ ಭಾವನೆ ನಮಗೆ ಬರುವುದರಲ್ಲಿ ಯಾವ ಸೋಜಿಗವೂ ಇಲ್ಲ. ಆದರೂ ಈ ಪುಸ್ತಕವನ್ನು ನಾವು ಓದಿ ಚರ್ಚಿಸಬೇಕಾದ ಅವಶ್ಯಕತೆಯಿದೆ.






ತಿರುಮಲೇಶರ ಕಾವ್ಯ

ಕನ್ನಡದಲ್ಲಿ ಕಾವ್ಯದಲ್ಲಿ ನನಗೆ ಪ್ರಿಯರಾದ ಕವಿ ತಿರುಮಲೇಶ. ಅದಕ್ಕೆ ಕಾರಣವಿಷ್ಟೇ - ತಿರುಮಲೇಶ ಯಾವಾಗಲೂ ಏನಾದರೂ ಹೊಸತನ್ನು ಹೇಳುತ್ತಾರೆ, ಹೊಸರೀತಿಯಲ್ಲಿ ಹೇಳುತ್ತಾರೆ. ’ಮುಖವಾಡಗಳು’ ಸಂಕಲನದಿಂದ ’ಅವಧ’ದ ವರೆಗೆ ಬಂದಿರುವ ಅವರ ಐದು ಕವನ ಸಂಗ್ರಹಗಳಲ್ಲಿ ವಿಶೇಷ ವೈವಿಧ್ಯತೆಯಿದೆ. ಅಡಿಗರ ಜಾಡಿನಲ್ಲಿಯೇ ಕವಿತೆಗಳನ್ನು ಬರೆಯಲು ಪ್ರಾರಂಭಿಸಿದ ತಿರುಮಲೇಶರು ನಂತರ ತಮ್ಮದೇ ಪ್ರತ್ಯೇಕತೆಯನ್ನು ಶೋಧಿಸುತ್ತಾ ತಮ್ಮದೇ ಮಾರ್ಗವನ್ನು ಕಂಡುಕೊಂಡು ಮುಂದೆ ಸಾಗಿದರು.




ರುದ್ರಮಾತಾದ ರಾಮಜೀಭಾಯಿ

ನಾನು ಕೆಲಸ ಮಾಡುವ ಸಂಸ್ಥೆಯಲ್ಲಿ ಯಾವಾಗಲೂ ಕೇಳಿಬರುವ ಮಾತುಗಳು ವ್ಯಾಪಾರ, ವ್ಯಾಪಾರದ ಬೆಳವಣಿಗೆ, ಲಾಭಾಂಶ, ಗುರಿ-ಸಾಧನೆಗಳಿಗೆ ಸಂಬಂಧಿಸಿದ್ದು. ನಮ್ಮ ವಿದ್ಯಾರ್ಥಿಗಳೂ ಸಹ ಕಾರ್ಯಕ್ಷೇತ್ರದ ಧ್ಯೇಯ, ಅದನ್ನು ಆರ್ಜಿಸಲು ನಡೆಸಬೇಕಾದ ತಯಾರಿ, ಹಾಗೂ ಯಶಸ್ವೀ ವ್ಯಪಾರವನ್ನು ಸಮರ್ಥವಾಗಿ ನಡೆಸುವ ಮಾತನ್ನು ಆಡುತ್ತಿರುತ್ತಾರೆ. ಹೀಗಾಗಿ ಯಾವುದೇ ವಿಚಾರವನ್ನೋ-ವ್ಯಾಪಾರವನ್ನೋ ಪರಿಗಣಿಸುವಾಗ ಅದರ ಭವಿಷ್ಯವೇನು ಆ ವ್ಯಾಪಾರದಿಂದ ಬರುವ ಲಾಭಾಂಶವೇನು - ಹಾಗೂ ಅದನ್ನು ಸಾಧಿಸಲು ಹಾಕಿಕೊಳ್ಳಬೇಕಾದ ಯೋಜನೆಗಳೇನು ಎನ್ನುವ ವಿಚಾರಗಳನ್ನು ಮಥಿಸುತ್ತಲೇ ಇರುತ್ತೇವೆ. ಹೆಚ್ಚು ಕೆಲಸಕ್ಕೆ ಹೆಚ್ಚು ಹಣ - ಸಮರ್ಥ ಕೆಲಸಕ್ಕೆ ಕೊಡಬೇಕಾದ ಪ್ರೋತ್ಸಾಹ ಹೀಗೆಲ್ಲಾ ಮ್ಯಾನೇಜ್ಮೆಂಟಿನ ಥಿಯರಿಗಳನ್ನು ಒಗೆಯುತ್ತಿರುವ ವ್ಯಾಪಾರದ ಮಕ್ಕಾದಿಂದ ರುದ್ರಮಾತಾ ಅನ್ನುವ ಪುಟ್ಟ ಹೋಬಳಿಗೆ ಹೋದರೆ ಕಾಣಬಹುದಾದ ಸತ್ಯವೇ ಬೇರೆ ರೀತಿಯದ್ದು!





ವಾಡಾಗಳ ಅರಗಿನರಮನೆ

ನಿರುನಾ ಗ್ರಾಮದಲ್ಲಿ ಮಾತ್ರವಲ್ಲ ಇಡೀ ಕಛ್ ಪ್ರಾಂತದಲ್ಲೇ ನಿಜಕ್ಕೂ ಪ್ರತಿಭಾವಂತ ಕಲಾವಿದರಿದ್ದಾರೆ. ಆದರೆ ಈ ಬಾರಿ ನಾವು ರೋಗನ್ ಕಲೆಯಿಂದ ಮುಂದಕ್ಕೆ ಹೋಗಿ ಮರ ಮತ್ತು ಅರಗಿನ ಕಲಸ ಮಾಡುವ ’ವಾಡಾ’ಬುಡಕಟ್ಟಿನ ಜನಗಳ ಬಗ್ಗೆ ಯೋಚಿಸೋಣ. ವಾಡಾ ಬುಡಕಟ್ಟಿನವರು ಮೂಲಭೂತವಾಗಿ ಅಲೆಮಾರಿಗಳು, ಅರಣ್ಯ ಪ್ರಾಂತದಲ್ಲಿ ತಿರುಗಾಡುತ್ತಿರುವ ಈ ಬುಡಕಟ್ಟಿನ ಜನಾಂಗಕ್ಕೆ ಒಂದೇ ಜಾಗದಲ್ಲಿದ್ದು ಕೆಲಸ ಮಾಡುವುದು ತುಸು ಮುಜುಗರದ ಮಾತೇ. ಆದರೆ ಅರಣ್ಯ ಪ್ರದೇಶದಲ್ಲಿರುವುದರಿಂದ ಮರಗಳ ಬಗೆಗಿನ ಅವರ ಜ್ಞಾನ ಅದ್ಭುತವಾದದ್ದು. ಅವರ ಕರಕುಶಲತೆಯನ್ನು ನೋಡಿಯೇ ನಂಬಬೇಕು. ಆದರೆ ಕಲಾವಿದರಿಗೆ ತಮ್ಮ ಕಲೆಯ ಆಧಾರವಾಗಿಯೇ ಜೀವನ ಹೊರೆಯುವುದು ಸಾಧ್ಯವಿಲ್ಲ ಎನ್ನುವುದನ್ನು ನಿರೂಪಿಸಲೋ ಎಂಬಂತೆ ಇವರುಗಳು ಸೈಡ್ ಬಿಜನೆಸ್ ಆಗಿ ಸಾರಾಯಿ ತಯಾರಿಸುವ ಕೆಲಸವನ್ನೂ ಮಾಡುತ್ತಾರೆ.







ಸೆಪ್ಟೆಂಬರ್ ೫ ರ ವಿಚಾರಗಳು

ಸುಮಾರು ಹದಿನೈದು ವರ್ಷಕಾಲ ಮೇಷ್ಟರ ಕೆಲಸ ಮಾಡಿದಾಗ ಸಹಜವಾಗಿಯೇ ಒಂದು ಸೀನಿಯಾರಿಟಿ ಬಂದುಬಿಡುತ್ತದೆ. ಜೊತೆಗೆ "ನಾನು ಮೇಷ್ಟರ ಕೆಲಸ ಪ್ರಾರಂಭಮಾಡಿದಾಗ ವಿದ್ಯಾರ್ಥಿಗಳು ಎಷ್ಟು ಮರ್ಯಾದೆಯಿಂದ ಇದ್ದರು.. ಈಗ ಕಾಲ ಬದಲಾಗಿದೆ" ಎಂದು ಕರುಬುವ ಪರಿಸ್ಥಿತಿ ಉಂಟಾಗಿದ್ದರೆ ಆ ಮೇಷ್ಟರಿಗೆ ಮಧ್ಯವಯಸ್ಸು ದಾಟುತ್ತಿದೆ ಅನ್ನುವುದು ಖಾತರಿ. ಆದ್ದರಿಂದಲೇ ವಿದ್ಯಾರ್ಥಿಗಳಿಗೂ ಅವರ ಗುರುಗಳಿಗೂ ಇರುವ ಸಂಬಂಧ ಕಾಲಕ್ಕೆ ತಕ್ಕಂತೆ ಬದಲಾಗುತ್ತದೆ ಅನ್ನುವುದು ಎಷ್ಟು ನಿಜವೋ ವ್ಯಕ್ತಿಯ ಸಮಯ, ವಯಸ್ಸಿಗೆ ತಕ್ಕಂತೆ ಬದಲಾಗುತ್ತದೆ ಅನ್ನುವುದೂ ಅಷ್ಟೇ ನಿಜ. ಆದರೂ ನಾವುಗಳು "ಇಂದಿನ ವಿದ್ಯಾರ್ಥಿಗಳೇ ಬೇರೆ" ಎಂದು ಕರುಬುವುದನ್ನು ನಮ್ಮ ಭವ್ಯ ಚರಿತ್ರೆಯಲ್ಲಿ ಬದುಕುವುದನ್ನೂ ಬಿಡುವುದಿಲ್ಲ.





ರೋಗನ್ ಕಲೆ, ಎಷ್ಟು ಬೆಲೆ?

ಗುಜರಾತಿನ ಕಛ್ ಪ್ರಾಂತದಲ್ಲಿ ಆದ ೨೦೦೧ರ ಭೂಕಂಪದ ಕಂಪನಗಳು ಈಗ್ಗೆ ಕಡಿಮೆಯಾಗುತ್ತಾ ಬಂದಿದೆಯೇನೋ. ಭೂಕಂಪವಾದ ನಂತರ ವಿಶ್ವದ ವಿವಿಧೆಡೆಗಳಿಂದ ಕಛ್ ಪ್ರಾಂತಕ್ಕೆ ಅನೇಕ ರೀತಿಯ ಅನುದಾನಗಳು ಬಂದುವು. ನಾನಾ ರೀತಿಯ ಸಂಸ್ಥೆಗಳು ಭೂಕಂಪದ ತಕ್ಷಣದ ದಿನಗಳಲ್ಲಿ ಆ ಜಿಲ್ಲೆಗೆ ಬಂದು ಗ್ರಾಮಗಳನ್ನು ದತ್ತು ತೆಗೆದು ಆ ಪ್ರಾಂತದ ಪುನರ್ನಿರ್ಮಾಣಕ್ಕೆ ಕೈಕೈ ಕೂಡಿಸಿದುವು. ಆದರೆ ಎಂಟು ವರ್ಷಗಳ ನಂತರ ಆ ಪ್ರಾಂತದ ಜನ ಹೇಗೆ ಜೀವಿಸುತ್ತಿದ್ದಾರೆ? ಭೂಕಂಪದಿಂದ ತತ್ತರಿಸಿದ ಹಲವು ಸಮುದಾಯಗಳು ಈಗ ಜೀವನ ಹೇಗೆ ನಡೆಸುತ್ತಿವೆ? ಈ ಎಲ್ಲ ಸಹಾಯ ಮತ್ತು ಒಳ್ಳೆಯತನದ ಫಲಿತವಾಗಿ ಏನಾದರೂ ಆಗಿದೆಯೇ ಅನ್ನುವುದು ಕುತೂಹಲದ ಮಾತು.






ಮ್ಯಾಗ್ಸಸೇ ಪ್ರಶಸ್ತಿ ಪಡೆದ ದೀಪ್ ಜೋಶಿ ಮತ್ತು ಅವರು ಬೆಳೆಸಿದ ಪ್ರದಾನ್ ಸಂಸ್ಥೆ


ಏಶಿಯಾದ ನೊಬೆಲ್ ಎಂದೇ ಪ್ರಖ್ಯಾತವಾಗಿರುವ ರ್‍ಯಾಮನ್ ಮ್ಯಾಗಸಸೇ ಪುರಸ್ಕಾರವನ್ನು ಈ ಬಾರಿ ಪಡೆದವರಲ್ಲಿ ಭಾರತೀಯ ದೀಪ್ ಜೋಶಿ ಸಹ ಸೇರಿದ್ದಾರೆ. ಎಂದೂ ತಮ್ಮ ಧ್ವನಿಯನ್ನು ಏರಿಸದ, ಬೆಳ್ಳಿಗಡ್ಡಧಾರಿ, ಒಂದು ಥರದಲ್ಲಿ ಋಷಿಯ ಅವತಾರದಂತಿರುವ ಹಿರಿಯ ದೀಪ್‍ಗೆ ಈ ಪುರಸ್ಕಾರ ಬಂದದ್ದು ಸಹಜವೂ ಸಮರ್ಪಕವೂ ಆಗಿದೆ. ಯಾವ ಆರ್ಭಟವೂ ಇಲ್ಲದೇ, ಎಲ್ಲವನ್ನೂ ಒಂದು ಸ್ಪಷ್ಟ ಆಲೋಚನೆ, ದೂರದರ್ಶಿತ್ವದಿಂದ ಯೋಜನಾಬದ್ಧವಾಗಿ ಕಾರ್ಯರೂಪಕ್ಕಿಳಿಸಿರುವ ದೀಪ್‍ ಒಂದು ರೀತಿಯಿಂದ ಅಜಾತ ಶತ್ರು. ಅವರ ಬಗ್ಗೆ ಕುಹಕದ ಧ್ವನಿಯಾಗಲೀ, ಬೇಸರದ ಧ್ವನಿಯಾಗಲೀ ನಾನು ಈ ವರೆಗೆ ಕೇಳಿಯೇ ಇಲ್ಲ. ಆದರೆ ದೀಪ್ ಜೋಶಿಯ ಮಹತ್ವವನ್ನು ಅರ್ಥಮಾಡಿಕೊಳ್ಳಲು ನಾವು ಆತನ ಜೀವನದಲ್ಲಿ ಹಣಕಿಹಾಕದೇ ಆತನ ಕೆಲಸ ಮತ್ತು ಆತ ನಡೆಸಿದ ಸಂಸ್ಥೆಯ ನಿಲುವನ್ನು ಅರ್ಥಮಾಡಿಕೊಳ್ಳುವುದರಲ್ಲಿಯೇ ಮ್ಯಾಗಸಸೆಯ ಮಹತ್ವವೂ ಇದೆ.






ಒಳಿತು ಮಾಡಿ ಲಾಭ ಗಳಿಸುವ ವ್ಯಾಪಾರ: ಮೂರು ಮಾದರಿಗಳು

ಕೆಲವು ವ್ಯಾಪಾರಗಳು ನಾವು ದಿನೇ ದಿನೇ ನೋಡುವ ವ್ಯಾಪಾರಗಳಿಗಿಂತ ಭಿನ್ನವಾಗಿರುತ್ತವೆ. ವ್ಯಾಪಾರದ ಉದ್ದೇಶವೇನೋ ಲಾಭ ಗಳಿಸುವುದು. ಆದರೆ ಲಾಭ ಗಳಿಸುವ ಪ್ರಕ್ರಿಯೆಯಲ್ಲಿ ಒಳಿತನ್ನೂ ಮಾಡಲು ಸಾಧ್ಯವಾದರೆ? ಅನೇಕ ಬಾರಿ ಈ ವ್ಯಾಪಾರಗಳ ಉದ್ದೇಶ ನಿಜಕ್ಕೂ ಒಳಿತನ್ನು ಮಾಡಬೇಕೆನ್ನುವುದೇ ಅಥವಾ ಒಳ್ಳೆಯ ಹೆಸರು ಬರಲಿ ಅನ್ನುವ ಸೀಮಿತ ಉದ್ದೇಶದಿಂದ ಇಂಥ ವ್ಯಾಪಾರವನ್ನು ಮಾಡುತ್ತಿದ್ದಾರೆಯೇ ಅನ್ನುವ ವಿಷಯ ಗ್ರಹಿಸುವುದು ಕಷ್ಟವಾಗುತ್ತದೆ. ಬಡವರನ್ನು ಗ್ರಾಹಕರನ್ನಾಗಿ ನೋಡುವುದೂ ಒಂದು ವಿಕಾಸದ ಪರಿಕಲ್ಪನೆಯ ವಿಚಾರಧಾರೆಯ ಸೆಲೆ. ಮ್ಯಾನೇಜ್‍ಮೆಂಟ್ ಗುರು ಎನ್ನಿಸಿಕೊಳ್ಳುವ ಸಿ,ಕೆ.ಪ್ರಹ್ಲಾದ್ ಇದನ್ನು ಪಿರಮಿಡ್ ಕೆಳಸ್ಥರದಲ್ಲಿರುವ ಖಜಾನೆ ಎಂದು ಕರೆದು ಬಡವರನ್ನು ಅನೇಕ ದೊಡ್ಡ ಕಂಪನಿಗಳ ಗ್ರಾಹಕರನ್ನಾಗಿಸುವುದರಲ್ಲಿ ಸಫಲರಾಗಿದ್ದಾರೆ! ಆದರೆ ಲಾಭವನ್ನೂ ಒಳಿತನ್ನೂ ಮಾಡುವುದು ಎಷ್ಟರ ಮಟ್ಟಿಗೆ ಸಾಧ್ಯ?




ಮರೆತೇನೆಂದರು ಮರೆಯಲಿ ಹ್ಯಾಂಗ?

ನಮ್ಮ ದೇಶದಲ್ಲಿ ಮೈಕ್ರೋಫೈನಾನ್ಸ್ ಅಂದಕೂಡಲೇ ಕಾರಣವಿರಲೀ ಇಲ್ಲದಿರಲೀ ಮುಂಚೂಣಿಯಲ್ಲಿ ನಿಲ್ಲುವ ಹೆಸರು ಎಸ್.ಕೆ.ಎಸ್ ಎನ್ನುವ ಸಂಸ್ಥೆಯದ್ದು. ಹಾಗೂ ಅದರ ಸಂಸ್ಥಾಪಕ ಅನ್ನಿಸಿಕೊಳ್ಳುವ ವಿಕ್ರಂ ಆಕುಲಾರ ಹೆಸರು. ಎಸ್.ಕೆ.ಎಸ್ [ಸ್ವಯಂ ಕೃಷಿ ಸಂಘಂ] ಬಗ್ಗೆ ಮೊದಲಿಗೆ ಯೋಚಿಸಿದ್ದು ಅದನ್ನು ಕಾರ್ಯರೂಪಕ್ಕೆ ಇಳಿಸಿದ್ದು ವಿಕ್ರಂ ಅನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಪುಟ್ಟದಾಗಿ ಪ್ರಾರಂಭಿಸಿ ಇಂದು ದೇಶಾದ್ಯಂತ ಹಬ್ಬಿರುವ ಈ ಸಂಸ್ಥೆ ದೇಶದಲ್ಲಿಯೇ ಅತ್ಯಂತ ದೊಡ್ಡ ಮೈಕ್ರೊಫೈನಾನ್ಸ್ ಸಂಸ್ಥೆಯಾಗಿದೆ. ವಿಕ್ರಂಗೂ ಈ ಸಂಸ್ಥೆ ಸಾಕಷ್ಟು ಖ್ಯಾತಿಯನ್ನು ತಂದು ನೀಡಿದೆ. ಅಮೆರಿಕದಿಂದ ಎಲ್ಲವನ್ನೂ ಬಿಟ್ಟು ಭಾರತಕ್ಕೆ ಬಂದು ಬಡವರಿಗೆ ಸೇವೆಯನ್ನೊದಗಿಸುವ ಕೆಲಸ ಮಾಡುತ್ತಿರುವುದಕ್ಕೆ ಟೈಂ ಪತ್ರಿಕೆಯ ನೂರು ಜನರ ಯಾದಿಯಲ್ಲಿ, ವೀಕ್ ಪತ್ರಿಕೆಯ ೨೦ ಮಹತ್ವದ ಭಾರತೀಯರ ಯಾದಿಯಲ್ಲಿ ವಿಕ್ರಂ ಹೆಸರು ದಾಖಲಾದದ್ದಲ್ಲದೇ ದೊಡ್ಡ ವಾರ್ತಾವಾಹಿನಿಗಳಲ್ಲಿ ಆತನ ಸಂದರ್ಶನಗಳೂ ಬಂದಿವೆ. ಆದರೂ ವಿಕ್ರಂ ೧೯೯೭ರಲ್ಲಿ ಪ್ರಾರಂಭಿಸಿ, ಇಷ್ಟೆಲ್ಲಾ ಖ್ಯಾತಿಯನ್ನು ನೀಡಿದ ಸಂಸ್ಥೆಯಲ್ಲಿನ ತಮ್ಮ ಬಹುತೇಕ ಹೂಡಿಕೆಯನ್ನು ಕಳೆದ ವರ್ಷವಷ್ಟೇ ಮಾರಿ ಸಂಸ್ಥೆಯ ದಿನನಿತ್ಯದ ಕಾರ್ಯವನ್ನು ಹೊಸ ಹೂಡಿಕೆದಾರರಿಗೆ ಒಪ್ಪಿಸಿ ಕೈತೊಳೆದುಕೊಂಡರು.




ಆತ್ಮಹತ್ಯೆಗಳು: ರೈತರೇ ಏಕೆ?


ಒಂದು ವ್ಯಾಪಾರ ವಿಫಲಗೊಂಡಾಗ ಆ ವ್ಯಾಪಾರಿ ಏನು ಮಾಡಬಹುದು? ಸ್ವಲ್ಪ ಯೋಚಿಸಿ ನೋಡಿದರೆ ನಮಗೆ ಅನೇಕ ಉತ್ತರಗಳು ಕಾಣಸಿಗುತ್ತವೆ. ಆ ವ್ಯಾಪಾರಿ ಹಳೆಯ ವ್ಯಾಪಾರವನ್ನು ಮುಚ್ಚಿ ಹೊಸ ವ್ಯಾಪಾರಕ್ಕೆ ಕಾಲಿಡಬಹುದು, ವ್ಯಾಪಾರವನ್ನೇ ಬಿಟ್ಟು ಹೊಸ ನೌಕರಿಯನ್ನು ಹಿಡಿಯಬಹುದು, ವಿಫಲಗೊಂಡ ವ್ಯಾಪಾರವನ್ನು ಯಾರಿಗಾದರೂ ಮಾರಿ ಸುಮ್ಮನಾಗಬಹುದು, ಆದರೆ ವಿಫಲ ವ್ಯಾಪಾರಿಗಳು ತಮ್ಮ ಪ್ರಾಣ ಕಳೆದುಕೊಳ್ಳುವುದನ್ನು ನಾವು ನೋಡುವುದಿಲ್ಲ. ಎಲ್ಲೋ ಆಗಾಗ ವ್ಯಾಪಾರಿಗಳು ಸಾಲದ ಹೊರೆಯನ್ನು ತಾಳಲಾರದೇ ಪ್ರಾಣ ತೆಗೆದುಕೊಂಡದ್ದನ್ನು ನಾವು ಕಾಣುತ್ತೇವಾದರೂ ಈ ಆತ್ಮಹತ್ಯೆಗಳ ಸಂಖ್ಯೆ ರೈತರ ಆತ್ಮಹತ್ಯೆಗಳ ಸಂಖ್ಯೆಗೆ ಹೋಲಿಸಿದರೆ ತೀರಾ ಕಡಿಮೆಯೇ.








ಯಂತ್ರ-ಮಾನವ ದ್ವಂದ್ವ!

ಹಲವು ವರ್ಷಗಳ ಹಿಂದೆ ಕೆನಡಾದ ಕ್ಯುಬೆಕ್ ಪ್ರಾಂತಕ್ಕೆ ಅಲ್ಲಿನ ಸಹಕಾರ ಸಂಘಗಳನ್ನು ಅಧ್ಯಯನ ಮಾಡಲು ಹೋಗಿದ್ದೆ. ಆಗ ಫ್ರಾಂಮ್ಟನ್ ಅನ್ನುವ ಒಂದು ಪುಟ್ಟ ಹಳ್ಳಿಯಲ್ಲಿದ್ದ ಸಹಕಾರ ಸಂಘವನ್ನು ಭೇಟಿಮಾಡುವ ಅವಕಾಶ ಸಿಕ್ಕಿತ್ತು. ಆ ಹಳ್ಳಿಯ ಸಹಕಾರ ಸಂಘ [ಕೇಸ್ ಪಾಪ್ಯುಲೇರ್]ದ ಮ್ಯಾನೇಜರ್ ಒಂದು ರೀತಿಯ ದುಃಖದಲ್ಲಿದ್ದ. ನಮ್ಮ ದೇಶದ ಹಾಗೆಯೇ ಮೂರು ಮಜಲಿನ ಸಹಕಾರೀ ವ್ಯವಸ್ಥೆಯಲ್ಲಿ ಫ್ರಾಂಮ್ಟನ್ ಹಳ್ಳಿಸ್ಥರದ ಸಹಕಾರೀ ಸಂಸ್ಥೆ. ಅದರ ಮೇಲೆ ಹಲವು ಪ್ರಾಂತೀಯ ಸಂಸ್ಥೆಗಳ ಒಕ್ಕೂಟ ಹಾಗೂ ಆಮೇಲೆ ರಾಜ್ಯಸ್ಥರದ ಸಹಕಾರೀ ಬ್ಯಾಂಕು. ಎಲ್ಲವೂ ನಮ್ಮಂತೆಯೇ. ವ್ಯತ್ಯಾಸವಿಷ್ಟೇ - ಒಟ್ಟಾರೆ ಆ ಸಹಕಾರ ವ್ಯವಸ್ಥೆ ಹೆಚ್ಚಿನ ಖರ್ಚಿನದ್ದಾಗಿದ್ದು ಲಾಭವನ್ನು ಮಿಕ್ಕ ಬ್ಯಾಂಕುಗಳಷ್ಟು ಆರ್ಜಿಸುತ್ತಿರಲಿಲ್ಲ. ಅದಕ್ಕಾಗಿ ವ್ಯವಸ್ಥೆಯಲ್ಲಿ ಆಂತರಿಕ ಅಧ್ಯಯನಗಳೂ ರಣನೀತಿಗಳೂ ತಯಾರಾಗತೊಡಗಿದ್ದುವು.





ನಾ ಹೇಗೆ ಬಡವನು ನಾ ಹೇಗೆ ಪರದೇಶಿ..


ಅಭಿವೃದ್ಧಿಯ ಮಾತನಾಡುವಾಗಲೆಲ್ಲಾ ಬಡತನದ ರೇಖೆಯ ಮಾತು ಸಹಜವಾಗಿ ಬರುತ್ತದೆ. ಬಡತನದ ರೇಖೆಯ ಮೇಲಿರುವ ಜನಸಂಖ್ಯೆ ಪ್ರಮಾಣ ಅಭಿವೃದ್ಧಿಯ ಅನೇಕ ಮಾಪಕಗಳಲ್ಲಿ ಒಂದು. ಭಾರತದಲ್ಲಿ ಈ ರೇಖೆಯನ್ನು ನಿರ್ಧರಿಸಲು ಕ್ಯಾಲೋರಿಫಿಕ್ ವ್ಯಾಲ್ಯೂ ಆಧಾರದ ಮೇಲೆ [ಅಂದರೆ ಇಂತಿಷ್ಟು ಶಕ್ತಿಯನ್ನು ಆರ್ಜಿಸಲು ಬೇಕಾದ ಆಹಾರವನ್ನು ಕೊಳ್ಳಲು ಆಗುವ ಖರ್ಚಿನ ಆಧಾರದ ಮೇಲೆ] ವಾರ್ಷಿಕ ಆದಾಯವನ್ನು ನಿಗದಿ ಮಾಡಲಾಗಿದೆ. ಪ್ರತೀ ವರ್ಷ ಸರಕಾರ ಇಂತಿಷ್ಟು ಮಂದಿ ಬಡತನದ ರೇಖೆಯನ್ನು ಉಲ್ಲಂಘಿಸಿದ್ದಾರೆಂದು ಘೋಷಿಸಿ ತನ್ನ ಬೆನ್ನನ್ನು ತಟ್ಟಿಕೊಳ್ಳುತ್ತದೆ. ಸರಕಾರದ ಯಾವುದೇ ಅಂಕಿ ಅಂಶಗಳನ್ನು ಅನುಮಾನದಿಂದ ನೋಡುವ ಜನ ಈ ಮಾಪನವನ್ನು ಸಹಜವಾಗಿ ಪ್ರಶ್ನಿಸುತ್ತಾರೆ. ವಿಶ್ವದಾದ್ಯಂತ ಬಡತನವನ್ನು ಅಳೆಯಲು [ಸ್ಥಳೀಯ ಹಣದ ಖರೀದಿಯ ಶಕ್ತಿಯನುಸಾರ] ದಿನಕ್ಕೊಂದು ಡಾಲರ್ ಸಮಾನವಾದ ಆದಾಯವನ್ನು ಮಾಪಕವನ್ನಾಗಿ ಇಟ್ಟುಕೊಳ್ಳಲಾಗಿದೆ. ಈಗೀಗ ಇದನ್ನು ಎರಡು ಹಂತಗಳಲ್ಲಿ ಅಳೆಯುವುದೂ ಉಂಟು. ದಿನಕ್ಕೊಂದು ಡಾಲರ್‌ಗಿಂತ ಕಡಿಮೆ ಆರ್ಜಿಸುವ ಅತೀ-ಬಡವರು ಹಾಗೂ ಎರಡು ಡಾಲರ್‌ವರೆಗೆ ಆದಾಯವಿರುವ ಬಡವರು.







ವಲಸೆ ಕಾರ್ಮಿಕರ ಹಣಪಾವತಿಯ ತಂತ್ರಜ್ಞಾನ


ಕಳೆದ ವರ್ಷ ನಾವುಗಳು ಕ್ಯಾತದೇವರಗುಡಿಯ ಅರಣ್ಯದ ಪ್ರಾಂತಕ್ಕೆ ಪ್ರವಾಸ ಹೋದಾಗ ಜಂಗಲ್ ಲಾಡ್ಜಸ್‍ನ ಗೈಡ್ ಕಂ ಡ್ರೈವರ್ ಹರ್ ಬಹದ್ದೂರ್ ಥಾಪಾ ಜೊತೆ ಮಾತು ಬೆಳೆಸಿದ್ದೆ. ಥಾಪಾ ಹಿಮಾಚಲ ಪ್ರದೇಶದವನು, ಭಾರತೀಯ ಸೇನೆಯಲ್ಲಿದ್ದು ಯಾವುದೋ ಲಕ್-ಬೈ-ಚಾನ್ಸ್ ಆಗಿ ಇಲ್ಲಿ ಕೆಲಸ ಸಿಕ್ಕಿತ್ತಂತೆ. ದೂರದ ಹಿಮಾಚಲಕ್ಕೆ ಅವನು ಹಣ ಪಾವತಿಸುವುದು ಹೇಗೆ ಅನ್ನುವ ಕುತೂಹಲ ನನ್ನಲ್ಲಿತ್ತು. ವಲೆಸೆ ಹೋಗುವ ಕೆಲಸಗಾರರಿಗೆ ಇದು ದೊಡ್ಡ ಸವಾಲೆನ್ನುವುದನ್ನು ನಾವುಗಳು ಅನೇಕ ಅಧ್ಯಯನಗಳಲ್ಲಿ ಕಂಡುಕೊಂಡಿದ್ದೆವು. ಸಾಮಾನ್ಯವಾಗಿ ವಲೆಸೆ ಹೋಗುವ ಕೆಲಸಗಾರರು ತಮ್ಮ ಮುಕದ್ದಂ [ಮೇಸ್ತ್ರಿಗಳ] ಮೂಲಕವೇ ಎಲ್ಲ ವ್ಯವಹಾರವನ್ನೂ ಮಾಡುತ್ತಾರೆ. ಆದರೆ ಮುಕದ್ದಂ ಇಲ್ಲದ ಕೆಲಸದಲ್ಲಿರುವ ಈತ ಕರ್ನಾಟಕದಲ್ಲಿ ಸಂಪಾದಿಸುವ ಹಣವನ್ನು ಹಿಮಾಚಲಕ್ಕೆ ತಲುಪಿಸುವುದೂ ಅಥವಾ ಸೂರತ್‍ನ ವಜ್ರದ ಯೂನಿಟ್ಟುಗಳಲ್ಲಿ ಕೆಲಸ ಮಾಡುವ ಒಡಿಯಾ ಕೆಲಸಗಾರರು ಒರಿಸ್ಸಾಗೆ ಹಣ ತಲುಪಿಸುವುದೂ ಒಂದು ಸವಾಲೇ ಆಗಿತ್ತು. ಕಾರಣಗಳು ಅನೇಕ.